AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ಮೊದಲ ಕ್ಯಾಪ್ಟನ್ ಹಂಸಾಗೆ ಕಿಚ್ಚನ ಕ್ಲಾಸ್

ಬಿಗ್​ಬಾಸ್ ಕನ್ನಡ ಸೀಸನ್ 11ರ ಮೊದಲ ವಾರದ ಪಂಚಾಯಿತಿ ಶನಿವಾರ ನಡೆದಿದ್ದು, ಸುದೀಪ್ ಪ್ರತಿಬಾರಿಯಂತೆ ಈ ಬಾರಿಯೂ ಸ್ಪರ್ಧಿಗಳಿಗೆ ತಮ್ಮದೇ ರೀತಿಯಲ್ಲಿ ಎಚ್ಚರಿಕೆಗಳನ್ನು ನೀಡಿದರು. ಈ ಸೀಸನ್​ನ ಮೊದಲ ಕ್ಯಾಪ್ಟನ್ ಹಂಸಾ ತಮ್ಮ ಜವಾಬ್ದಾರಿ ಮರೆತಿದ್ದರಿಂದ ಟೀಕೆಗೆ ಗುರಿಯಾದರು.

ಮನೆಯ ಮೊದಲ ಕ್ಯಾಪ್ಟನ್ ಹಂಸಾಗೆ ಕಿಚ್ಚನ ಕ್ಲಾಸ್
ಮಂಜುನಾಥ ಸಿ.
|

Updated on:Oct 05, 2024 | 11:34 PM

Share

ಬಿಗ್​ಬಾಸ್ ಕನ್ನಡ ಸೀಸನ್ 11ರ ಮೊದಲ ಕ್ಯಾಪ್ಟನ್ ಆಗಿದ್ದಾರೆ ಸ್ವರ್ಗವಾಸಿ ಹಂಸ. ಕ್ಯಾಪ್ಟನ್ ಆಗಲು ಸಾಕಷ್ಟು ರಾಜಕೀಯವನ್ನು ಹಂಸ ಮಾಡಿದ್ದರು. ವಿಶೇಷವಾಗಿ ನರಕವಾಸಿಗಳ ಜೊತೆಗೆ ಒಳ ಒಪ್ಪಂದ ಸಹ ಮಾಡಿಕೊಂಡಿದ್ದರು. ಏನಾದರೂ ಆಗಲಿ ಕ್ಯಾಪ್ಟನ್ ಆಗಲೇ ಬೇಕು ಎಂದು ನಿರ್ಣಯಿಸಿ ಆಟ ಆಡಿದ್ದ ಹಂಸ ಕೊನೆಗೆ ತಮ್ಮ ರಾಜಕೀಯದಿಂದಲೇ ಕ್ಯಾಪ್ಟನ್ ಆದರು. ಒಂದು ವಾರದ ಇಮ್ಯೂನಿಟಿ ಪಡೆವ ಜೊತೆಗೆ ಕ್ಯಾಪ್ಟನ್ ರೂಂ ಸಹ ಪಡೆದುಕೊಂಡರು.

ಆದರೆ ಕ್ಯಾಪ್ಟನ್ ಆದ ಖುಷಿ ಹಂಸಗೆ ಹೆಚ್ಚು ಸಮಯ ಉಳಿಯಲಿಲ್ಲ. ಶನಿವಾರ ನಡೆದ ಈ ಸೀಸನ್​ನ ಮೊದಲ ವಾರದ ಪಂಚಾಯಿತಿಯಲ್ಲಿ ಕಿಚ್ಚ ಸುದೀಪ್, ಹಂಸಾರ ರಾಜಕೀಯವನ್ನು, ಕ್ಯಾಪ್ಟನ್ ಆದ ಮೇಲೆ ಅವರು ಜವಾಬ್ದಾರಿ ಮರೆತು ವರ್ತಿಸಿದ ರೀತಿಯನ್ನು ಕಟುವಾಗಿ ಟೀಕೆ ಮಾಡಿದರು. ಮಾತ್ರವಲ್ಲದೆ ಅವರು ಮಾಡಿಕೊಂಡಿದ್ದ ಒಳ ಒಪ್ಪಂದವನ್ನು ಇತರೆ ಸ್ಪರ್ಧಿಗಳ ಎದುರು ಬಯಲು ಮಾಡಿದರು.

ಇದನ್ನೂ ಓದಿ:ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ: ಕಿಚ್ಚನ ಖಡಕ್ ಡೈಲಾಗ್

ನಮಗೆ ಬೆಂಬಲ ನೀಡಿದರೆ ನೀವು ಹೇಳಿದಂತೆಯೇ ಕೇಳುತ್ತೇನೆ ಎಂದು ನರಕವಾಸಿಗಳಿಗೆ ಮಾತು ಕೊಟ್ಟಿದ್ದರಂತೆ. ಇನ್ನು ಸ್ವರ್ಗವಾಸಿಗಳಲ್ಲಿಯೂ ಕೆಲವರಿಗೆ ಕೆಲವು ಭರವಸೆಗಳನ್ನು ನೀಡಿದ್ದಾರೆ. ಕ್ಯಾಪ್ಟನ್ ಆದ ಬಳಿಕವೂ ಸಹ ನಿಯಮ ಮೀರಿ ನರಕವಾಸಿಗಳಿಗೆ ಕೆಲವು ರಿಯಾಯಿತಿಗಳನ್ನು ಕೊಟ್ಟಿದ್ದನ್ನು ಸುದೀಪ್ ಟೀಕೆ ಮಾಡಿದರು. ನಿಯಮದ ಪ್ರಕಾರ ನರಕವಾಸಿಗಳು ಮೇಕಪ್ ರೂಂನಿಂದ ಹೊರಗೆ ಬರುವಂತಿರಲಿಲ್ಲ ಆದರೆ ಶನಿವಾರದ ಎಪಿಸೋಡ್​ಗೆ ಮೇಕಪ್​ ರೂಂಗೆ ಬಂದು ಮೇಕಪ್ ಮಾಡಿಕೊಂಡಿದ್ದರು ನರಕವಾಸಿಗಳು ಇದರ ಬಗ್ಗೆಯೂ ಸುದೀಪ್ ಆಕ್ಷೇಪ ಎತ್ತಿದರು.

ಬಿಗ್​ಬಾಸ್ ಮನೆಯಲ್ಲಿ ಕ್ಯಾಪ್ಟನ್ ಸ್ಥಾನಕ್ಕೆ ವಿಶೇಷ ಗೌರವ, ಜವಾಬ್ದಾರಿ ಇದೆ ಈ ಬಾರಿಯೂ ಕ್ಯಾಪ್ಟನ್​ಗೆ ಕೆಲ ವಿಶೇಷ ಶಕ್ತಿಗಳು ಸಹ ಇವೆ. ಒಬ್ಬ ನರಕವಾಸಿಯನ್ನು ಸ್ವರ್ಗಕ್ಕೆ ಕರೆದುಕೊಳ್ಳುವ ಶಕ್ತಿ ಇದೆ. ಹೀಗಿರುವಾಗ ನೀವು ಹೀಗೆ ನಿಯಮ ಮೀರಿ ನಡೆದುಕೊಳ್ಳುವುದು ಸೂಕ್ತವಲ್ಲ ಎಂದು ಸುದೀಪ್ ತಮ್ಮದೇ ರೀತಿಯಲ್ಲಿ ವಿನಯದಿಂದಲೇ ಅರ್ಥ ಮಾಡಿಸಿದರು. ಆರಂಭದಲ್ಲಿ ಖುಷಿಯಾಗಿದ್ದ ಹಂಸಾ ಆ ಬಳಿಕ ಸುದೀಪ್​ ಹೇಳಿದ ಮಾತುಗಳನ್ನು ಅರ್ಥ ಮಾಡಿಕೊಂಡು ಇನ್ನು ಮುಂದೆ ಸರಿಯಾಗಿ ಇರುವುದಾಗಿಯೂ, ನಿಯಮಗಳನ್ನು ಸರಿಯಾಗಿ ಫಾಲೋ ಮಾಡುವುದಾಗಿಯೂ ಇತರರನ್ನು ನಿಯಂತ್ರಣದಲ್ಲಿ ಇಡುವುದಾಗಿ ಭರವಸೆ ನೀಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:31 pm, Sat, 5 October 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ