AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ಮೊದಲ ಕ್ಯಾಪ್ಟನ್ ಹಂಸಾಗೆ ಕಿಚ್ಚನ ಕ್ಲಾಸ್

ಬಿಗ್​ಬಾಸ್ ಕನ್ನಡ ಸೀಸನ್ 11ರ ಮೊದಲ ವಾರದ ಪಂಚಾಯಿತಿ ಶನಿವಾರ ನಡೆದಿದ್ದು, ಸುದೀಪ್ ಪ್ರತಿಬಾರಿಯಂತೆ ಈ ಬಾರಿಯೂ ಸ್ಪರ್ಧಿಗಳಿಗೆ ತಮ್ಮದೇ ರೀತಿಯಲ್ಲಿ ಎಚ್ಚರಿಕೆಗಳನ್ನು ನೀಡಿದರು. ಈ ಸೀಸನ್​ನ ಮೊದಲ ಕ್ಯಾಪ್ಟನ್ ಹಂಸಾ ತಮ್ಮ ಜವಾಬ್ದಾರಿ ಮರೆತಿದ್ದರಿಂದ ಟೀಕೆಗೆ ಗುರಿಯಾದರು.

ಮನೆಯ ಮೊದಲ ಕ್ಯಾಪ್ಟನ್ ಹಂಸಾಗೆ ಕಿಚ್ಚನ ಕ್ಲಾಸ್
ಮಂಜುನಾಥ ಸಿ.
|

Updated on:Oct 05, 2024 | 11:34 PM

Share

ಬಿಗ್​ಬಾಸ್ ಕನ್ನಡ ಸೀಸನ್ 11ರ ಮೊದಲ ಕ್ಯಾಪ್ಟನ್ ಆಗಿದ್ದಾರೆ ಸ್ವರ್ಗವಾಸಿ ಹಂಸ. ಕ್ಯಾಪ್ಟನ್ ಆಗಲು ಸಾಕಷ್ಟು ರಾಜಕೀಯವನ್ನು ಹಂಸ ಮಾಡಿದ್ದರು. ವಿಶೇಷವಾಗಿ ನರಕವಾಸಿಗಳ ಜೊತೆಗೆ ಒಳ ಒಪ್ಪಂದ ಸಹ ಮಾಡಿಕೊಂಡಿದ್ದರು. ಏನಾದರೂ ಆಗಲಿ ಕ್ಯಾಪ್ಟನ್ ಆಗಲೇ ಬೇಕು ಎಂದು ನಿರ್ಣಯಿಸಿ ಆಟ ಆಡಿದ್ದ ಹಂಸ ಕೊನೆಗೆ ತಮ್ಮ ರಾಜಕೀಯದಿಂದಲೇ ಕ್ಯಾಪ್ಟನ್ ಆದರು. ಒಂದು ವಾರದ ಇಮ್ಯೂನಿಟಿ ಪಡೆವ ಜೊತೆಗೆ ಕ್ಯಾಪ್ಟನ್ ರೂಂ ಸಹ ಪಡೆದುಕೊಂಡರು.

ಆದರೆ ಕ್ಯಾಪ್ಟನ್ ಆದ ಖುಷಿ ಹಂಸಗೆ ಹೆಚ್ಚು ಸಮಯ ಉಳಿಯಲಿಲ್ಲ. ಶನಿವಾರ ನಡೆದ ಈ ಸೀಸನ್​ನ ಮೊದಲ ವಾರದ ಪಂಚಾಯಿತಿಯಲ್ಲಿ ಕಿಚ್ಚ ಸುದೀಪ್, ಹಂಸಾರ ರಾಜಕೀಯವನ್ನು, ಕ್ಯಾಪ್ಟನ್ ಆದ ಮೇಲೆ ಅವರು ಜವಾಬ್ದಾರಿ ಮರೆತು ವರ್ತಿಸಿದ ರೀತಿಯನ್ನು ಕಟುವಾಗಿ ಟೀಕೆ ಮಾಡಿದರು. ಮಾತ್ರವಲ್ಲದೆ ಅವರು ಮಾಡಿಕೊಂಡಿದ್ದ ಒಳ ಒಪ್ಪಂದವನ್ನು ಇತರೆ ಸ್ಪರ್ಧಿಗಳ ಎದುರು ಬಯಲು ಮಾಡಿದರು.

ಇದನ್ನೂ ಓದಿ:ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ: ಕಿಚ್ಚನ ಖಡಕ್ ಡೈಲಾಗ್

ನಮಗೆ ಬೆಂಬಲ ನೀಡಿದರೆ ನೀವು ಹೇಳಿದಂತೆಯೇ ಕೇಳುತ್ತೇನೆ ಎಂದು ನರಕವಾಸಿಗಳಿಗೆ ಮಾತು ಕೊಟ್ಟಿದ್ದರಂತೆ. ಇನ್ನು ಸ್ವರ್ಗವಾಸಿಗಳಲ್ಲಿಯೂ ಕೆಲವರಿಗೆ ಕೆಲವು ಭರವಸೆಗಳನ್ನು ನೀಡಿದ್ದಾರೆ. ಕ್ಯಾಪ್ಟನ್ ಆದ ಬಳಿಕವೂ ಸಹ ನಿಯಮ ಮೀರಿ ನರಕವಾಸಿಗಳಿಗೆ ಕೆಲವು ರಿಯಾಯಿತಿಗಳನ್ನು ಕೊಟ್ಟಿದ್ದನ್ನು ಸುದೀಪ್ ಟೀಕೆ ಮಾಡಿದರು. ನಿಯಮದ ಪ್ರಕಾರ ನರಕವಾಸಿಗಳು ಮೇಕಪ್ ರೂಂನಿಂದ ಹೊರಗೆ ಬರುವಂತಿರಲಿಲ್ಲ ಆದರೆ ಶನಿವಾರದ ಎಪಿಸೋಡ್​ಗೆ ಮೇಕಪ್​ ರೂಂಗೆ ಬಂದು ಮೇಕಪ್ ಮಾಡಿಕೊಂಡಿದ್ದರು ನರಕವಾಸಿಗಳು ಇದರ ಬಗ್ಗೆಯೂ ಸುದೀಪ್ ಆಕ್ಷೇಪ ಎತ್ತಿದರು.

ಬಿಗ್​ಬಾಸ್ ಮನೆಯಲ್ಲಿ ಕ್ಯಾಪ್ಟನ್ ಸ್ಥಾನಕ್ಕೆ ವಿಶೇಷ ಗೌರವ, ಜವಾಬ್ದಾರಿ ಇದೆ ಈ ಬಾರಿಯೂ ಕ್ಯಾಪ್ಟನ್​ಗೆ ಕೆಲ ವಿಶೇಷ ಶಕ್ತಿಗಳು ಸಹ ಇವೆ. ಒಬ್ಬ ನರಕವಾಸಿಯನ್ನು ಸ್ವರ್ಗಕ್ಕೆ ಕರೆದುಕೊಳ್ಳುವ ಶಕ್ತಿ ಇದೆ. ಹೀಗಿರುವಾಗ ನೀವು ಹೀಗೆ ನಿಯಮ ಮೀರಿ ನಡೆದುಕೊಳ್ಳುವುದು ಸೂಕ್ತವಲ್ಲ ಎಂದು ಸುದೀಪ್ ತಮ್ಮದೇ ರೀತಿಯಲ್ಲಿ ವಿನಯದಿಂದಲೇ ಅರ್ಥ ಮಾಡಿಸಿದರು. ಆರಂಭದಲ್ಲಿ ಖುಷಿಯಾಗಿದ್ದ ಹಂಸಾ ಆ ಬಳಿಕ ಸುದೀಪ್​ ಹೇಳಿದ ಮಾತುಗಳನ್ನು ಅರ್ಥ ಮಾಡಿಕೊಂಡು ಇನ್ನು ಮುಂದೆ ಸರಿಯಾಗಿ ಇರುವುದಾಗಿಯೂ, ನಿಯಮಗಳನ್ನು ಸರಿಯಾಗಿ ಫಾಲೋ ಮಾಡುವುದಾಗಿಯೂ ಇತರರನ್ನು ನಿಯಂತ್ರಣದಲ್ಲಿ ಇಡುವುದಾಗಿ ಭರವಸೆ ನೀಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:31 pm, Sat, 5 October 24

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್