Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಬಿಟ್ಟುಬಿಡಿ ಎಂದು ಕೈ ಮುಗಿದು ಕೇಳಿಕೊಂಡ ಶೋಭಾ ಶೆಟ್ಟಿ

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಮತ್ತೊಮ್ಮೆ ಮನೆಯ ಬಾಗಿಲನ್ನು ಸುದೀಪ್ ಓಪನ್ ಮಾಡಿಸಿದ್ದಾರೆ. ಯಾವುದೇ ಸ್ಪರ್ಧಿ ಮನೆಯಿಂದ ಹೊರಗೆ ಹೋಗುತ್ತೀನಿ ಎಂದಾಗ ಸುದೀಪ್ ಬಾಗಿಲು ತೆಗೆಸುತ್ತಾರೆ.

ನನ್ನನ್ನು ಬಿಟ್ಟುಬಿಡಿ ಎಂದು ಕೈ ಮುಗಿದು ಕೇಳಿಕೊಂಡ ಶೋಭಾ ಶೆಟ್ಟಿ
Follow us
ಮಂಜುನಾಥ ಸಿ.
|

Updated on:Dec 01, 2024 | 8:17 AM

ಬಿಗ್​ಬಾಸ್ ಕನ್ನಡ ಸೀಸನ್ 11 ಪ್ರಾರಂಭವಾಗಿ 50 ಕ್ಕೂ ಹೆಚ್ಚು ದಿನಗಳಾಗಿವೆ. ಸ್ಪರ್ಧಿಗಳೆಲ್ಲ ಮನೆಗೆ ಸೆಟ್ ಆಗಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಇತ್ತೀಚೆತೆ ಇಬ್ಬರು ಸ್ಪರ್ಧಿಗಳು ಮನೆಗೆ ಬಂದಿದ್ದು, ರಜತ್ ಮನೆಗೆ ಚೆನ್ನಾಗಿ ಹೊಂದಾಣಿಕೆ ಆಗಿದ್ದಾರೆ, ಈ ಸೀಸನ್ ಗೆಲ್ಲುವ ಸ್ಪರ್ಧಿ ರಜತ್ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ. ರಜತ್ ಜೊತೆಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದ ಶೋಭಾ ಶೆಟ್ಟಿಗೆ ಮನೆಗೆ ಹೊಂದಿಕೊಳ್ಳಲು ಆಗುತ್ತಿಲ್ಲ. ಮನೆಗೆ ಬಂದ ಆರಂಭದಲ್ಲಿ ಜೋಶ್​ನಲ್ಲಿದ್ದ ಶೋಭಾ ಶೆಟ್ಟಿ ಕೆಲವೇ ದಿನಕ್ಕೆ ಮಂಕಾಗಿದ್ದರು. ಈಗಂತೂ ಮನೆಯಿಂದ ಹೊರಗೆ ಹೋಗುವ ಮಾತಾಡುತ್ತಿದ್ದಾರೆ.

ಈ ವಾರ ಶೋಭಾ ಶೆಟ್ಟಿ ನಾಮಿನೇಟ್ ಆಗಿದ್ದರು. ಆದರೆ ಜನ ವೋಟ್ ಮಾಡಿ ಅವರನ್ನು ಉಳಿಸಿದ್ದಾರೆ. ಆದರೆ ಶೋಭಾ ಶೆಟ್ಟಿಗೆ ಮನೆಯಲ್ಲಿ ಉಳಿದು ಕೊಳ್ಳಲು ಇಷ್ಟವಿಲ್ಲ. ಹೀಗೆಂದು ಸುದೀಪ್ ಮುಂದೆ ಹೇಳಿಕೊಂಡಿರುವ ಶೋಭಾ ಶೆಟ್ಟಿ, ಕೈ ಮುಗಿದು ಸುದೀಪ್ ಎದುರು ಅಂಗಲಾಚಿದ್ದು, ತಾನು ಮನೆಯಿಂದ ಹೊರಗೆ ಹೋಗಬೇಕು ಎಂದು ಕೇಳಿಕೊಂಡಿದ್ದಾರೆ.

ಆರಂಭದಲ್ಲಿ ಶೋಭಾ ಶೆಟ್ಟಿಗೆ ಬುದ್ಧಿವಾದ ಹೇಳಿದ ಸುದೀಪ್, ‘ನೀವು ಯಾವ ಉದ್ದೇಶ ಇಟ್ಟುಕೊಂಡು ಈ ಮನೆಗೆ ಬಂದಿರಿ ಎಂಬುದನ್ನು ಒಮ್ಮೆ ಯೋಚನೆ ಮಾಡಿ’ ಎಂದರು. ಆ ಬಳಿಕ, ‘ನಿಮಗೆ ಮತ ಹಾಕಿ ಉಳಿಸಿಕೊಂಡ ಮತದಾರರಿಗೆ ಏನು ಹೇಳುತ್ತೀರಿ, ಅವರಿಗೆ ನೀವು ಅನ್ಯಾಯ ಮಾಡುತ್ತಿದ್ದೀರಿ’ ಎಂದು ಸಹ ಸುದೀಪ್ ಹೇಳಿದರು. ಏನೇ ಆದರೂ ಸಹ ಶೋಭಾ ಶೆಟ್ಟಿ, ತಾನು ಮನೆಗೆ ಹೋಗಲೇ ಬೇಕು ಎಂದು ಒತ್ತಾಯ ಮಾಡಿದರು. ಕೊನೆಗೆ ಶೋಭಾ ಶೆಟ್ಟಿ ಮಾತುಗಳಿಗೆ ರೋಸಿ ಹೋದ ಸುದೀಪ್ ಬಿಗ್​ಬಾಸ್ ಮನೆ ಬಾಗಿಲು ತೆಗೆಸಿದ್ದಾರೆ. ಶೋಭಾ ಶೆಟ್ಟಿ ಮನೆಗೆ ಹೋಗಿದ್ದಾರೋ ಇಲ್ಲವೋ ಎಂಬುದು ಭಾನುವಾರ ರಾತ್ರಿ ಎಪಿಸೋಡ್ ಪ್ರಸಾರವಾದಾಗ ತಿಳಿದು ಬರಲಿದೆ.

ಇದನ್ನೂ ಓದಿ: ವೈಲ್ಡ್​ ಕಾರ್ಡ್ ಮೂಲಕ ಬಿಗ್​ಬಾಸ್​ಗೆ ಎಂಟ್ರಿ ಕೊಟ್ಟ ಗ್ಲಾಮರ್ ಗೊಂಬೆ

ಭಾನುವಾರದ ಎಪಿಸೋಡ್​ನಲ್ಲಿ ಶೋಭಾ ಶೆಟ್ಟಿ, ತಾನು ಮನೆಯಿಂದ ಹೊರಗೆ ಹೋಗುತ್ತೇನೆ ಎಂದು ಸುದೀಪ್ ಮುಂದೆ ಹಠ ಹಿಡಿದಿದ್ದಾರೆ. ಸುದೀಪ್ ಸಹ ಬೇಸರಗೊಂಡು ಗೇಟ್ ಓಪನ್ ಮಾಡಿದ್ದಾರೆ. ಅಷ್ಟಕ್ಕೂ ಶೋಭಾ ಶೆಟ್ಟಿ ಮನೆಯಿಂದ ಹೊರಗೆ ಹೋದರಾ?

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:15 am, Sun, 1 December 24

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ