AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಮೋಕ್ಷಿತಾ, ಇಂದು ಸ್ಪಂದನಾ; ಕಾರು ಹತ್ತಿ ಬಂದ ಬಳಿಕ ಭಾರೀ ಬದಲಾವಣೆ

ಮೋಕ್ಷಿತಾ ಪೈ ಅವರಂತೆ ಸ್ಪಂದನಾ ಕೂಡ ಬಿಗ್ ಬಾಸ್ ಮನೆಯಲ್ಲಿ ಮೌನದಿಂದ ಇದ್ದು, ಎಲಿಮಿನೇಷನ್ ಹಂತ ತಲುಪಿ ಮರಳಿ ಬಂದಿದ್ದಾರೆ. ಈ ಅನುಭವ ಸ್ಪಂದನಾ ಆಟವನ್ನು ಸಂಪೂರ್ಣವಾಗಿ ಬದಲಾಯಿಸಿದೆ. ಅವರು ಈಗ ಹೆಚ್ಚು ಆಕ್ರಮಣಕಾರಿಯಾಗಿ ಆಡುತ್ತಿದ್ದು, ಮಾಳು ಬೆಸ್ಟ್ ಎಂದಿದ್ದ ರಕ್ಷಿತಾ ಶೆಟ್ಟಿ ಜೊತೆ ಜಗಳ ಮಾಡಿದ್ದಾರೆ. ಇದು ಸ್ಪಂದನಾ ಫಿನಾಲೆ ವಾರ ತಲುಪುವ ಸಾಧ್ಯತೆಗಳನ್ನು ಹೆಚ್ಚಿಸಿದೆ.

ಅಂದು ಮೋಕ್ಷಿತಾ, ಇಂದು ಸ್ಪಂದನಾ; ಕಾರು ಹತ್ತಿ ಬಂದ ಬಳಿಕ ಭಾರೀ ಬದಲಾವಣೆ
ಸ್ಪಂದನಾ
ರಾಜೇಶ್ ದುಗ್ಗುಮನೆ
|

Updated on: Dec 31, 2025 | 7:39 AM

Share

ಮೋಕ್ಷಿತಾ ಪೈ ಅವರು ಕಳೆದ ಸೀಸನ್ ಅಲ್ಲಿ ಸೈಲೆಂಟ್ ಆಗಿದ್ದೇ ಹೆಚ್ಚು. ಬೇಕಾದ ಕಡೆಗಳಲ್ಲಿ ಅವರು ಸ್ಟ್ಯಾಂಡ್ ತೆಗೆದುಕೊಂಡಿದ್ದು ಇದೆ. ಆದರೆ, ಸೈಲೆಂಟ್ ಆಗಿದ್ದರು ಎಂಬ ಕಾರಣಕ್ಕೆ ಅವರನ್ನು ಎಲ್ಲರೂ ನೆಗ್ಲೆಕ್ಟ್ ಮಾಡಿದ್ದರು. ಆದರೆ, ಆ ಒಂದು ಕ್ಷಣ ಎಲ್ಲವನ್ನೂ ಬದಲಿಸಿತ್ತು. ಅವರು ಎಲಿಮಿನೇಷನ್ ಹಂತ ತಲುಪಿದ್ದರು. ಕಾರಿನಲ್ಲಿ ಹೊರ ಹೋಗಿ, ಸೇವ್ ಆಗಿ ಬಂದರು. ಮರಳಿ ಬರುತ್ತಿದ್ದಂತೆ ಅವರು ಚಾಲೆಂಜ್ ಮಾಡಿದ್ದರು. ಅವರ ಆಟ ಸಂಪೂರ್ಣ ಬದಲಾಯಿತು. ಈ ಬಾರಿ ಸ್ಪಂದನಾ (Spandana) ಕೂಡ ಹಾಗೆಯೇ ಆಗುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಮೋಕ್ಷಿತಾ ಪೈ ಎಲಿಮಿನೇಷನ್ ಹಂತ ತಲುಪಿ ಮರಳಿ ಬಂದಿದ್ದರಿಂದ ಅವರಲ್ಲಿ ಗೆಲ್ಲಬೇಕು ಎನ್ನುವ ಛಲ ಹುಟ್ಟಿಕೊಂಡಿತು. ಈ ಕಾರಣದಿಂದಲೇ ಅವರ ಆಟದಲ್ಲಿ ಬದಲಾವಣೆ ಮಾಡಿಕೊಂಡರು. ಕಾರು ಇಳಿಯುತ್ತಿದ್ದಂತೆ ಅವರು ಚಾಲೆಂಜ್ ಕೂಡ ಮಾಡಿದರು. ಅವರು ಟಾಪ್ ಐದರಲ್ಲಿ ಸ್ಥಾನ ಪಡೆದರು. ಸ್ಪಂದನಾ ಕೂಡ ಹಾಗೆಯೇ ಆಗಬಹುದೇ ಎಂಬ ಪ್ರಶ್ನೆ ಮೂಡಿದೆ.

ಕಳೆದ ವಾರ ಮಾಳು ಹಾಗೂ ಸ್ಪಂದನಾ ನಾಮಿನೇಷನ್ ಲಿಸ್ಟ್​​ನಲ್ಲಿ ಇದ್ದರು. ಈ ಪೈಕಿ ಇಬ್ಬರನ್ನೂ ಕಾರು ಹತ್ತಿಸಿ ಕಳುಹಿಸಲಾಗಿದೆ. ಕೊನೆಯಲ್ಲಿ ಸ್ಪಂದನಾ ಉಳಿದುಕೊಂಡಿದ್ದಾರೆ. ಅವರು ಬಿಗ್ ಬಾಸ್ ಮನೆಗೆ ಬರುತ್ತಿದ್ದಂತೆ ಕಣ್ಣೀರು ಹಾಕಿದ್ದಾರೆ. ಆಟದಲ್ಲೂ ಬದಲಾವಣೆ ಮಾಡಿಕೊಂಡಂತೆ ಕಾಣಿಸುತ್ತದೆ.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ: ನಾಮಿನೇಟ್ ಆದ ಸ್ಪಂದನಾ; ಈ ವಾರವಾದ್ರೂ ಎಲಿಮಿನೇಟ್ ಆಗ್ತಾರಾ?

ಮೊದಲು ಸ್ಪಂದನಾ ಯಾರ ಜೊತೆಯೂ ಜಗಳ ಮಾಡಿದವರಲ್ಲ. ಆದರೆ, ಈಗ ಆ ರೀತಿಯ ಜಗಳ ನಡೆದಿದೆ. ‘ಸ್ಪಂದನಾಗಿಂತ ಮಾಳು ಬೆಸ್ಟ್’ ಎಂದು ಹೇಳಿದ ವಿಷಯಕ್ಕೆ ಸಂಬಂಧಿಸಿ ಅವರು ರಕ್ಷಿತಾ ಶೆಟ್ಟಿ ಜೊತೆ ಜಗಳ ಮಾಡಿದ್ದಾರೆ. ಈ ಮೂಲಕ ಮನೆಯಲ್ಲಿ ಹೈಲೈಟ್ ಆಗಿದ್ದಾರೆ. ಈ ವಾರ ಅವರ ಹೆಸರು ನಾಮಿನೇನ್ ಲಿಸ್ಟ್​​ನಲ್ಲಿ ಇದೆ. ಅವರು ಉತ್ತಮವಾಗಿ ಆಡಿದರೆ ಸೇವ್ ಆದರೂ ಆಗಬಹುದು. ಈ ವಾರ ಯಾರು ಫಿನಾಲೆ ವೀಕ್ ತಲುಪುತ್ತಾರೆ ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ