AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಬಿಟ್ಟುಬಿಡಿ ಎಂದು ಕೈ ಮುಗಿದು ಕೇಳಿಕೊಂಡ ಶೋಭಾ ಶೆಟ್ಟಿ

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಮತ್ತೊಮ್ಮೆ ಮನೆಯ ಬಾಗಿಲನ್ನು ಸುದೀಪ್ ಓಪನ್ ಮಾಡಿಸಿದ್ದಾರೆ. ಯಾವುದೇ ಸ್ಪರ್ಧಿ ಮನೆಯಿಂದ ಹೊರಗೆ ಹೋಗುತ್ತೀನಿ ಎಂದಾಗ ಸುದೀಪ್ ಬಾಗಿಲು ತೆಗೆಸುತ್ತಾರೆ.

ನನ್ನನ್ನು ಬಿಟ್ಟುಬಿಡಿ ಎಂದು ಕೈ ಮುಗಿದು ಕೇಳಿಕೊಂಡ ಶೋಭಾ ಶೆಟ್ಟಿ
ಮಂಜುನಾಥ ಸಿ.
|

Updated on:Dec 01, 2024 | 8:17 AM

Share

ಬಿಗ್​ಬಾಸ್ ಕನ್ನಡ ಸೀಸನ್ 11 ಪ್ರಾರಂಭವಾಗಿ 50 ಕ್ಕೂ ಹೆಚ್ಚು ದಿನಗಳಾಗಿವೆ. ಸ್ಪರ್ಧಿಗಳೆಲ್ಲ ಮನೆಗೆ ಸೆಟ್ ಆಗಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಇತ್ತೀಚೆತೆ ಇಬ್ಬರು ಸ್ಪರ್ಧಿಗಳು ಮನೆಗೆ ಬಂದಿದ್ದು, ರಜತ್ ಮನೆಗೆ ಚೆನ್ನಾಗಿ ಹೊಂದಾಣಿಕೆ ಆಗಿದ್ದಾರೆ, ಈ ಸೀಸನ್ ಗೆಲ್ಲುವ ಸ್ಪರ್ಧಿ ರಜತ್ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ. ರಜತ್ ಜೊತೆಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದ ಶೋಭಾ ಶೆಟ್ಟಿಗೆ ಮನೆಗೆ ಹೊಂದಿಕೊಳ್ಳಲು ಆಗುತ್ತಿಲ್ಲ. ಮನೆಗೆ ಬಂದ ಆರಂಭದಲ್ಲಿ ಜೋಶ್​ನಲ್ಲಿದ್ದ ಶೋಭಾ ಶೆಟ್ಟಿ ಕೆಲವೇ ದಿನಕ್ಕೆ ಮಂಕಾಗಿದ್ದರು. ಈಗಂತೂ ಮನೆಯಿಂದ ಹೊರಗೆ ಹೋಗುವ ಮಾತಾಡುತ್ತಿದ್ದಾರೆ.

ಈ ವಾರ ಶೋಭಾ ಶೆಟ್ಟಿ ನಾಮಿನೇಟ್ ಆಗಿದ್ದರು. ಆದರೆ ಜನ ವೋಟ್ ಮಾಡಿ ಅವರನ್ನು ಉಳಿಸಿದ್ದಾರೆ. ಆದರೆ ಶೋಭಾ ಶೆಟ್ಟಿಗೆ ಮನೆಯಲ್ಲಿ ಉಳಿದು ಕೊಳ್ಳಲು ಇಷ್ಟವಿಲ್ಲ. ಹೀಗೆಂದು ಸುದೀಪ್ ಮುಂದೆ ಹೇಳಿಕೊಂಡಿರುವ ಶೋಭಾ ಶೆಟ್ಟಿ, ಕೈ ಮುಗಿದು ಸುದೀಪ್ ಎದುರು ಅಂಗಲಾಚಿದ್ದು, ತಾನು ಮನೆಯಿಂದ ಹೊರಗೆ ಹೋಗಬೇಕು ಎಂದು ಕೇಳಿಕೊಂಡಿದ್ದಾರೆ.

ಆರಂಭದಲ್ಲಿ ಶೋಭಾ ಶೆಟ್ಟಿಗೆ ಬುದ್ಧಿವಾದ ಹೇಳಿದ ಸುದೀಪ್, ‘ನೀವು ಯಾವ ಉದ್ದೇಶ ಇಟ್ಟುಕೊಂಡು ಈ ಮನೆಗೆ ಬಂದಿರಿ ಎಂಬುದನ್ನು ಒಮ್ಮೆ ಯೋಚನೆ ಮಾಡಿ’ ಎಂದರು. ಆ ಬಳಿಕ, ‘ನಿಮಗೆ ಮತ ಹಾಕಿ ಉಳಿಸಿಕೊಂಡ ಮತದಾರರಿಗೆ ಏನು ಹೇಳುತ್ತೀರಿ, ಅವರಿಗೆ ನೀವು ಅನ್ಯಾಯ ಮಾಡುತ್ತಿದ್ದೀರಿ’ ಎಂದು ಸಹ ಸುದೀಪ್ ಹೇಳಿದರು. ಏನೇ ಆದರೂ ಸಹ ಶೋಭಾ ಶೆಟ್ಟಿ, ತಾನು ಮನೆಗೆ ಹೋಗಲೇ ಬೇಕು ಎಂದು ಒತ್ತಾಯ ಮಾಡಿದರು. ಕೊನೆಗೆ ಶೋಭಾ ಶೆಟ್ಟಿ ಮಾತುಗಳಿಗೆ ರೋಸಿ ಹೋದ ಸುದೀಪ್ ಬಿಗ್​ಬಾಸ್ ಮನೆ ಬಾಗಿಲು ತೆಗೆಸಿದ್ದಾರೆ. ಶೋಭಾ ಶೆಟ್ಟಿ ಮನೆಗೆ ಹೋಗಿದ್ದಾರೋ ಇಲ್ಲವೋ ಎಂಬುದು ಭಾನುವಾರ ರಾತ್ರಿ ಎಪಿಸೋಡ್ ಪ್ರಸಾರವಾದಾಗ ತಿಳಿದು ಬರಲಿದೆ.

ಇದನ್ನೂ ಓದಿ: ವೈಲ್ಡ್​ ಕಾರ್ಡ್ ಮೂಲಕ ಬಿಗ್​ಬಾಸ್​ಗೆ ಎಂಟ್ರಿ ಕೊಟ್ಟ ಗ್ಲಾಮರ್ ಗೊಂಬೆ

ಭಾನುವಾರದ ಎಪಿಸೋಡ್​ನಲ್ಲಿ ಶೋಭಾ ಶೆಟ್ಟಿ, ತಾನು ಮನೆಯಿಂದ ಹೊರಗೆ ಹೋಗುತ್ತೇನೆ ಎಂದು ಸುದೀಪ್ ಮುಂದೆ ಹಠ ಹಿಡಿದಿದ್ದಾರೆ. ಸುದೀಪ್ ಸಹ ಬೇಸರಗೊಂಡು ಗೇಟ್ ಓಪನ್ ಮಾಡಿದ್ದಾರೆ. ಅಷ್ಟಕ್ಕೂ ಶೋಭಾ ಶೆಟ್ಟಿ ಮನೆಯಿಂದ ಹೊರಗೆ ಹೋದರಾ?

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:15 am, Sun, 1 December 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್