AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ಮೊದಲ ಕ್ಯಾಪ್ಟನ್ ಹಂಸಾಗೆ ಕಿಚ್ಚನ ಕ್ಲಾಸ್

ಬಿಗ್​ಬಾಸ್ ಕನ್ನಡ ಸೀಸನ್ 11ರ ಮೊದಲ ವಾರದ ಪಂಚಾಯಿತಿ ಶನಿವಾರ ನಡೆದಿದ್ದು, ಸುದೀಪ್ ಪ್ರತಿಬಾರಿಯಂತೆ ಈ ಬಾರಿಯೂ ಸ್ಪರ್ಧಿಗಳಿಗೆ ತಮ್ಮದೇ ರೀತಿಯಲ್ಲಿ ಎಚ್ಚರಿಕೆಗಳನ್ನು ನೀಡಿದರು. ಈ ಸೀಸನ್​ನ ಮೊದಲ ಕ್ಯಾಪ್ಟನ್ ಹಂಸಾ ತಮ್ಮ ಜವಾಬ್ದಾರಿ ಮರೆತಿದ್ದರಿಂದ ಟೀಕೆಗೆ ಗುರಿಯಾದರು.

ಮನೆಯ ಮೊದಲ ಕ್ಯಾಪ್ಟನ್ ಹಂಸಾಗೆ ಕಿಚ್ಚನ ಕ್ಲಾಸ್
ಮಂಜುನಾಥ ಸಿ.
|

Updated on:Oct 05, 2024 | 11:34 PM

Share

ಬಿಗ್​ಬಾಸ್ ಕನ್ನಡ ಸೀಸನ್ 11ರ ಮೊದಲ ಕ್ಯಾಪ್ಟನ್ ಆಗಿದ್ದಾರೆ ಸ್ವರ್ಗವಾಸಿ ಹಂಸ. ಕ್ಯಾಪ್ಟನ್ ಆಗಲು ಸಾಕಷ್ಟು ರಾಜಕೀಯವನ್ನು ಹಂಸ ಮಾಡಿದ್ದರು. ವಿಶೇಷವಾಗಿ ನರಕವಾಸಿಗಳ ಜೊತೆಗೆ ಒಳ ಒಪ್ಪಂದ ಸಹ ಮಾಡಿಕೊಂಡಿದ್ದರು. ಏನಾದರೂ ಆಗಲಿ ಕ್ಯಾಪ್ಟನ್ ಆಗಲೇ ಬೇಕು ಎಂದು ನಿರ್ಣಯಿಸಿ ಆಟ ಆಡಿದ್ದ ಹಂಸ ಕೊನೆಗೆ ತಮ್ಮ ರಾಜಕೀಯದಿಂದಲೇ ಕ್ಯಾಪ್ಟನ್ ಆದರು. ಒಂದು ವಾರದ ಇಮ್ಯೂನಿಟಿ ಪಡೆವ ಜೊತೆಗೆ ಕ್ಯಾಪ್ಟನ್ ರೂಂ ಸಹ ಪಡೆದುಕೊಂಡರು.

ಆದರೆ ಕ್ಯಾಪ್ಟನ್ ಆದ ಖುಷಿ ಹಂಸಗೆ ಹೆಚ್ಚು ಸಮಯ ಉಳಿಯಲಿಲ್ಲ. ಶನಿವಾರ ನಡೆದ ಈ ಸೀಸನ್​ನ ಮೊದಲ ವಾರದ ಪಂಚಾಯಿತಿಯಲ್ಲಿ ಕಿಚ್ಚ ಸುದೀಪ್, ಹಂಸಾರ ರಾಜಕೀಯವನ್ನು, ಕ್ಯಾಪ್ಟನ್ ಆದ ಮೇಲೆ ಅವರು ಜವಾಬ್ದಾರಿ ಮರೆತು ವರ್ತಿಸಿದ ರೀತಿಯನ್ನು ಕಟುವಾಗಿ ಟೀಕೆ ಮಾಡಿದರು. ಮಾತ್ರವಲ್ಲದೆ ಅವರು ಮಾಡಿಕೊಂಡಿದ್ದ ಒಳ ಒಪ್ಪಂದವನ್ನು ಇತರೆ ಸ್ಪರ್ಧಿಗಳ ಎದುರು ಬಯಲು ಮಾಡಿದರು.

ಇದನ್ನೂ ಓದಿ:ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ: ಕಿಚ್ಚನ ಖಡಕ್ ಡೈಲಾಗ್

ನಮಗೆ ಬೆಂಬಲ ನೀಡಿದರೆ ನೀವು ಹೇಳಿದಂತೆಯೇ ಕೇಳುತ್ತೇನೆ ಎಂದು ನರಕವಾಸಿಗಳಿಗೆ ಮಾತು ಕೊಟ್ಟಿದ್ದರಂತೆ. ಇನ್ನು ಸ್ವರ್ಗವಾಸಿಗಳಲ್ಲಿಯೂ ಕೆಲವರಿಗೆ ಕೆಲವು ಭರವಸೆಗಳನ್ನು ನೀಡಿದ್ದಾರೆ. ಕ್ಯಾಪ್ಟನ್ ಆದ ಬಳಿಕವೂ ಸಹ ನಿಯಮ ಮೀರಿ ನರಕವಾಸಿಗಳಿಗೆ ಕೆಲವು ರಿಯಾಯಿತಿಗಳನ್ನು ಕೊಟ್ಟಿದ್ದನ್ನು ಸುದೀಪ್ ಟೀಕೆ ಮಾಡಿದರು. ನಿಯಮದ ಪ್ರಕಾರ ನರಕವಾಸಿಗಳು ಮೇಕಪ್ ರೂಂನಿಂದ ಹೊರಗೆ ಬರುವಂತಿರಲಿಲ್ಲ ಆದರೆ ಶನಿವಾರದ ಎಪಿಸೋಡ್​ಗೆ ಮೇಕಪ್​ ರೂಂಗೆ ಬಂದು ಮೇಕಪ್ ಮಾಡಿಕೊಂಡಿದ್ದರು ನರಕವಾಸಿಗಳು ಇದರ ಬಗ್ಗೆಯೂ ಸುದೀಪ್ ಆಕ್ಷೇಪ ಎತ್ತಿದರು.

ಬಿಗ್​ಬಾಸ್ ಮನೆಯಲ್ಲಿ ಕ್ಯಾಪ್ಟನ್ ಸ್ಥಾನಕ್ಕೆ ವಿಶೇಷ ಗೌರವ, ಜವಾಬ್ದಾರಿ ಇದೆ ಈ ಬಾರಿಯೂ ಕ್ಯಾಪ್ಟನ್​ಗೆ ಕೆಲ ವಿಶೇಷ ಶಕ್ತಿಗಳು ಸಹ ಇವೆ. ಒಬ್ಬ ನರಕವಾಸಿಯನ್ನು ಸ್ವರ್ಗಕ್ಕೆ ಕರೆದುಕೊಳ್ಳುವ ಶಕ್ತಿ ಇದೆ. ಹೀಗಿರುವಾಗ ನೀವು ಹೀಗೆ ನಿಯಮ ಮೀರಿ ನಡೆದುಕೊಳ್ಳುವುದು ಸೂಕ್ತವಲ್ಲ ಎಂದು ಸುದೀಪ್ ತಮ್ಮದೇ ರೀತಿಯಲ್ಲಿ ವಿನಯದಿಂದಲೇ ಅರ್ಥ ಮಾಡಿಸಿದರು. ಆರಂಭದಲ್ಲಿ ಖುಷಿಯಾಗಿದ್ದ ಹಂಸಾ ಆ ಬಳಿಕ ಸುದೀಪ್​ ಹೇಳಿದ ಮಾತುಗಳನ್ನು ಅರ್ಥ ಮಾಡಿಕೊಂಡು ಇನ್ನು ಮುಂದೆ ಸರಿಯಾಗಿ ಇರುವುದಾಗಿಯೂ, ನಿಯಮಗಳನ್ನು ಸರಿಯಾಗಿ ಫಾಲೋ ಮಾಡುವುದಾಗಿಯೂ ಇತರರನ್ನು ನಿಯಂತ್ರಣದಲ್ಲಿ ಇಡುವುದಾಗಿ ಭರವಸೆ ನೀಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:31 pm, Sat, 5 October 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ