AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನೊಳಗೆ ಎಲ್ಲರೂ ಇದ್ದಾರೆ, ಪ್ರೇಕ್ಷಕರೆದುರು ಇದ್ದಿದ್ದು ಇದ್ದಹಾಗೆ ಹೇಳಿದ ಕಿಚ್ಚ ಸುದೀಪ್

Bigg Boss Kannada 12: ಕಳೆದ ಬಿಗ್​​ಬಾಸ್ ಕನ್ನಡ 11ನೇ ಸೀಸನ್​​ನಲ್ಲಿ ಸುದೀಪ್ ಅವರು ಇದು ನನ್ನ ಕೊನೆಯ ಸೀಸನ್ ಎಂದಿದ್ದರು. ಆದರೆ ಅವರ ಸ್ಥಾನ ತುಂಬಬಲ್ಲ ಮತ್ತೊಬ್ಬ ವ್ಯಕ್ತಿ ಇಡೀ ಕರ್ನಾಟಕದಲ್ಲಿ ಸಿಗಲಿಲ್ಲ. ಇದೀಗ ಸುದೀಪ್ ದಾಖಲೆಯ 12ನೇ ಸೀಸನ್ ಅನ್ನು ಸಹ ಯಶಸ್ವಿಯಾಗಿ ಮುಗಿಸಿದ್ದಾರೆ. ಆದರೆ ಈ ವೇಳೆ ಪ್ರೇಕ್ಷಕರೊಟ್ಟಿಗೆ ಕೆಲವು ವಿಷಯಗಳನ್ನು ಪ್ರಾಮಾಣಿಕವಾಗಿ ಹಂಚಿಕೊಂಡಿದ್ದಾರೆ.

ನನ್ನೊಳಗೆ ಎಲ್ಲರೂ ಇದ್ದಾರೆ, ಪ್ರೇಕ್ಷಕರೆದುರು ಇದ್ದಿದ್ದು ಇದ್ದಹಾಗೆ ಹೇಳಿದ ಕಿಚ್ಚ ಸುದೀಪ್
Kichcha Sudeeep
ಮಂಜುನಾಥ ಸಿ.
|

Updated on: Jan 19, 2026 | 12:11 AM

Share

ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್ (Bigg Boss) ಶೋ. ಕನ್ನಡ ಮಾತ್ರವೇ ಅಲ್ಲದೆ ಭಾರತದ ಹಲವು ಭಾಷೆಗಳಲ್ಲಿ ಬಿಗ್​​ಬಾಸ್ ಶೋ ಪ್ರಸಾರ ಆಗುತ್ತದೆ. ಬೇರೆ ಭಾಷೆಗಳಲ್ಲಿ ಬೇರೆ ಬೇರೆ ಸೆಲೆಬ್ರಿಟಿಗಳು ಈ ಶೋ ನಡೆಸಿಕೊಟ್ಟಿದ್ದಿದೆ. ಆದರೆ ಕನ್ನಡದಲ್ಲಿ ಬಿಗ್​​ಬಾಸ್ ಶೋ ಪ್ರಾರಂಭ ಆದಾಗಿನಿಂದಲೂ ಸುದೀಪ್ ಅವರೇ ಶೋ ನಡೆಸಿಕೊಂಡು ಬರುತ್ತಿದ್ದಾರೆ. ಬಿಗ್​​ಬಾಸ್ ಎಂದರೆ ಸುದೀಪ್, ಸುದೀಪ್ ಎಂದರೆ ಬಿಗ್​​ಬಾಸ ಎಂದಾಗಿದೆ. ಕಳೆದ ಸೀಸನ್​​ನಲ್ಲಿ ಸುದೀಪ್ ಅವರು ಇದು ನನ್ನ ಕೊನೆಯ ಸೀಸನ್ ಎಂದಿದ್ದರು. ಆದರೆ ಅವರ ಸ್ಥಾನ ತುಂಬಬಲ್ಲ ಮತ್ತೊಬ್ಬ ವ್ಯಕ್ತಿ ಇಡೀ ಕರ್ನಾಟಕದಲ್ಲಿ ಸಿಗಲಿಲ್ಲ. ಇದೀಗ ಸುದೀಪ್ ದಾಖಲೆಯ 12ನೇ ಸೀಸನ್ ಅನ್ನು ಸಹ ಯಶಸ್ವಿಯಾಗಿ ಮುಗಿಸಿದ್ದಾರೆ. ಆದರೆ ಈ ವೇಳೆ ಪ್ರೇಕ್ಷಕರೊಟ್ಟಿಗೆ ಕೆಲವು ವಿಷಯಗಳನ್ನು ಪ್ರಾಮಾಣಿಕವಾಗಿ ಹಂಚಿಕೊಂಡಿದ್ದಾರೆ.

12ನೇ ಸೀಸನ್ ಮುಗಿಯುವ ಮುಂಚೆ ಬಿಗ್​​ಬಾಸ್ ಮಾತನಾಡಿ, ಸುದೀಪ್ ಅವರಿಗೆ ಧನ್ಯವಾದ ಹೇಳಿದರು. ‘ಸುದೀಪ್ ಅವರೇ ಈ ಶೋಗೆ ಹೃದಯ ಕೊಟ್ಟವರು ನೀವು, ಗೋಡೆಗಳಿಗೆ ಜೀವ ತುಂಬಿದವರು ನೀವು. ಶೋಗೆ 12 ವರ್ಷಗಳು ತುಂಬಿವೆ, 12 ವರ್ಷದಿಂದಲೂ ನಿಮ್ಮ ಸಾರಥ್ಯದಲ್ಲಿ ಈ ಶೋ ನಡೆಯುತ್ತಿದೆ. ಇದು ದಾಖಲೆಯೇ ಆಗಿದೆ. ನಿಮ್ಮದು ಈಗ ಕೇವಲ ನಿರೂಪಣೆ ಮಾತ್ರವೇ ಅಲ್ಲ, ಅದೊಂದು ಪರಂಪರೆ ಆಗಿದೆ. ಸ್ಪರ್ಧಿಗಳು ನೊಂದಾಗ ಭರವಸೆ ತುಂಬಿದ್ದೀರಿ, ಸೋತಾಗ ಹುರಿದುಂಬಿಸಿದ್ದಿಈರಿ, ಖುಷಿಯಲ್ಲಿ ಸಂತಸ ಪಟ್ಟವರು, ಪ್ರೀತಿಯನ್ನು ಉಣಬಡಿಸಿದವರು ನೀವು, ಮಾತ್ರವಲ್ಲದೆ ಈ ಶೋಗೆ ಮಾರ್ಗದರ್ಶಕರಾಗಿದ್ದೀರಿ. ಈ ಶೋ ಅಲುಗಾಡಿದ ಅಡಿಪಾಯವನ್ನು ಕೈ ಹಿಡಿದು ನಿಲ್ಲಿಸಿದ್ದೀರಿ, ಈ ಶೋ ಧ್ವನಿ ಕಳೆದುಕೊಂಡಾಗ ಅದಕ್ಕೆ ಧ್ವನಿ ನೀಡಿದ್ದೀರಿ, ಈ ಕಾರ್ಯಕ್ರಮವನ್ನು ಹೆಗಲ ಮೇಲೆ ಹೊತ್ತು ಯಶಸ್ವಿಗೊಳಿಸಿದ್ದೀರಿ, ಮನದಾಳದ ಧನ್ಯವಾದ. ಥ್ಯಾಂಕ್ಯೂ ಸುದೀಪ್’ ಎಂದರು.

ಬಳಿಕ ಮಾತನಾಡಿದ ಸುದೀಪ್, ‘ನಾನು ಈ ಶೋ ಅನ್ನು ಕಾನ್ಫಿಡೆಂಟ್ ಆಗಿ ನಡೆಸಿಕೊಡಲು ಮುಖ್ಯ ಕಾರಣ ಸ್ಪರ್ಧಿಗಳು ನೀಡುವ ಗೌರವ ಮತ್ತು ಪ್ರೀತಿ. ಅದಿಲ್ಲದೇ ಹೋಗಿದ್ದಿದ್ದರೆ ನಾನು ನಡೆಸಿಕೊಡಲು ಆಗುತ್ತಿರಲಿಲ್ಲ. ನಾನು ಕಲಿತಿರುವುದು ಏನೆಂದರೆ ಏನನ್ನೇ ಗಳಿಸಬೇಕು, ಸಾಧಿಸಬೇಕು ಎಂದರೆ ಭಯ, ಹೆದರಿಕೆಯಿಂದ ಆಗಲ್ಲ, ಅದು ಪ್ರೀತಿಯಿಂದ ಮಾತ್ರ ಸಾಧ್ಯ. ನಾನು ನಿಮ್ಮನ್ನು ಸಾಕಷ್ಟು ಪ್ರೀತಿಸಿದ್ದೀನಿ, ಅದಕ್ಕಿಂತಲೂ ಹೆಚ್ಚಿನ ಪ್ರೀತಿಯನ್ನು ನೀವು ನನಗೆ ನೀಡಿದ್ದೀರಿ, ನೀವು ತೋರುವ ಗೌರವ, ಪ್ರೀತಿಯಿಂದಲೇ ಶೋ ಅನ್ನು ಯಶಸ್ವಿಯಾಗಿ ನಡೆಸಿಕೊಡಲು ಆಗುತ್ತಿದೆ’ ಎಂದರು ಸುದೀಪ್.

ಇದನ್ನೂ ಓದಿ:ಬಿಗ್​ಬಾಸ್ ವೇದಿಕೆ ಮೇಲೆ ಪ್ರಿಯಾ ಸುದೀಪ್: ಸೊಸೆಯ ಬಗ್ಗೆ ಕಿಚ್ಚನ ತಂದೆಯ ಭಾವುಕ ಮಾತು

ಮುಂದುವರೆದು, ಕೆಲವೊಂದು ವಿಷಯ ಪ್ರೇಕ್ಷಕರಿಗೆ ಅರ್ಥವಾಗಲ್ಲ ಆದರೆ ಹೇಳಲೇ ಬೇಕಾಗುತ್ತದೆ. ನಿನ್ನೆ ಕ್ರಿಕೆಟ್ ಮುಗಿಸಿಕೊಂಡು ನಾನು ಬಂದಿದ್ದೇ ರಾತ್ರಿ 3:30ಗೆ ಸುಸ್ತಾಗಿರುತ್ತದೆ ಏನೋ ಸಮಸ್ಯೆ ಇರುತ್ತದೆ ಆದರೆ ನಾನು ಮಾಡುವ ಕೆಲಸ ಮಾಡಲೇ ಬೇಕಾಗುತ್ತದೆ. ನನ್ನನ್ನು ನಂಬಿಕೊಂಡು ಅಷ್ಟು ಜನ ಒಳಗೆ ಕುಳಿತಿರುವಾಗ ನಾನು ಬೇಜವಾಬ್ದಾರಿಯಿಂದ ವರ್ತಿಸಲು ಸಾಧ್ಯವಿಲ್ಲ. ಅವರ ಕೈಬಿಡಲು ಸಾಧ್ಯವಿಲ್ಲ’ ಎಂದರು ಸುದೀಪ್.

‘ನಾನು ಕಳೆದ 11 ವರ್ಷದಿಂದ ಈ ಶೋ ಜೊತೆಗೆ ಇರಲು ಕಾರಣ ಈ ವೇದಿಕೆ ಬಹಳ ಶುದ್ಧವಾದುದು. ಈ ವೇದಕೆಯಿಂದ ಹೋದ ಎಷ್ಟೋ ಮಂದಿ ಜೀವನದಲ್ಲಿ ಸಾಕಷ್ಟು ಎತ್ತರಕ್ಕೆ ಏರಿದ್ದಾರೆ. ಎಷ್ಟೋ ಜನ ಸ್ಪರ್ಧಿಗಳು ತಮ್ಮ ವೃತ್ತಿಯಲ್ಲಿ ಮೇಲಕ್ಕೇರಿದ್ದಾರೆ. ಇದೆಲ್ಲ ಸಾಧ್ಯವಾಗಿರುವುದು ಈ ವೇದಿಕೆಯ ಶುದ್ಧತೆಯಿಂದ, ಪ್ರಮಾಣಿಕತೆಯಿಂದ ಹಾಗಾಗಿ ಈ ವೇದಿಕೆ ಇನ್ನೂ ಸಾಕಷ್ಟು ವರ್ಷಗಳು ಇರಬೇಕು. ಇದೇ ಕಾರಣಕ್ಕೆ ನಾನು ಈ ಶೋನ ಜೊತೆಗೆ ಇದ್ದೇನೆ’ ಎಂದರು.

ತೆರೆಯ ಮೇಲೆ ನಾನು ಕೂಲ್ ಆಗಿ ಕಾಣಬಹುದು, ಆದರೆ ನನ್ನೊಳಗೂ ಮನುಷ್ಯ ಇದ್ದಾನೆ. ನನ್ನೊಳಗೂ ಒಬ್ಬ ಗಿಲ್ಲಿ ಇದ್ದಾನೆ, ರಜತ್ ಇದ್ದಾನೆ, ಅಶ್ವಿನಿ ಇದ್ದಾರೆ, ರಕ್ಷಿತಾ ಇದ್ದಾರೆ. ನನಗೂ ಮೂಡ್ ಸ್ವಿಂಗ್​​ಗಳು ಆಗುತ್ತಿರುತ್ತವೆ. ನನಗೂ ಬೇಸರ ಆಗುತ್ತದೆ, ಸಿಟ್ಟೂ ಬರುತ್ತದೆ. ಆದರೆ ನೀವು ಅದನ್ನೆಲ್ಲ ನೋಡುವುದಿಲ್ಲ. ಅದನ್ನೆಲ್ಲ ಸಹಿಸಿಕೊಂಡು ನನ್ನನ್ನು ಒಳ್ಳೆಯ ಮೂಡ್​​ನಲ್ಲಿ ವೇದಿಕೆ ಮೇಲೇರುವಂತೆ ಮಾಡುವುದು ನಿರ್ದೇಶಕ ಪ್ರಕಾಶ್ ಅವರಿಗೆ ದೊಡ್ಡ ಧನ್ಯವಾದ ಎಂದ ಸುದೀಪ್, ಬಳಿಕ ತಮ್ಮ ಸಿಬ್ಬಂದಿಗಳೆಲ್ಲರಿಗೂ ಧನ್ಯವಾದ ಹೇಳಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ