AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Finale: ಬಿಗ್ ಬಾಸ್ ವಿನ್ನರ್ ಹೆಸರು ಲೀಕ್ ಆಗದಿರಲು ಕಲರ್ಸ್ ಕನ್ನಡದಿಂದ ಹೊಸ ಪ್ಲ್ಯಾನ್

ಇತ್ತೀಚೆಗೆ ಸೋಶಿಯಲ್ ಮೀಡಿಯಾದ ವ್ಯಾಪ್ತಿ ಹೆಚ್ಚಿದೆ. ವಿಶ್ವದ ಯಾವುದೇ ಮೂಲೆಯಲ್ಲಿ ನಡೆದ ವಿಚಾರಗಳು ಎಲ್ಲ ಕಡೆಗಳಲ್ಲಿ ಕ್ಷಣಮಾತ್ರದಲ್ಲಿ ಹಬ್ಬುತ್ತದೆ. ಬಿಗ್ ಬಾಸ್ ವಿಚಾರದಲ್ಲೂ ಹೀಗೆ ಆಗುತ್ತಿತ್ತು.

Bigg Boss Kannada Finale: ಬಿಗ್ ಬಾಸ್ ವಿನ್ನರ್ ಹೆಸರು ಲೀಕ್ ಆಗದಿರಲು ಕಲರ್ಸ್ ಕನ್ನಡದಿಂದ ಹೊಸ ಪ್ಲ್ಯಾನ್
ಸುದೀಪ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 31, 2022 | 4:40 PM

Share

‘ಬಿಗ್ ಬಾಸ್​ ಕನ್ನಡ ಸೀಸನ್ 9’ರ (BBk 9) ಫಿನಾಲೆ ನಡೆಯುತ್ತಿದೆ. ಯಾರು ಕಪ್ ಎತ್ತಲಿದ್ದಾರೆ ಎನ್ನುವ ವಿಚಾರ ಇಂದು (ಡಿಸೆಂಬರ್ 31) ರಾತ್ರಿ ತಿಳಿಯಲಿದೆ. ‘ಬಿಗ್ ಬಾಸ್’ ಫಿನಾಲೆಯಲ್ಲಿ ದೀಪಿಕಾ ದಾಸ್, ರೂಪೇಶ್ ರಾಜಣ್ಣ, ರಾಕೇಶ್ ಅಡಿಗ ಹಾಗೂ ರೂಪೇಶ್ ಶೆಟ್ಟಿ (Roopesh Shetty) ಇದ್ದಾರೆ. ಫಿನಾಲೆಯಲ್ಲಿದ್ದ ದಿವ್ಯಾ ಈಗಾಲೇ ಔಟ್ ಆಗಿದ್ದಾರೆ. ಈಗ ನಾಲ್ವರಲ್ಲಿ ಒಬ್ಬರು ಕಪ್ ಎತ್ತಲಿದ್ದಾರೆ. ಈ ಮಧ್ಯೆ ಬಿಗ್ ಬಾಸ್ ವಿನ್ನರ್ ಹೆಸರು ಲೀಕ್ ಆಗದೆ ಇರಲು ಕಲರ್ಸ್ ಕನ್ನಡ ವಾಹಿನಿ ಹೊಸ ಪ್ಲ್ಯಾನ್ ರೂಪಿಸಿದೆ.

ಇತ್ತೀಚೆಗೆ ಸೋಶಿಯಲ್ ಮೀಡಿಯಾದ ವ್ಯಾಪ್ತಿ ಹೆಚ್ಚಿದೆ. ವಿಶ್ವದ ಯಾವುದೇ ಮೂಲೆಯಲ್ಲಿ ನಡೆದ ವಿಚಾರಗಳು ಎಲ್ಲ ಕಡೆಗಳಲ್ಲಿ ಕ್ಷಣಮಾತ್ರದಲ್ಲಿ ಹಬ್ಬುತ್ತದೆ. ಬಿಗ್ ಬಾಸ್ ವಿಚಾರದಲ್ಲೂ ಹೀಗೆ ಆಗುತ್ತಿತ್ತು. ಯಾರು ಬಿಗ್ ಬಾಸ್ ಗೆದ್ದರು ಎಂಬ ವಿಚಾರ ಲೀಕ್ ಆಗಿ ಕ್ಷಣಮಾತ್ರದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿತ್ತು. ಇದನ್ನು ತಪ್ಪಿಸಲು ಕಲರ್ಸ್​ ಕನ್ನಡ ವಾಹಿನಿ ಪ್ಲ್ಯಾನ್ ಮಾಡಿದೆ.

ಸಾಮಾನ್ಯವಾಗಿ ಬಿಗ್ ಬಾಸ್ ವೀಕೆಂಡ್ ಶೂಟ್ ಒಂದೇ ದಿನ ನಡೆಯುತ್ತದೆ. ಅದನ್ನು ಟಿವಿಯಲ್ಲಿ ಎರಡು ದಿನ ಪ್ರಸಾರ ಮಾಡಲಾಗುತ್ತದೆ. ಹೀಗಾಗಿ, ಎಲಿಮಿನೇಟ್ ಆದವರು ಯಾರು ಎಂಬ ಮಾಹಿತಿ ಒಂದು ದಿನ ಮೊದಲೇ ಲೀಕ್ ಆಗುತ್ತದೆ. ಜತೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತದೆ. ಆದರೆ, ಈ ಬಾರಿ ಹಾಗೆ ಆಗುತ್ತಿಲ್ಲ.

ಇದನ್ನೂ ಓದಿ
Image
Divya Uruduga: ಬಿಗ್ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಮಾಡಿದ್ರು ಅಪರೂಪದ ದಾಖಲೆ  
Image
Divya Uruduga: ಬಿಗ್ ಬಾಸ್ ಫಿನಾಲೆ ರೇಸ್​​ನಿಂದ ದಿವ್ಯಾ ಉರುಡುಗ ಔಟ್; ಹಿನ್ನಡೆಗೆ ಕಾರಣವಾಯ್ತು ಈ ಅಂಶ
Image
BBK 9 Contestant List: ಈ ಸೀಸನ್​ಗೆ ಎಂಟ್ರಿ ಕೊಟ್ಟಿದ್ದ 18 ಸ್ಪರ್ಧಿಗಳು ಇವರೇ ನೋಡಿ; ಇಲ್ಲಿದೆ ಫೋಟೋ-ವಿವರ
Image
‘ಕ್ಯಾರೆಕ್ಟರ್ ಹಾಳಾಗುತ್ತೆ ಅಂತ ಹೆದರಿಸಿದ್ರು’; ಎಚ್ಚರಿಕೆ ಬಗ್ಗೆ ಸುದೀಪ್ ಎದುರು ಹೇಳಿಕೊಂಡ ರೂಪೇಶ್ ಶೆಟ್ಟಿ

ಬಿಗ್ ಬಾಸ್ ಫಿನಾಲೆ ಡಿಸೆಂಬರ್ 30 ಹಾಗೂ 31ರಂದು ಫಿನಾಲೆ ನಡೆಯುತ್ತಿದೆ. ಈ ಬಾರಿ ಫಿನಾಲೆ ಶೂಟ್​ನ ಒಂದೇ ದಿನ ಮಾಡುತ್ತಿಲ್ಲ. ಅದರ ಬದಲು ಎರಡು ದಿನ ಶೂಟ್ ಮಾಡಲಾಗುತ್ತಿದೆ. ಶುಕ್ರವಾರ, ಶನಿವಾರ ಎರಡೂ ದಿನ ಫಿನಾಲೆ ಶೂಟ್ ಮಾಡಲಾಗುತ್ತಿರುವುದರಿಂದ ಫಿನಾಲೆ ವಿನ್ನರ್ ಹೆಸರು ಲೀಕ್ ಆಗಿ ವೈರಲ್ ಆಗಲು ಕೊಂಚ ಸಮಯ ಹಿಡಿಯಲಿದೆ.

ಇದನ್ನೂ ಓದಿ: Divya Uruduga: ಬಿಗ್ ಬಾಸ್​ ಫಿನಾಲೆಯಿಂದ ಹೊರಬಿದ್ದ ದಿವ್ಯಾ ಉರುಡುಗಗೆ ಸಿಕ್ಕ ಹಣವೆಷ್ಟು?

ಇಂದು ರಾತ್ರಿ ವೇಳೆಗೆ ಬಿಗ್ ಬಾಸ್ ವಿನ್ನರ್ ಯಾರು ಎಂಬ ವಿಚಾರ ತಿಳಿಯಲಿದೆ. ರೂಪೇಶ್​ ಶೆಟ್ಟಿ ಹಾಗೂ ರಾಕೇಶ್ ಅಡಿಗ ಇಬ್ಬರಲ್ಲಿ ಒಬ್ಬರು ಕಪ್ ಗೆಲ್ಲಬಹುದು ಎಂದು ವೀಕ್ಷಕರು ಊಹಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!