AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಮೋಕ್ಷಿತಾ, ಇಂದು ಸ್ಪಂದನಾ; ಕಾರು ಹತ್ತಿ ಬಂದ ಬಳಿಕ ಭಾರೀ ಬದಲಾವಣೆ

ಮೋಕ್ಷಿತಾ ಪೈ ಅವರಂತೆ ಸ್ಪಂದನಾ ಕೂಡ ಬಿಗ್ ಬಾಸ್ ಮನೆಯಲ್ಲಿ ಮೌನದಿಂದ ಇದ್ದು, ಎಲಿಮಿನೇಷನ್ ಹಂತ ತಲುಪಿ ಮರಳಿ ಬಂದಿದ್ದಾರೆ. ಈ ಅನುಭವ ಸ್ಪಂದನಾ ಆಟವನ್ನು ಸಂಪೂರ್ಣವಾಗಿ ಬದಲಾಯಿಸಿದೆ. ಅವರು ಈಗ ಹೆಚ್ಚು ಆಕ್ರಮಣಕಾರಿಯಾಗಿ ಆಡುತ್ತಿದ್ದು, ಮಾಳು ಬೆಸ್ಟ್ ಎಂದಿದ್ದ ರಕ್ಷಿತಾ ಶೆಟ್ಟಿ ಜೊತೆ ಜಗಳ ಮಾಡಿದ್ದಾರೆ. ಇದು ಸ್ಪಂದನಾ ಫಿನಾಲೆ ವಾರ ತಲುಪುವ ಸಾಧ್ಯತೆಗಳನ್ನು ಹೆಚ್ಚಿಸಿದೆ.

ಅಂದು ಮೋಕ್ಷಿತಾ, ಇಂದು ಸ್ಪಂದನಾ; ಕಾರು ಹತ್ತಿ ಬಂದ ಬಳಿಕ ಭಾರೀ ಬದಲಾವಣೆ
ಸ್ಪಂದನಾ
ರಾಜೇಶ್ ದುಗ್ಗುಮನೆ
|

Updated on: Dec 31, 2025 | 7:39 AM

Share

ಮೋಕ್ಷಿತಾ ಪೈ ಅವರು ಕಳೆದ ಸೀಸನ್ ಅಲ್ಲಿ ಸೈಲೆಂಟ್ ಆಗಿದ್ದೇ ಹೆಚ್ಚು. ಬೇಕಾದ ಕಡೆಗಳಲ್ಲಿ ಅವರು ಸ್ಟ್ಯಾಂಡ್ ತೆಗೆದುಕೊಂಡಿದ್ದು ಇದೆ. ಆದರೆ, ಸೈಲೆಂಟ್ ಆಗಿದ್ದರು ಎಂಬ ಕಾರಣಕ್ಕೆ ಅವರನ್ನು ಎಲ್ಲರೂ ನೆಗ್ಲೆಕ್ಟ್ ಮಾಡಿದ್ದರು. ಆದರೆ, ಆ ಒಂದು ಕ್ಷಣ ಎಲ್ಲವನ್ನೂ ಬದಲಿಸಿತ್ತು. ಅವರು ಎಲಿಮಿನೇಷನ್ ಹಂತ ತಲುಪಿದ್ದರು. ಕಾರಿನಲ್ಲಿ ಹೊರ ಹೋಗಿ, ಸೇವ್ ಆಗಿ ಬಂದರು. ಮರಳಿ ಬರುತ್ತಿದ್ದಂತೆ ಅವರು ಚಾಲೆಂಜ್ ಮಾಡಿದ್ದರು. ಅವರ ಆಟ ಸಂಪೂರ್ಣ ಬದಲಾಯಿತು. ಈ ಬಾರಿ ಸ್ಪಂದನಾ (Spandana) ಕೂಡ ಹಾಗೆಯೇ ಆಗುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಮೋಕ್ಷಿತಾ ಪೈ ಎಲಿಮಿನೇಷನ್ ಹಂತ ತಲುಪಿ ಮರಳಿ ಬಂದಿದ್ದರಿಂದ ಅವರಲ್ಲಿ ಗೆಲ್ಲಬೇಕು ಎನ್ನುವ ಛಲ ಹುಟ್ಟಿಕೊಂಡಿತು. ಈ ಕಾರಣದಿಂದಲೇ ಅವರ ಆಟದಲ್ಲಿ ಬದಲಾವಣೆ ಮಾಡಿಕೊಂಡರು. ಕಾರು ಇಳಿಯುತ್ತಿದ್ದಂತೆ ಅವರು ಚಾಲೆಂಜ್ ಕೂಡ ಮಾಡಿದರು. ಅವರು ಟಾಪ್ ಐದರಲ್ಲಿ ಸ್ಥಾನ ಪಡೆದರು. ಸ್ಪಂದನಾ ಕೂಡ ಹಾಗೆಯೇ ಆಗಬಹುದೇ ಎಂಬ ಪ್ರಶ್ನೆ ಮೂಡಿದೆ.

ಕಳೆದ ವಾರ ಮಾಳು ಹಾಗೂ ಸ್ಪಂದನಾ ನಾಮಿನೇಷನ್ ಲಿಸ್ಟ್​​ನಲ್ಲಿ ಇದ್ದರು. ಈ ಪೈಕಿ ಇಬ್ಬರನ್ನೂ ಕಾರು ಹತ್ತಿಸಿ ಕಳುಹಿಸಲಾಗಿದೆ. ಕೊನೆಯಲ್ಲಿ ಸ್ಪಂದನಾ ಉಳಿದುಕೊಂಡಿದ್ದಾರೆ. ಅವರು ಬಿಗ್ ಬಾಸ್ ಮನೆಗೆ ಬರುತ್ತಿದ್ದಂತೆ ಕಣ್ಣೀರು ಹಾಕಿದ್ದಾರೆ. ಆಟದಲ್ಲೂ ಬದಲಾವಣೆ ಮಾಡಿಕೊಂಡಂತೆ ಕಾಣಿಸುತ್ತದೆ.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ: ನಾಮಿನೇಟ್ ಆದ ಸ್ಪಂದನಾ; ಈ ವಾರವಾದ್ರೂ ಎಲಿಮಿನೇಟ್ ಆಗ್ತಾರಾ?

ಮೊದಲು ಸ್ಪಂದನಾ ಯಾರ ಜೊತೆಯೂ ಜಗಳ ಮಾಡಿದವರಲ್ಲ. ಆದರೆ, ಈಗ ಆ ರೀತಿಯ ಜಗಳ ನಡೆದಿದೆ. ‘ಸ್ಪಂದನಾಗಿಂತ ಮಾಳು ಬೆಸ್ಟ್’ ಎಂದು ಹೇಳಿದ ವಿಷಯಕ್ಕೆ ಸಂಬಂಧಿಸಿ ಅವರು ರಕ್ಷಿತಾ ಶೆಟ್ಟಿ ಜೊತೆ ಜಗಳ ಮಾಡಿದ್ದಾರೆ. ಈ ಮೂಲಕ ಮನೆಯಲ್ಲಿ ಹೈಲೈಟ್ ಆಗಿದ್ದಾರೆ. ಈ ವಾರ ಅವರ ಹೆಸರು ನಾಮಿನೇನ್ ಲಿಸ್ಟ್​​ನಲ್ಲಿ ಇದೆ. ಅವರು ಉತ್ತಮವಾಗಿ ಆಡಿದರೆ ಸೇವ್ ಆದರೂ ಆಗಬಹುದು. ಈ ವಾರ ಯಾರು ಫಿನಾಲೆ ವೀಕ್ ತಲುಪುತ್ತಾರೆ ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?