AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roopesh Shetty: ‘ನಾನು ಕೊರಗಜ್ಜನ ಆರಾಧನೆ ಮಾಡ್ತೀನಿ, ಬಿಗ್​ ಬಾಸ್​ನಲ್ಲಿ ಅವರೇ ನನ್ನ ಗೆಲ್ಲಿಸಿದ್ದಾರೆ’: ರೂಪೇಶ್​ ಶೆಟ್ಟಿ

Kuttar Koragajja temple: ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರ ಟ್ರೋಫಿ ಗೆದ್ದ ಬಳಿಕ ರೂಪೇಶ್​ ಶೆಟ್ಟಿ ಅವರಿಗೆ ಅನೇಕ ಆಫರ್​ಗಳು ಬರುತ್ತಿವೆ. ಆ ಬಗ್ಗೆಯೂ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

Roopesh Shetty: ‘ನಾನು ಕೊರಗಜ್ಜನ ಆರಾಧನೆ ಮಾಡ್ತೀನಿ, ಬಿಗ್​ ಬಾಸ್​ನಲ್ಲಿ ಅವರೇ ನನ್ನ ಗೆಲ್ಲಿಸಿದ್ದಾರೆ’: ರೂಪೇಶ್​ ಶೆಟ್ಟಿ
ರೂಪೇಶ್ ಶೆಟ್ಟಿ
TV9 Web
| Edited By: |

Updated on: Jan 08, 2023 | 5:43 PM

Share

ನಟ ರೂಪೇಶ್ ಶೆಟ್ಟಿ (Roopesh Shetty) ಅವರಿಗೆ ಬಿಗ್​ ಬಾಸ್​ ಶೋನಿಂದ ಸಖತ್​ ಜನಪ್ರಿಯತೆ ಸಿಕ್ಕಿದೆ. ಮೊದಲ ತಳುನಾಡಿನಲ್ಲಿ ಮಾತ್ರ ಫೇಮಸ್​ ಆಗಿದ್ದ ಅವರು ಈಗ ಇಡೀ ಕರುನಾಡಿಗೆ ಪರಿಚಿತರಾಗಿದ್ದಾರೆ. ‘ಬಿಗ್​ ಬಾಸ್ ಕನ್ನಡ ಸೀಸನ್​ 9’ರ ವಿನ್ನರ್​ (BBK 9 Winner) ಆದ ಅವರಿಗೆ ಎಲ್ಲ ಕಡೆಗಳಲ್ಲಿ ಸನ್ಮಾನ ಮಾಡಲಾಗುತ್ತಿದೆ. ರೂಪೇಶ್​ ಶೆಟ್ಟಿ ಮೂಲತಃ ಮಂಗಳೂರಿನವರು. ಬಿಗ್​ ಬಾಸ್​ ಟ್ರೋಫಿ ಗೆದ್ದ ಬಳಿಕ ಅವರು ಇದೇ ಮೊದಲ ಬಾರಿಗೆ ಮಂಗಳೂರಿಗೆ ತೆರಳಿದ್ದಾರೆ. ಅಲ್ಲಿ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ತವರೂರಿನ ಜನರ ಪ್ರೀತಿ ಕಂಡು ರೂಪೇಶ್​ ಶೆಟ್ಟಿ ಖುಷಿಪಟ್ಟಿದ್ದಾರೆ. ಈ ವೇಳೆ ಅವರು ಕೊರಗಜ್ಜ (Koragajja) ದೇವರ ಆಶೀರ್ವಾದ ಪಡೆದಿದ್ದಾರೆ.

‘ನಾನು ಕೊರಗಜ್ಜ ದೇವರನ್ನು ತುಂಬ ಆರಾಧನೆ ಮಾಡುತ್ತೇನೆ. ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ ಆಡುವಾಗ ಕೊರಗಜ್ಜನ ಹೆಸರು ಹೇಳುತ್ತಿದ್ದೆ. ನಾನು ಗೆಲ್ಲುವುದು ಬೇಡ, ಕನಿಷ್ಠ ಪಕ್ಷ ಟಾಪ್​ 5ರಲ್ಲಿ ಬಂದರೂ ಕೂಡ ಮೊದಲು ಹೋಗುವುದು ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಅಂದುಕೊಂಡಿದ್ದೆ. ನನ್ನನ್ನು ಅವರೇ ಗೆಲ್ಲಿಸಿದ್ದಾರೆ’ ಎಂದು ರೂಪೇಶ್​ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ನಿಂದ ಹೊರಬಂದ ನಂತರ ಸಾನ್ಯಾ ಬದಲಾಗಿದ್ದಾರಾ? ರೂಪೇಶ್ ಶೆಟ್ಟಿ ಪ್ರತಿಕ್ರಿಯಿಸಿದ್ದು ಹೀಗೆ

ಇದನ್ನೂ ಓದಿ
Image
‘ಕಾಂತಾರ’ ನೋಡಿ ಬೆಂಗಳೂರಲ್ಲಿ ‘ಕೊರಗಜ್ಜ ನೇಮ’ ಆಚರಣೆಗೆ ನಡೆದಿತ್ತು ಸಿದ್ಧತೆ; ವಿರೋಧ ಹಿನ್ನೆಲೆಯಲ್ಲಿ ಕ್ಯಾನ್ಸಲ್
Image
Koragajja: ಕೊರಗಜ್ಜ ದೈವದ ಕುರಿತು ಸೆಟ್ಟೇರಿತು ಹೊಸ ಸಿನಿಮಾ; ‘ಕರಿ ಹೈದ ಕರಿ ಅಜ್ಜ’ ಬಗ್ಗೆ ಇಲ್ಲಿದೆ ಮಾಹಿತಿ..
Image
Kantara: ‘ಇದು ರಿಷಬ್​ ಮಾಡಿದ ಚಿತ್ರ ಅಲ್ಲ, ದೇವರೇ ಮಾಡ್ಸಿದ್ದು’; ವಿದೇಶದಲ್ಲಿ ‘ಕಾಂತಾರ’ ನೋಡಿ ಜಗ್ಗೇಶ್​ ಪ್ರತಿಕ್ರಿಯೆ
Image
ಮದುವೆ ಸಂಭ್ರಮದಲ್ಲಿ ಕೊರಗಜ್ಜನಿಗೆ ಅವಮಾನ: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಖಂಡನೆ

ಮಂಗಳೂರಿಗೆ ಬಂದ ರೂಪೇಶ್​ ಶೆಟ್ಟಿಗೆ ಹುಲಿ ವೇಷದ ಕಲಾವಿದರು ಸ್ವಾಗತ ಕೋರಿದ್ದಾರೆ. ಅದು ಅವರಿಗೆ ಹೆಚ್ಚು ಸಂತಸ ತಂದಿದೆ. ಆ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ಚಿಕ್ಕ ವಯಸ್ಸಿನಿಂದಲೂ ನನಗೆ ಹುಲಿ ವೇಷ ಎಂದರೆ ಇಷ್ಟ. ತುಳು ನಾಡಿನ ಈ ಸಂಸ್ಕೃತಿಕ ಕಲೆಯನ್ನು ಬಿಗ್​ ಬಾಸ್​ ಮನೆಯಲ್ಲಿ ಪ್ರದರ್ಶನ ಮಾಡಲು ಅವಕಾಶ ಸಿಕ್ಕಿತು. ಇಲ್ಲಿಯೂ ಹುಲಿವೇಷವನ್ನು ನನ್ನ ಸ್ನೇಹಿತರು ಪ್ಲ್ಯಾನ್​ ಮಾಡಿದ್ದಾರೆ. ನಾನು ಇದನ್ನು ನಿರೀಕ್ಷಿಸಿರಲಿಲ್ಲ’ ಎಂದಿದ್ದಾರೆ ರೂಪೇಶ್​ ಶೆಟ್ಟಿ.

ಇದನ್ನೂ ಓದಿ: Roopesh Shetty: ರೂಪೇಶ್ ಶೆಟ್ಟಿ ಸಿನಿಮಾ ‘ಮಂಕು ಭಾಯ್ ಫಾಕ್ಸಿ ರಾಣಿ’ ಜ.13ಕ್ಕೆ ರಿಲೀಸ್​; ಗಮನ ಸೆಳೆದ ಟ್ರೇಲರ್​

ಬಿಗ್​ ಬಾಸ್​ ಗೆದ್ದ ಬಳಿಕ ರೂಪೇಶ್​ ಶೆಟ್ಟಿ ಅವರಿಗೆ ಅನೇಕ ಆಫರ್​ಗಳು ಬರುತ್ತಿವೆ. ಆ ಬಗ್ಗೆಯೂ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ನನ್ನ ತುಳು ಸಿನಿಮಾ ‘ಸರ್ಕಸ್​’ ರಿಲೀಸ್​ಗೆ ಸಿದ್ಧವಾಗಿದೆ. ನಾಲ್ಕರಿಂದ ಐದು ಕನ್ನಡ ಸಿನಿಮಾಗಳ ಆಫರ್​ ಬಂದಿದೆ. ಮುಂದಿನ ವಾರ ಅವುಗಳನ್ನು ಪಕ್ಕಾ ಮಾಡಿಕೊಳ್ಳುತ್ತೇನೆ’ ಎಂದು ರೂಪೇಶ್​ ಶೆಟ್ಟಿ ಹೇಳಿದ್ದಾರೆ.

ಬಿಗ್​ ಬಾಸ್​ ಗೆದ್ದ ರೂಪೇಶ್​ ಶೆಟ್ಟಿ ಅವರಿಗೆ 60 ಲಕ್ಷ ರೂಪಾಯಿ ನಗದು ಬಹುಮಾನ ಸಿಕ್ಕಿತು. ಅದರಲ್ಲಿ ಶೇಕಡ 50ರಷ್ಟು ಹಣವನ್ನು ಸಮಾಜಮುಖಿ ಕೆಲಸಕ್ಕೆ ಬಳಸುವುದಾಗಿ ಅವರು ಹೇಳಿದ್ದಾರೆ. ‘ಆ ಬಗ್ಗೆ ಸರಿಯಾಗಿ ಪ್ಲ್ಯಾನ್​ ಮಾಡಿ ಹೇಳುತ್ತೇನೆ. 2-3 ಕುಟುಂಬದವರಿಗೆ ಮನೆ ಕಟ್ಟಿಕೊಡುವ ವ್ಯವಸ್ಥೆ ಮಾಡುತ್ತೇನೆ’ ಎಂದು ರೂಪೇಶ್​ ಶೆಟ್ಟಿ ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಧರ್ಮ ಮತ್ತು ಅಧರ್ಮ ಯಾವುದಕ್ಕೆ ಹೆಚ್ಚು ಪ್ರಾಶಸ್ತ್ಯ?
ಧರ್ಮ ಮತ್ತು ಅಧರ್ಮ ಯಾವುದಕ್ಕೆ ಹೆಚ್ಚು ಪ್ರಾಶಸ್ತ್ಯ?
ಇಂದು ಈ ರಾಶಿಯವರು ಇಂದು ತಾಳ್ಮೆ ಕಳೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಇಂದು ತಾಳ್ಮೆ ಕಳೆದುಕೊಳ್ಳಬೇಡಿ!
ಬೆಳಗಾವಿ, ಹಾವೇರಿಯಲ್ಲಿ ಭಾರಿ ಮಳೆ: ನದಿಯಂತಾದ ರಸ್ತೆ, ಬೈಕ್​ಗಳು ಮುಳುಗಡೆ
ಬೆಳಗಾವಿ, ಹಾವೇರಿಯಲ್ಲಿ ಭಾರಿ ಮಳೆ: ನದಿಯಂತಾದ ರಸ್ತೆ, ಬೈಕ್​ಗಳು ಮುಳುಗಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ