AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಮೇಲೆ ಕಣ್ಣು ಬಿದ್ದಿದೆ ಎಂದ ಸುದೀಪ್ ಧನ್ಯವಾದ ಹೇಳಿದ್ದು ಯಾರಿಗೆ?

Bigg Boss Kannada season 12: ಬಿಗ್​​ಬಾಸ್​​ ಕನ್ನಡ 12 ಶೋಗೆ ಸಣ್ಣ ಸಮಸ್ಯೆ ಎದುರಾಗಿತ್ತು. ಮನೆಯ ಸ್ಪರ್ಧಿಗಳನ್ನು ಮನೆಯಿಂದ ಸ್ಥಳಾಂತರ ಮಾಡಿ ರೆಸಾರ್ಟ್​​ನಲ್ಲಿ ಇಡಲಾಗಿತ್ತು. ಆದರೆ ಸುದೀಪ್ ಹಾಗೂ ಇನ್ನೂ ಕೆಲವರ ಪ್ರಯತ್ನದಿಂದ ಕೇವಲ 24 ಗಂಟೆಗಳಲ್ಲಿ ಮತ್ತೆ ಸ್ಪರ್ಧಿಗಳೆಲ್ಲ ಮನೆ ಸೇರಿದರು. ಆ ಘಟನೆಯ ಬಳಿಕ ಮೊದಲ ಬಾರಿಗೆ ಸುದೀಪ್ ವಾರದ ಪಂಚಾಯಿತಿ ನಡೆಸಿಕೊಡಲು ಬಂದಿದ್ದು ಘಟನೆಯ ಬಗ್ಗೆ ಮಾತನಾಡಿದರು.

ಬಿಗ್​​ಬಾಸ್ ಮೇಲೆ ಕಣ್ಣು ಬಿದ್ದಿದೆ ಎಂದ ಸುದೀಪ್ ಧನ್ಯವಾದ ಹೇಳಿದ್ದು ಯಾರಿಗೆ?
Bigg Boss Kannada 12
ಮಂಜುನಾಥ ಸಿ.
|

Updated on: Oct 11, 2025 | 10:19 PM

Share

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಪ್ರಾರಂಭವಾಗಿ ಎರಡು ವಾರಗಳಾಗಿವೆ. 12 ಸೀಸನ್ ಈ ವರೆಗೆ ನಡೆದಿದೆ. ಒಂದು ಒಟಿಟಿ ಶೋ ಸಹ ನಡೆದಿದೆ. ಆದರೆ ಕೋವಿಡ್ ಹೊರತಾಗಿ ಇನ್ಯಾವ ವರ್ಷವೂ ಸಹ ಬಿಗ್​​ಬಾಸ್ ನಿಂತಿಲ್ಲ. ಆದರೆ ಈ ವರ್ಷ ಒಂದು ದಿನದ ಮಟ್ಟಿಗೆ ಶೋ ನಿಂತಿತ್ತು. ಬಿಗ್​​ಬಾಸ್ ಮನೆಯ ಸ್ಪರ್ಧಿಗಳನ್ನು ಮನೆಯಿಂದ ಸ್ಥಳಾಂತರ ಮಾಡಿ ರೆಸಾರ್ಟ್​​ನಲ್ಲಿ ಇಡಲಾಗಿತ್ತು. ಆದರೆ ಸುದೀಪ್ ಹಾಗೂ ಇನ್ನೂ ಕೆಲವರ ಪ್ರಯತ್ನದಿಂದ ಕೇವಲ 24 ಗಂಟೆಗಳಲ್ಲಿ ಮತ್ತೆ ಸ್ಪರ್ಧಿಗಳೆಲ್ಲ ಮನೆ ಸೇರಿದರು. ಆ ಘಟನೆಯ ಬಳಿಕ ಮೊದಲ ಬಾರಿಗೆ ಸುದೀಪ್ ವಾರದ ಪಂಚಾಯಿತಿ ನಡೆಸಿಕೊಡಲು ಬಂದಿದ್ದು ಘಟನೆಯ ಬಗ್ಗೆ ಮಾತನಾಡಿದರು.

‘ಬಿಗ್​​ಬಾಸ್ ಕನ್ನಡಿಗರ ಹೆಮ್ಮೆಯ ಶೋ, 12 ಸೀಸನ್​​ಗಳಿಂದಲೂ ಇದನ್ನು ಕನ್ನಡಿಗರು ಬೆಳೆಸಿಕೊಂಡು ಬಂದಿದ್ದಾರೆ. ಇದನ್ನು ಹಾಳು ಮಾಡುವುದು ಸುಲಭದ ಕೆಲಸವಲ್ಲ. ಕನ್ನಡಿಗರ ಪ್ರೀತಿ ಇರುವವರೆಗೆ ನಾವು ಅಂದರೆ ಬಿಗ್​​ಬಾಸ್ ಮುನ್ನುಗ್ಗುತ್ತಲೇ ಇರುತ್ತದೆ. ಇತ್ತೀಚೆಗೆ ಎದುರಾದ ಸಮಸ್ಯೆಯ ಸಮಯದಲ್ಲಿ ಬಿಗ್​​ಬಾಸ್ ಜ್ಯೋತಿ ಆರದಂತೆ ಕಾಪಾಡಿದ ಎಲ್ಲರಿಗೂ ಧನ್ಯವಾದ’ ಎಂದರು.

ಮುಂದುವರೆದು, ‘ಕೆಲ ದಿನಗಳ ಹಿಂದೆ ಆದ ಸಮಸ್ಯೆಗೂ ಬಿಗ್​​ಬಾಸ್​​ಗೂ ಯಾವುದೇ ಸಂಬಂಧ ಇರಲಿಲ್ಲ. ಆದರೆ ಬಿಗ್​​ಬಾಸ್ ಎಂಬುದೇ ಒಂದು ಅಡ್ರೆಸ್ ಆಗಿಬಿಟ್ಟಿರುವಾಗ ಕೆಲವರು ಆ ಅಡ್ರೆಸ್ ಅನ್ನು ಕ್ಲೋಸ್ ಮಾಡುವ ಪ್ರಯತ್ನ ಮಾಡಿದರು. ಆದರೆ ಅದು ಸಾಧ್ಯವಿಲ್ಲ. 12 ಸೀಸನ್​​ಗಳಿಂದಲೂ ಈ ಶೋ ಕೇವಲ ಶೋ ಆಗಿ ಮಾತ್ರವೇ ಉಳಿದಿಲ್ಲ. ಇದು ಸಾವಿರಾರು ಜನರಿಗೆ ಉದ್ಯೋಗ ಕೊಟ್ಟಿದೆ, ಹಲವಾರು ಜನರ ಜೀವನವನ್ನೇ ಬದಲಾಯಿಸಿದೆ. ಹಾಗಾಗಿ ಕೆಲವರ ಕಣ್ಣು ನಮ್ಮ ಶೋ ಮೇಲೆ ಬಿದ್ದಿರಲೂ ಬಹುದು ಎಂದರು ಸುದೀಪ್.

ಇದನ್ನೂ ಓದಿ:ಗಂಭೀರತೆ ಇಲ್ಲ, ಸ್ಪರ್ಧಿಗಳ ಹೊರಗೆ ಕಳಿಸಲು ಬಿಗ್​​ಬಾಸ್ ಬಾಗಿಲು ತೆಗೆಸಿದ ಕಿಚ್ಚ

ಸಮಸ್ಯೆ ಒಂದು ಎದುರಾದಾಗ ನಮಗೆ ಬೆಂಬಲ ನೀಡಿದ, ಸಹಾಯ ನೀಡಿದವರ ಹೆಸರನ್ನು ನಾನು ತೆಗೆದುಕೊಳ್ಳಲೇ ಬೇಕು. ‘ನಮ್ಮ ಡಿಕೆ ಸಾಹೇಬರಿಗೆ ಹಾಗೂ ಆತ್ಮೀಯ ಗೆಳೆಯ ನಲಪಾಡ್ ಅವರಿಗೆ ಧನ್ಯವಾದಗಳು. ಜೊತೆಗೆ ಈ ವಿವಾದದಲ್ಲಿ ಬಿಗ್​​ಬಾಸ್ ಪಾತ್ರ ಏನಿಲ್ಲ. ಬಿಗ್​​ಬಾಸ್ ಕಡೆಯಿಂದ ತಪ್ಪು ಆಗಿಲ್ಲ ಎಂದು ಸ್ಪಷ್ಟಪಡಿಸಿದ, ಬಿಗ್​​ಬಾಸ್ ಮತ್ತೆ ಶುರುವಾಗಲು ನೆರವಾದ ಆಡಳಿತ ವಿಭಾಗದ ಅಧಿಕಾರಿಗಳಿಗೆ ಧನ್ಯವಾದಗಳು ಎಂದರು ಸುದೀಪ್.

ಬಿಗ್​​ಬಾಸ್ ಸೆಟ್ ನಿರ್ಮಿಸಲಾಗಿರುವ ಜಾಲಿವುಡ್ ಸ್ಟುಡಿಯೋಕ್ಕೆ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ನೊಟೀಸ್ ನೀಡಿದ್ದರು. ನೊಟೀಸ್​​ಗೆ ಸ್ಪಂದಿಸದ ಕಾರಣಕ್ಕೆ ಜಾಲಿವುಡ್​​ಗೆ ಜಿಲ್ಲಾಡಳಿತ ಬೀಗ ಜಡಿದಿತ್ತು, ಹಾಗಾಗಿ ಜಾಲಿವುಡ್​​ನ ಒಳಗೆ ಇದ್ದ ಬಿಗ್​​ಬಾಸ್ ಮನೆಯ ಸ್ಪರ್ಧಿಗಳನ್ನು ಸಹ ಹೊರಗೆ ಕಳಿಸಲಾಗಿತ್ತು. ಬಳಿಕ ಸುದೀಪ್ ಅವರು ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿಕೊಂಡ ತರುವಾಯ ಬಿಗ್​​ಬಾಸ್​​ಗೆ ಪ್ರತ್ಯೇಕವಾಗಿ ಅವಕಾಶ ಕಲ್ಪಿಸಲಾಯ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ