AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK 9: ‘ಕನ್ನಡ ಬಿಗ್​ ಬಾಸ್​’ 9ನೇ ಸೀಸನ್​ ಕೆಲಸ ಶುರು; ಬಿಗ್​ ಅಪ್​ಡೇಟ್​ ನೀಡಿದ ಪರಮೇಶ್ವರ್​ ಗುಂಡ್ಕಲ್​

Bigg Boss Kannada Season 9: ಈ ಬಾರಿ ಯಾರೆಲ್ಲ ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ಸಖತ್​ ಕೌತುಕ ಇದೆ. ಸೆಲೆಬ್ರಿಟಿಗಳ ಜೊತೆ ಜನಸಾಮಾನ್ಯರಿಗೂ ಸ್ಪರ್ಧಿಸುವ ಅವಕಾಶ ನೀಡಿ ಎಂದು ಅನೇಕರು ಮನವಿ ಮಾಡಿಕೊಂಡಿದ್ದಾರೆ.

BBK 9: ‘ಕನ್ನಡ ಬಿಗ್​ ಬಾಸ್​’ 9ನೇ ಸೀಸನ್​ ಕೆಲಸ ಶುರು; ಬಿಗ್​ ಅಪ್​ಡೇಟ್​ ನೀಡಿದ ಪರಮೇಶ್ವರ್​ ಗುಂಡ್ಕಲ್​
ಪರಮೇಶ್ವರ್​ ಗುಂಡ್ಕಲ್
TV9 Web
| Edited By: |

Updated on:Jul 13, 2022 | 11:06 AM

Share

Bigg Boss Kannada Season 9 | ರಿಯಾಲಿಟಿ ಶೋಗಳ ಪೈಕಿ ‘ಬಿಗ್​ ಬಾಸ್​’ (Bigg Boss) ಕಾರ್ಯಕ್ರಮಕ್ಕೆ ಸ್ಪೆಷಲ್​ ಸ್ಥಾನವಿದೆ. ಪ್ರತಿ ಬಾರಿ ಈ ಶೋ ಆರಂಭ ಆಗುವುದಕ್ಕೂ ಮುನ್ನ ಒಂದು ಬಗೆಯ ಕಾತರ ಮನೆ ಮಾಡಿರುತ್ತದೆ. ಹೊಸ ಬಿಗ್​ ಬಾಸ್​ ಮನೆ ಹೇಗಿರಲಿದೆ? ಈ ಸಲ ಬರುವ ಸ್ಪರ್ಧಿಗಳು ಯಾರು? ನಿಯಮದಲ್ಲಿ ಏನಾದರೂ ಹೊಸತನ ಇರಲಿದೆಯೇ? ಇಂಥ ಹಲವು ಪ್ರಶ್ನೆಗಳು ಕೊರೆಯುತ್ತಲೇ ಇರುತ್ತವೆ. ಕನ್ನಡದಲ್ಲಿ ಈವರೆಗೂ 8 ಸೀಸನ್​ಗಳು (Bigg Boss Kannada) ಯಶಸ್ವಿಯಾಗಿ ನಡೆದುಕೊಂಡು ಬಂದಿದೆ. ಈಗ 9ನೇ ಸೀಸನ್​ಗೆ ಕಾಯುವಿಕೆ ಶುರುವಾಗಿದೆ. ಈ ಹೊಸ ಸೀಸನ್​ ಯಾವಾಗ ಆರಂಭ ಆಗಲಿದೆ ಎಂದು ನಿರೀಕ್ಷಿಸುತ್ತಿದ್ದ ಎಲ್ಲ ವೀಕ್ಷಕರಿಗೂ ಈಗೊಂದು ಅಪ್​ಡೇಟ್​ ಸಿಕ್ಕಿದೆ. ‘ಕನ್ನಡ ಬಿಗ್​ ಬಾಸ್​ ಸೀಸನ್​ 9’ ಕೆಲಸಗಳು ಯಾವ ಹಂತದಲ್ಲಿದೆ ಎಂಬುದಕ್ಕೆ ಕಲರ್ಸ್​ ಕನ್ನಡ ವಾಹಿನಿ ಬಿಸ್ನೆಸ್​ ಹೆಡ್​ ಪರಮೇಶ್ವರ್​ ಗುಂಡ್ಕಲ್​ (Parameshwar Gundkal) ಉತ್ತರ ನೀಡಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಪರಮೇಶ್ವರ ಗುಂಡ್ಕಲ್​ ಅವರು ಒಂದು ಫೋಟೋ ಹಂಚಿಕೊಂಡಿದ್ದಾರೆ. ‘ನಿರ್ಮಾಣ ಕಾರ್ಯ ಪ್ರಗತಿಯಲ್ಲಿ’ ಎಂದು ಅವರು ಆ ಫೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ. ಇದು ಬಿಗ್​ ಬಾಸ್​ ಸೆಟ್​ ಫೋಟೋ ಎಂದು ನೆಟ್ಟಿಗರು ಸುಲಭವಾಗಿ ಊಹಿಸಿದ್ದಾರೆ. ಅಲ್ಲದೇ, ಹತ್ತಾರು ಬಗೆಯ ಕಮೆಂಟ್​ಗಳ ಮೂಲಕ ಜನರು ತಮ್ಮ ಕಾತರವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
‘ಬಿಗ್​ ಬಾಸ್​’ನಲ್ಲಿ ಮದುವೆ ಆದ ಜೋಡಿಗೆ ಚಾನೆಲ್​ನವರಿಂದ ಸಿಕ್ಕಿತ್ತು 50 ಲಕ್ಷ ರೂ.; ಎರಡೇ ತಿಂಗಳಿಗೆ ಡಿವೋರ್ಸ್​
Image
ಬಿಗ್​ ಬಾಸ್​ ನಿರೂಪಕರು ಚೇಂಜ್​; ಅಧಿಕೃತ ಘೋಷಣೆ ಮಾಡಿದ ಸ್ಟಾರ್​ ನಟ; ವೀಕ್ಷಕರಿಗೆ ಬೇಸರ
Image
‘ಬಿಗ್​ ಬಾಸ್​’ ಮನೆಯಲ್ಲಿ ಅಗ್ನಿ ಅವಘಡ; ಸಾವು-ನೋವಿನ ಬಗ್ಗೆ ಆಗಿಲ್ಲ ವರದಿ
Image
ಬಿಗ್​ ಬಾಸ್​ ಗೆದ್ದವರ ಹಿಂದೆ ಲಾಬಿ ಇದೆಯೋ ಇಲ್ಲವೋ? ನೇರವಾಗಿ ಮಾತಾಡಿದ ಸ್ಪರ್ಧಿ ಕರಣ್​ ಕುಂದ್ರಾ

ಈ ಬಾರಿ ಯಾರೆಲ್ಲ ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ಸಖತ್​ ಕೌತುಕ ಇದೆ. ಕೆಲವು ಸೀಸನ್​ಗಳಲ್ಲಿ ಸೆಲೆಬ್ರಿಟಿಗಳ ಜೊತೆ ಜನಸಾಮಾನ್ಯರಿಗೂ ಸ್ಪರ್ಧಿಸುವ ಅವಕಾಶ ನೀಡಲಾಗಿತ್ತು. ಈ ಬಾರಿ ಕೂಡ ಹಾಗೆ ಅವಕಾಶ ನೀಡಿ ಎಂದು ಅನೇಕರು ಕಮೆಂಟ್​ಗಳ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಸದ್ಯ ಈ ಫೋಟೋ ವೈರಲ್​ ಆಗಿದೆ. ಪ್ರತಿ ಬಾರಿಯೂ ಬಿಗ್​ ಬಾಸ್​ ಮನೆಯ ವಿನ್ಯಾಸದಲ್ಲಿ ಒಂದಷ್ಟು ಬದಲಾವಣೆಗಳು ಆಗುತ್ತಲೇ ಇರುತ್ತದೆ. ಈ ಬಾರಿ ದೊಡ್ಮನೆ ಹೇಗಿರಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಕನ್ನಡದಲ್ಲಿ ಎಲ್ಲ ಸೀಸನ್​ಗಳನ್ನು ಯಶಸ್ವಿಯಾಗಿ ನಿರೂಪಿಸಿದ ಖ್ಯಾತಿ ಕಿಚ್ಚ ಸುದೀಪ್​ ಅವರಿಗೆ ಸಲ್ಲುತ್ತದೆ. ಈ ಬಾರಿ ಕೂಡ ಅವರೇ ನಿರೂಪಕರಾಗಿ ಮುಂದುವರಿಯುತ್ತಾರೆ. ಪ್ರತಿ ವೀಕೆಂಡ್​ನಲ್ಲಿ ಟಿವಿ ಪರದೆಯ ಮೇಲೆ ಕಿಚ್ಚನ ಖಡಕ್​ ನಿರೂಪಣೆ ನೋಡಲು ಫ್ಯಾನ್ಸ್​ ಕಾದಿದ್ದಾರೆ. ಸದ್ಯ ‘ವಿಕ್ರಾಂತ್​ ರೋಣ’ ಚಿತ್ರದ ಪ್ರಮೋಷನ್​ನಲ್ಲಿ ಸುದೀಪ್​ ಬ್ಯುಸಿ ಆಗಿದ್ದಾರೆ. ಜುಲೈ 28ರಂದು ಆ ಸಿನಿಮಾ ಬಿಡುಗಡೆ ಆಗಲಿದೆ. ಈಗಾಗಲೇ ಟ್ರೇಲರ್​ ಮೂಲಕ ಸಖತ್​ ನಿರೀಕ್ಷೆ ಮೂಡಿಸಲಾಗಿದೆ.

Published On - 7:14 am, Tue, 12 July 22

Follow Us
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!