AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಮೋಕ್ಷಿತಾ, ಇಂದು ಸ್ಪಂದನಾ; ಕಾರು ಹತ್ತಿ ಬಂದ ಬಳಿಕ ಭಾರೀ ಬದಲಾವಣೆ

ಮೋಕ್ಷಿತಾ ಪೈ ಅವರಂತೆ ಸ್ಪಂದನಾ ಕೂಡ ಬಿಗ್ ಬಾಸ್ ಮನೆಯಲ್ಲಿ ಮೌನದಿಂದ ಇದ್ದು, ಎಲಿಮಿನೇಷನ್ ಹಂತ ತಲುಪಿ ಮರಳಿ ಬಂದಿದ್ದಾರೆ. ಈ ಅನುಭವ ಸ್ಪಂದನಾ ಆಟವನ್ನು ಸಂಪೂರ್ಣವಾಗಿ ಬದಲಾಯಿಸಿದೆ. ಅವರು ಈಗ ಹೆಚ್ಚು ಆಕ್ರಮಣಕಾರಿಯಾಗಿ ಆಡುತ್ತಿದ್ದು, ಮಾಳು ಬೆಸ್ಟ್ ಎಂದಿದ್ದ ರಕ್ಷಿತಾ ಶೆಟ್ಟಿ ಜೊತೆ ಜಗಳ ಮಾಡಿದ್ದಾರೆ. ಇದು ಸ್ಪಂದನಾ ಫಿನಾಲೆ ವಾರ ತಲುಪುವ ಸಾಧ್ಯತೆಗಳನ್ನು ಹೆಚ್ಚಿಸಿದೆ.

ಅಂದು ಮೋಕ್ಷಿತಾ, ಇಂದು ಸ್ಪಂದನಾ; ಕಾರು ಹತ್ತಿ ಬಂದ ಬಳಿಕ ಭಾರೀ ಬದಲಾವಣೆ
ಸ್ಪಂದನಾ
ರಾಜೇಶ್ ದುಗ್ಗುಮನೆ
|

Updated on: Dec 31, 2025 | 7:39 AM

Share

ಮೋಕ್ಷಿತಾ ಪೈ ಅವರು ಕಳೆದ ಸೀಸನ್ ಅಲ್ಲಿ ಸೈಲೆಂಟ್ ಆಗಿದ್ದೇ ಹೆಚ್ಚು. ಬೇಕಾದ ಕಡೆಗಳಲ್ಲಿ ಅವರು ಸ್ಟ್ಯಾಂಡ್ ತೆಗೆದುಕೊಂಡಿದ್ದು ಇದೆ. ಆದರೆ, ಸೈಲೆಂಟ್ ಆಗಿದ್ದರು ಎಂಬ ಕಾರಣಕ್ಕೆ ಅವರನ್ನು ಎಲ್ಲರೂ ನೆಗ್ಲೆಕ್ಟ್ ಮಾಡಿದ್ದರು. ಆದರೆ, ಆ ಒಂದು ಕ್ಷಣ ಎಲ್ಲವನ್ನೂ ಬದಲಿಸಿತ್ತು. ಅವರು ಎಲಿಮಿನೇಷನ್ ಹಂತ ತಲುಪಿದ್ದರು. ಕಾರಿನಲ್ಲಿ ಹೊರ ಹೋಗಿ, ಸೇವ್ ಆಗಿ ಬಂದರು. ಮರಳಿ ಬರುತ್ತಿದ್ದಂತೆ ಅವರು ಚಾಲೆಂಜ್ ಮಾಡಿದ್ದರು. ಅವರ ಆಟ ಸಂಪೂರ್ಣ ಬದಲಾಯಿತು. ಈ ಬಾರಿ ಸ್ಪಂದನಾ (Spandana) ಕೂಡ ಹಾಗೆಯೇ ಆಗುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಮೋಕ್ಷಿತಾ ಪೈ ಎಲಿಮಿನೇಷನ್ ಹಂತ ತಲುಪಿ ಮರಳಿ ಬಂದಿದ್ದರಿಂದ ಅವರಲ್ಲಿ ಗೆಲ್ಲಬೇಕು ಎನ್ನುವ ಛಲ ಹುಟ್ಟಿಕೊಂಡಿತು. ಈ ಕಾರಣದಿಂದಲೇ ಅವರ ಆಟದಲ್ಲಿ ಬದಲಾವಣೆ ಮಾಡಿಕೊಂಡರು. ಕಾರು ಇಳಿಯುತ್ತಿದ್ದಂತೆ ಅವರು ಚಾಲೆಂಜ್ ಕೂಡ ಮಾಡಿದರು. ಅವರು ಟಾಪ್ ಐದರಲ್ಲಿ ಸ್ಥಾನ ಪಡೆದರು. ಸ್ಪಂದನಾ ಕೂಡ ಹಾಗೆಯೇ ಆಗಬಹುದೇ ಎಂಬ ಪ್ರಶ್ನೆ ಮೂಡಿದೆ.

ಕಳೆದ ವಾರ ಮಾಳು ಹಾಗೂ ಸ್ಪಂದನಾ ನಾಮಿನೇಷನ್ ಲಿಸ್ಟ್​​ನಲ್ಲಿ ಇದ್ದರು. ಈ ಪೈಕಿ ಇಬ್ಬರನ್ನೂ ಕಾರು ಹತ್ತಿಸಿ ಕಳುಹಿಸಲಾಗಿದೆ. ಕೊನೆಯಲ್ಲಿ ಸ್ಪಂದನಾ ಉಳಿದುಕೊಂಡಿದ್ದಾರೆ. ಅವರು ಬಿಗ್ ಬಾಸ್ ಮನೆಗೆ ಬರುತ್ತಿದ್ದಂತೆ ಕಣ್ಣೀರು ಹಾಕಿದ್ದಾರೆ. ಆಟದಲ್ಲೂ ಬದಲಾವಣೆ ಮಾಡಿಕೊಂಡಂತೆ ಕಾಣಿಸುತ್ತದೆ.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ: ನಾಮಿನೇಟ್ ಆದ ಸ್ಪಂದನಾ; ಈ ವಾರವಾದ್ರೂ ಎಲಿಮಿನೇಟ್ ಆಗ್ತಾರಾ?

ಮೊದಲು ಸ್ಪಂದನಾ ಯಾರ ಜೊತೆಯೂ ಜಗಳ ಮಾಡಿದವರಲ್ಲ. ಆದರೆ, ಈಗ ಆ ರೀತಿಯ ಜಗಳ ನಡೆದಿದೆ. ‘ಸ್ಪಂದನಾಗಿಂತ ಮಾಳು ಬೆಸ್ಟ್’ ಎಂದು ಹೇಳಿದ ವಿಷಯಕ್ಕೆ ಸಂಬಂಧಿಸಿ ಅವರು ರಕ್ಷಿತಾ ಶೆಟ್ಟಿ ಜೊತೆ ಜಗಳ ಮಾಡಿದ್ದಾರೆ. ಈ ಮೂಲಕ ಮನೆಯಲ್ಲಿ ಹೈಲೈಟ್ ಆಗಿದ್ದಾರೆ. ಈ ವಾರ ಅವರ ಹೆಸರು ನಾಮಿನೇನ್ ಲಿಸ್ಟ್​​ನಲ್ಲಿ ಇದೆ. ಅವರು ಉತ್ತಮವಾಗಿ ಆಡಿದರೆ ಸೇವ್ ಆದರೂ ಆಗಬಹುದು. ಈ ವಾರ ಯಾರು ಫಿನಾಲೆ ವೀಕ್ ತಲುಪುತ್ತಾರೆ ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!