AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಬಿಟ್ಟುಬಿಡಿ ಎಂದು ಕೈ ಮುಗಿದು ಕೇಳಿಕೊಂಡ ಶೋಭಾ ಶೆಟ್ಟಿ

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಮತ್ತೊಮ್ಮೆ ಮನೆಯ ಬಾಗಿಲನ್ನು ಸುದೀಪ್ ಓಪನ್ ಮಾಡಿಸಿದ್ದಾರೆ. ಯಾವುದೇ ಸ್ಪರ್ಧಿ ಮನೆಯಿಂದ ಹೊರಗೆ ಹೋಗುತ್ತೀನಿ ಎಂದಾಗ ಸುದೀಪ್ ಬಾಗಿಲು ತೆಗೆಸುತ್ತಾರೆ.

ನನ್ನನ್ನು ಬಿಟ್ಟುಬಿಡಿ ಎಂದು ಕೈ ಮುಗಿದು ಕೇಳಿಕೊಂಡ ಶೋಭಾ ಶೆಟ್ಟಿ
ಮಂಜುನಾಥ ಸಿ.
|

Updated on:Dec 01, 2024 | 8:17 AM

Share

ಬಿಗ್​ಬಾಸ್ ಕನ್ನಡ ಸೀಸನ್ 11 ಪ್ರಾರಂಭವಾಗಿ 50 ಕ್ಕೂ ಹೆಚ್ಚು ದಿನಗಳಾಗಿವೆ. ಸ್ಪರ್ಧಿಗಳೆಲ್ಲ ಮನೆಗೆ ಸೆಟ್ ಆಗಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಇತ್ತೀಚೆತೆ ಇಬ್ಬರು ಸ್ಪರ್ಧಿಗಳು ಮನೆಗೆ ಬಂದಿದ್ದು, ರಜತ್ ಮನೆಗೆ ಚೆನ್ನಾಗಿ ಹೊಂದಾಣಿಕೆ ಆಗಿದ್ದಾರೆ, ಈ ಸೀಸನ್ ಗೆಲ್ಲುವ ಸ್ಪರ್ಧಿ ರಜತ್ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ. ರಜತ್ ಜೊತೆಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದ ಶೋಭಾ ಶೆಟ್ಟಿಗೆ ಮನೆಗೆ ಹೊಂದಿಕೊಳ್ಳಲು ಆಗುತ್ತಿಲ್ಲ. ಮನೆಗೆ ಬಂದ ಆರಂಭದಲ್ಲಿ ಜೋಶ್​ನಲ್ಲಿದ್ದ ಶೋಭಾ ಶೆಟ್ಟಿ ಕೆಲವೇ ದಿನಕ್ಕೆ ಮಂಕಾಗಿದ್ದರು. ಈಗಂತೂ ಮನೆಯಿಂದ ಹೊರಗೆ ಹೋಗುವ ಮಾತಾಡುತ್ತಿದ್ದಾರೆ.

ಈ ವಾರ ಶೋಭಾ ಶೆಟ್ಟಿ ನಾಮಿನೇಟ್ ಆಗಿದ್ದರು. ಆದರೆ ಜನ ವೋಟ್ ಮಾಡಿ ಅವರನ್ನು ಉಳಿಸಿದ್ದಾರೆ. ಆದರೆ ಶೋಭಾ ಶೆಟ್ಟಿಗೆ ಮನೆಯಲ್ಲಿ ಉಳಿದು ಕೊಳ್ಳಲು ಇಷ್ಟವಿಲ್ಲ. ಹೀಗೆಂದು ಸುದೀಪ್ ಮುಂದೆ ಹೇಳಿಕೊಂಡಿರುವ ಶೋಭಾ ಶೆಟ್ಟಿ, ಕೈ ಮುಗಿದು ಸುದೀಪ್ ಎದುರು ಅಂಗಲಾಚಿದ್ದು, ತಾನು ಮನೆಯಿಂದ ಹೊರಗೆ ಹೋಗಬೇಕು ಎಂದು ಕೇಳಿಕೊಂಡಿದ್ದಾರೆ.

ಆರಂಭದಲ್ಲಿ ಶೋಭಾ ಶೆಟ್ಟಿಗೆ ಬುದ್ಧಿವಾದ ಹೇಳಿದ ಸುದೀಪ್, ‘ನೀವು ಯಾವ ಉದ್ದೇಶ ಇಟ್ಟುಕೊಂಡು ಈ ಮನೆಗೆ ಬಂದಿರಿ ಎಂಬುದನ್ನು ಒಮ್ಮೆ ಯೋಚನೆ ಮಾಡಿ’ ಎಂದರು. ಆ ಬಳಿಕ, ‘ನಿಮಗೆ ಮತ ಹಾಕಿ ಉಳಿಸಿಕೊಂಡ ಮತದಾರರಿಗೆ ಏನು ಹೇಳುತ್ತೀರಿ, ಅವರಿಗೆ ನೀವು ಅನ್ಯಾಯ ಮಾಡುತ್ತಿದ್ದೀರಿ’ ಎಂದು ಸಹ ಸುದೀಪ್ ಹೇಳಿದರು. ಏನೇ ಆದರೂ ಸಹ ಶೋಭಾ ಶೆಟ್ಟಿ, ತಾನು ಮನೆಗೆ ಹೋಗಲೇ ಬೇಕು ಎಂದು ಒತ್ತಾಯ ಮಾಡಿದರು. ಕೊನೆಗೆ ಶೋಭಾ ಶೆಟ್ಟಿ ಮಾತುಗಳಿಗೆ ರೋಸಿ ಹೋದ ಸುದೀಪ್ ಬಿಗ್​ಬಾಸ್ ಮನೆ ಬಾಗಿಲು ತೆಗೆಸಿದ್ದಾರೆ. ಶೋಭಾ ಶೆಟ್ಟಿ ಮನೆಗೆ ಹೋಗಿದ್ದಾರೋ ಇಲ್ಲವೋ ಎಂಬುದು ಭಾನುವಾರ ರಾತ್ರಿ ಎಪಿಸೋಡ್ ಪ್ರಸಾರವಾದಾಗ ತಿಳಿದು ಬರಲಿದೆ.

ಇದನ್ನೂ ಓದಿ: ವೈಲ್ಡ್​ ಕಾರ್ಡ್ ಮೂಲಕ ಬಿಗ್​ಬಾಸ್​ಗೆ ಎಂಟ್ರಿ ಕೊಟ್ಟ ಗ್ಲಾಮರ್ ಗೊಂಬೆ

ಭಾನುವಾರದ ಎಪಿಸೋಡ್​ನಲ್ಲಿ ಶೋಭಾ ಶೆಟ್ಟಿ, ತಾನು ಮನೆಯಿಂದ ಹೊರಗೆ ಹೋಗುತ್ತೇನೆ ಎಂದು ಸುದೀಪ್ ಮುಂದೆ ಹಠ ಹಿಡಿದಿದ್ದಾರೆ. ಸುದೀಪ್ ಸಹ ಬೇಸರಗೊಂಡು ಗೇಟ್ ಓಪನ್ ಮಾಡಿದ್ದಾರೆ. ಅಷ್ಟಕ್ಕೂ ಶೋಭಾ ಶೆಟ್ಟಿ ಮನೆಯಿಂದ ಹೊರಗೆ ಹೋದರಾ?

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:15 am, Sun, 1 December 24

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?