AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್’ ಹೆಸರನ್ನು ದುರ್ಬಳಕೆ ಮಾಡಿಕೊಂಡ ರಾಕೇಶ್​-ಅನುಪಮಾ; ಎಲ್ಲರಿಗೂ ಶಿಕ್ಷೆ

ಬಿಗ್ ಬಾಸ್ ಆದೇಶ ಕೊಟ್ಟರೆ ಮಾತ್ರ ಅದನ್ನು ಹೇಳಬೇಕು. ಇಲ್ಲವಾದಲ್ಲಿ ಸುಖಾಸುಮ್ಮನೆ ಬಿಗ್ ಬಾಸ್ ಹೆಸರನ್ನು ಎಳೆದು ತರುವಂತಿಲ್ಲ. ಕಳೆದ ಸೀಸನ್​ನಲ್ಲಿ ಸ್ಪರ್ಧಿಗಳು ಇದೇ ರೀತಿ ಮಾಡಿ ತೊಂದರೆಗೆ ಸಿಲುಕಿದ್ದರು. ಈ ಸೀಸನ್​ನಲ್ಲಿ ಅದು ಪುನರಾವರ್ತನೆ ಆಗಿದೆ.

‘ಬಿಗ್ ಬಾಸ್’ ಹೆಸರನ್ನು ದುರ್ಬಳಕೆ ಮಾಡಿಕೊಂಡ ರಾಕೇಶ್​-ಅನುಪಮಾ; ಎಲ್ಲರಿಗೂ ಶಿಕ್ಷೆ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 07, 2022 | 9:39 PM

Share

ಬಿಗ್ ಬಾಸ್ (Bigg Boss) ಮನೆ ಅಕ್ಷರಶಃ ರಣರಂಗವಾಗಿದೆ. ರಾಕೇಶ್ ಅಡಿಗ (Rakesh Adiga) ಹಾಗೂ ಅನುಪಮಾ ಗೌಡ ಮಾಡಿದ ಪ್ರಾಂಕ್​ನಿಂದ ಅನೇಕರು ತೊಂದರೆಗೆ ಸಿಲುಕುವಂತಾಗಿದೆ. ಸುಖಾಸುಮ್ಮನೆ ಪ್ರ್ಯಾಂಕ್ ಆಗಿದ್ದರೆ ಬಿಗ್ ಬಾಸ್ ಬಿಟ್ಟು ಬಿಡುತ್ತಿದ್ದರೇನೋ. ಆದರೆ, ರಾಕೇಶ್ ಹಾಗೂ ಅನುಪಮಾ ಬಿಗ್ ಬಾಸ್ ಹೆಸರನ್ನೇ ದುರ್ಬಳಕೆ ಮಾಡಿಕೊಂಡಿದ್ದರು. ಬಿಗ್ ಬಾಸ್ ಹೆಸರಲ್ಲಿ ಸುಳ್ಳು ಹೇಳಿದ್ದರು. ಇದಕ್ಕೆ ತಕ್ಕ ಶಾಸ್ತಿ ಆಗಿದೆ. ಈ ವಿಚಾರ ಸದಾ ನೆನಪಿರುವಂತೆ ಮಾಡಲು ಬಿಗ್ ಬಾಸ್ ಶಿಕ್ಷೆ ನೀಡಿದ್ದಾರೆ. ಕೊನೆಯಲ್ಲಿ ಬಿಗ್​ ಬಾಸ್​ ಟ್ವಿಸ್ಟ್ ಕೊಟ್ಟಿದ್ದಾರೆ.

ಬಿಗ್ ಬಾಸ್ ಆದೇಶ ಕೊಟ್ಟರೆ ಮಾತ್ರ ಅದನ್ನು ಹೇಳಬೇಕು. ಇಲ್ಲವಾದಲ್ಲಿ ಸುಖಾಸುಮ್ಮನೆ ಬಿಗ್ ಬಾಸ್ ಹೆಸರನ್ನು ಎಳೆದು ತರುವಂತಿಲ್ಲ. ಕಳೆದ ಸೀಸನ್​ನಲ್ಲಿ ಸ್ಪರ್ಧಿಗಳು ಇದೇ ರೀತಿ ಮಾಡಿ ತೊಂದರೆಗೆ ಸಿಲುಕಿದ್ದರು. ಈ ಸೀಸನ್​ನಲ್ಲಿ ಅದು ಪುನರಾವರ್ತನೆ ಆಗಿದೆ. ಈ ಕಾರಣಕ್ಕೆ ಬಿಗ್ ಬಾಸ್ ಕಡೆಯಿಂದ ಸ್ಪರ್ಧಿಗಳಿಗೆ ಶಾಕ್ ಆಗುವಂತಹ ಘೋಷಣೆ ಆಗಿದೆ.

ಈ ವಾರದ ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಅನುಪಮಾ ಗೌಡ ನೇತೃತ್ವದ ‘ವಜ್ರಕಾಯ’ ತಂಡ ಗೆದ್ದಿತ್ತು. ಈ ತಂಡದ ರಾಕೇಶ್ ಹಾಗೂ ಅನುಪಮಾ ಪ್ರಾಂಕ್ ಮಾಡುವ ನಿರ್ಧಾರಕ್ಕೆ ಬಂದರು. ‘ಕ್ಯಾಪ್ಟನ್ಸಿ ಟಾಸ್ಕ್ ಆಡೋಕೆ ನಾಲ್ಕು ಜನರನ್ನು ಆಯ್ಕೆ ಮಾಡಲು ಬಿಗ್ ಬಾಸ್ ಹೇಳಿದ್ದಾರೆ. ಯಾರು ಈ ಟಾಸ್ಕ್​ ಆಡಬೇಕು ಎಂಬುದನ್ನು ಆಯ್ಕೆ ಮಾಡಲು ಎಲ್ಲರೂ ವೋಟ್ ಮಾಡಬೇಕು’ ಎಂದು ಅನುಪಮಾ ಗೌಡ ಅನೌನ್ಸ್ ಮಾಡಿದ್ದರು. ಗುರೂಜಿ ಅವರನ್ನು ಪ್ರ್ಯಾಂಕ್ ಮಾಡೋದು ಉದ್ದೇಶ ಆಗಿತ್ತು. ಹೀಗಾಗಿ, ಯಾರೊಬ್ಬರೂ ಗುರೂಜಿಗೆ ವೋಟ್ ಹಾಕಿಲ್ಲ.

ಇದನ್ನೂ ಓದಿ
Image
ಬಿಗ್ ಬಾಸ್ ಮನೆ ಸೇರಿದ ಒಟಿಟಿ ಸ್ಪರ್ಧಿಗಳು; ಇವರಿಗಿರುವ ಸವಾಲುಗಳು ಒಂದೆರಡಲ್ಲ
Image
Bigg Boss Kannada Season 9: ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಡುವ 8 ಮಂದಿ ಇವರೇ..!
Image
‘ಬಿಗ್ ಬಾಸ್ ಕನ್ನಡ ಸೀಸನ್ 9’:​ ಮನೆ ಸೇರುವ 18 ಸ್ಪರ್ಧಿಗಳ ಹೆಸರು ಲೀಕ್? ಇಲ್ಲಿದೆ ಫುಲ್ ಲಿಸ್ಟ್
Image
‘ಬಿಗ್ ಬಾಸ್ ಕನ್ನಡ’ ಹೊಸ ಸೀಸನ್​ಗೆ ರೆಡಿ ಆಯ್ತು ದೊಡ್ಮನೆ; ಮನೆಯಲ್ಲಿ ಏನೇನು ಬದಲಾವಣೆ?

ಬಿಗ್ ಬಾಸ್ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಕ್ಕೆ ಬಿಗ್ ಬಾಸ್ ಕಡೆಯಿಂದ ಶಿಕ್ಷೆ ಘೋಷಣೆ ಆಗಿದೆ. ಮನೆಯವರು ಆಯ್ಕೆ ಮಾಡಿದ ನಾಲ್ಕು ಸ್ಪರ್ಧಿಗಳನ್ನು ಕ್ಯಾಪ್ಟನ್ಸಿ ಟಾಸ್ಕ್​ಗೆ ಬಿಗ್ ಬಾಸ್ ಫೈನಲ್ ಮಾಡಿದ್ದಾರೆ. ಇದರಿಂದ ಉಳಿದವರಿಗೆ ನಿರಾಸೆ ಆಗಿದೆ. ಈ ವಿಚಾರಕ್ಕೆ ಬಿಗ್ ಬಾಸ್ ಮನೆಯಲ್ಲಿ ದೊಡ್ಡ ಮಟ್ಟಕ್ಕೆ ಚರ್ಚೆ ಆಗಿದೆ. ಅಲ್ಲದೆ, ಪರಸ್ಪರ ಕಿತ್ತಾಡಿಕೊಂಡಿದ್ದಾರೆ.

ಇದನ್ನೂ ಓದಿ: ‘ಬಿಗ್ ಬಾಸ್’ ಮನೆಗೆ ಹೊಸ ಎಂಟ್ರಿ; ಅಷ್ಟಕ್ಕೂ ಯಾರಿವರು?

ಆರ್ಯವರ್ಧನ್​​ಗೆ ಟಾಸ್ಕ್​​ಗೆ ಅವಕಾಶ ಸಿಕ್ಕಿಲ್ಲ. ಇದಕ್ಕೆ ಅವರು ಕೂಗಾಡಿದ್ದಾರೆ. ಸಾನ್ಯಾ ಐಯ್ಯರ್ ‘ಆಗಿದ್ದು ಆಯ್ತು. ಸೆಲೆಕ್ಟ್​ ಆದವರಿಗೆ ಶುಭಾಶಯ’ ಎಂದರು. ಇದಕ್ಕೆ ಅರುಣ್ ಸಾಗರ್​ ಸಿಟ್ಟಾಗಿದ್ದಾರೆ. ‘ಕಳೆದವಾರ ನಿಯಮ ಬ್ರೇಕ್ ಮಾಡಿದ್ದಕ್ಕೆ ಕೂಗಾಡಿದಿರಿ. ಈಗ ನಿಮ್ಮ ಬಳಿ ಕೊಚ್ಚೆ ಬಂದಾಗ ಈ ರೀತಿ ಮಾತಾಡೋದು ಸರಿ ಅಲ್ಲ’ ಎಂದು ಎಚ್ಚರಿಕೆ ನೀಡಿದರು. ಕೊನೆಯಲ್ಲಿ ಇದು ಪ್ರ್ಯಾಂಕ್ ಎಂದು ಬಿಗ್ ಬಾಸ್ ಹೇಳಿದರು.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ