AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಮುಂದೆ ಕಣ್ಣೀರು ಹಾಕಿದ ವಿನಯ್

Vinay Gowda: ಬಿಗ್​ಬಾಸ್ ಮನೆಯ ಅತ್ಯಂತ ಗಟ್ಟಿ ಸ್ಪರ್ಧಿ, ಆನೆ ಎಂದೆಲ್ಲ ಕರೆಸಿಕೊಂಡಿರುವ ವಿನಯ್ ಗೌಡ, ಬಿಗ್​ಬಾಸ್ ಮುಂದೆ ಕಣ್ಣೀರು ಹಾಕಿದ್ದಾರೆ.

ಬಿಗ್​ಬಾಸ್ ಮುಂದೆ ಕಣ್ಣೀರು ಹಾಕಿದ ವಿನಯ್
ವಿನಯ್ ಗೌಡ
ಮಂಜುನಾಥ ಸಿ.
|

Updated on: Nov 28, 2023 | 11:32 PM

Share

ಬಿಗ್​ಬಾಸ್ (Bigg Boss) ಮನೆಯಲ್ಲಿ ವಿನಯ್ ಅತ್ಯಂತ ಗಟ್ಟಿ ಸ್ಪರ್ಧಿ ಎಂದು ಆರಂಭದಿಂದಲೂ ನಿರೂಪಿಸಿಕೊಳ್ಳುತ್ತಲೇ ಬಂದಿದ್ದಾರೆ. ಬಹಳ ಅಗ್ರೆಸ್ಸಿವ್ ಆಗಿ ಆಟವಾಡುವುದಾಗಲಿ, ತಮ್ಮ ಅಭಿಪ್ರಾಯಗಳನ್ನು ಗಟ್ಟಿಯಾಗಿ ಹೇಳುವುದು, ಮನೆಯ ಇತರೆ ಸದಸ್ಯರ ಮೇಲೆ ಪ್ರಭಾವ ಬೀರುವುದಾಗಲಿ ಮಾಡುತ್ತಲೇ ಬಂದಿದ್ದಾರೆ. ಟಾಸ್ಕ್​ಗಳಲ್ಲಿ ಸಹ ಹಲವು ಬಾರಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಗಟ್ಟಿ ಮನೋಬಲವನ್ನು ಸಹ ಹೊಂದಿದ್ದಾರೆ. ಆದರೆ ಮಂಗಳವಾರ ಪ್ರಸಾರವಾದ ಎಪಿಸೋಡ್​ನಲ್ಲಿ ಮಾತ್ರ ವಿನಯ್ ಕಣ್ಣೀರು ಹಾಕಿದ್ದಾರೆ.

ಮನೆಗೆ ಇಬ್ಬರು ಹೊಸ ಸ್ಪರ್ಧಿಗಳು ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಂದಿದ್ದಾರೆ. ಅವರಲ್ಲಿ ಒಬ್ಬರಾದ ಪವಿ ಪೂವಪ್ಪ ಅವರು ಸ್ನೇಹಿತ್, ವಿನಯ್ ಹಾಗೂ ಇತತರೊಟ್ಟಿಗೆ ಮಾತನಾಡುತ್ತಿದ್ದರು. ಈ ವೇಳೆ ಸ್ನೇಹಿತ್, ಬಿಗ್​ಬಾಸ್ ಮನೆಯ ಸ್ಪರ್ಧಿಗಳ ಬಗ್ಗೆ ಹೊರಗೆ ಯಾವ ರೀತಿಯ ಅಭಿಪ್ರಾಯವಿದೆ ಎಂದು ಪವಿ ಅವರನ್ನು ಕೇಳಿ ತಿಳಿದುಕೊಳ್ಳುತ್ತಿದ್ದರು. ಭಾರಿ ಸದ್ದು ಮನೆಯ ಘಟನೆ ಯಾವುದು ಎಂದು ಸ್ನೇಹಿತ್ ಕೇಳಿದಾಗ, ಪವಿ, ಬಳೆಯ ಎಪಿಸೋಡ್ ಭಾರಿ ಸದ್ದು ಮಾಡಿತು ಎಂದರು. ಆ ವಿಷಯ ಸೋಷಿಯಲ್ ಮೀಡಿಯಾಗಳಲ್ಲಿ ಬಹಳ ಚರ್ಚೆಯಾಯಿತು ಎಂದು ಸಹ ಹೇಳಿದರು.

ಪವಿ ಅದನ್ನು ವಿವರವಾಗಿ, ವಿನಯ್​ರ ಪತ್ನಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ವಿಷಯವನ್ನು ಸಹ ವಿನಯ್ ಬಳಿ ಹೇಳಿದರು ಆದರೆ ಅದನ್ನು ಇಂದಿನ ಎಪಿಸೋಡ್​ನಲ್ಲಿ ತೋರಿಸಲಿಲ್ಲ. ಆದರೆ ಈ ವಿಷಯ ಕೇಳಿ ವಿನಯ್ ಬಹಳ ಬೇಸರಗೊಂಡರು. ಚೇಂಜಿಂಗ್​ ರೂಂಗೆ ಹೋಗಿ ಕಣ್ಣೀರು ಹಾಕಿದರು. ಅದಾದ ಬಳಿಕ ಸೀಕ್ರೆಟ್ ರೂಂಗೆ ಬಂದು ಬಿಗ್​ಬಾಸ್ ಬಳಿ ತಮ್ಮ ಕುಟುಂಬದ ಯೋಗಕ್ಷೇಮ ವಿಚಾರಿಸಿ ಕಣ್ಣೀರು ಹಾಕಿದರು. ನನ್ನನ್ನು ಕೆಟ್ಟವನು ಅಂದುಕೊಳ್ಳಲಿ ಪರವಾಗಿಲ್ಲ ಆದರೆ ನನ್ನಿಂದ ನನ್ನ ಕುಟುಂಬಕ್ಕೆ ಏನೂ ಆಗಬಾರದು, ನಾನು ಬಾಯಿತಪ್ಪಿ ಆಡಿದ ಮಾತು ಅದಾಗಿತ್ತು ಎಂದು ಕೇಳಿಕೊಂಡರು.

ಇದನ್ನೂ ಓದಿ:ಬಿಗ್​ಬಾಸ್ ಏಳನೇ ವಾರದಲ್ಲಿ ಯಾರಿಗೆ ಹೆಚ್ಚು ಮತ? ಸಂಗೀತಾಗೆ ಎಷ್ಟನೇ ಸ್ಥಾನ?

ವಿನಯ್ ಅವರನ್ನು ಸಮಾಧಾನದಿಂದ ಇರುವಂತೆ ಹೇಳಿದ ಬಿಗ್​ಬಾಸ್, ನೀವು ನಿಮ್ಮ ಕುಟುಂಬವನ್ನು ಎಷ್ಟು ಪ್ರೀತಿಸುತ್ತೀರಿ ಎಂಬುದು ನಮಗೆ ಅರಿವಿದೆ. ಅವರು ಕ್ಷೇಮದಿಂದಲೇ ಇದ್ದಾರೆ. ಅರ್ಥವಿಲ್ಲದ ಮಾತುಗಳಿಗೆ ನೀವು ಕಿವಿಗೊಡಬೇಡಿ, ಅದನ್ನು ನಿಜವೆಂದು ಸಹ ನಂಬಬೇಡಿ ಎಂದು ಬಿಗ್​ಬಾಸ್ ಬುದ್ಧಿ ಹೇಳಿದರು. ಬಿಗ್​ಬಾಸ್ ಮಾತಿನಿಂದ ಧೈರ್ಯ ತಂದುಕೊಂಡ ವಿನಯ್, ನಾನು 100% ಪರಿಶ್ರಮ ಹಾಕಿ ಆಟ ಆಡುತ್ತೀನಿ ಬಿಗ್​ಬಾಸ್ ಎಂದು ಹೇಳಿ ಸೀಕ್ರೆಟ್ ರೂಂನಿಂದ ಹೊರಗೆ ಹೋದರು.

ಸಂಗೀತಾ-ಕಾರ್ತಿಕ್ ಹಾಗೂ ವಿನಯ್ ನಡುವೆ ಟಾಸ್ಕ್ ವಿಷಯಕ್ಕೆ ಜಗಳ ಬಂದಾಗ ವಿನಯ್ ಅತಿರೇಕದ ವರ್ತನೆ ತೋರಿದ್ದರು. ಬಳೆಗಳ ಬಗ್ಗೆ ನಿಂದನಾತ್ಮಕವಾಗಿ ಮಾತನಾಡಿದ್ದರು. ವಿನಯ್​ರ ಅತಿರೇಕದ ವರ್ತನೆಯನ್ನು ಸಾಮಾಜಿಕ ಜಾಲತಾಣದಲ್ಲಿ ಜನ ಹೀಗಳೆದಿದ್ದರು. ಆ ವೇಳೆ ವಿನಯ್​ರ ಪತ್ನಿಗೂ ಸಾಮಾಜಿಕ ಜಾಲತಾಣದಲ್ಲಿ ಎಂಥಹಾ ಕೆಟ್ಟ ಪತಿಯೊಟ್ಟಿಗೆ ಇದ್ದೀರ ಇತ್ಯಾದಿ ನಿಂದನೆಗಳನ್ನು, ಬೆದರಿಕೆಗಳನ್ನು ಹಾಕಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ