AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಮೇಲೆ ಕಣ್ಣು ಬಿದ್ದಿದೆ ಎಂದ ಸುದೀಪ್ ಧನ್ಯವಾದ ಹೇಳಿದ್ದು ಯಾರಿಗೆ?

Bigg Boss Kannada season 12: ಬಿಗ್​​ಬಾಸ್​​ ಕನ್ನಡ 12 ಶೋಗೆ ಸಣ್ಣ ಸಮಸ್ಯೆ ಎದುರಾಗಿತ್ತು. ಮನೆಯ ಸ್ಪರ್ಧಿಗಳನ್ನು ಮನೆಯಿಂದ ಸ್ಥಳಾಂತರ ಮಾಡಿ ರೆಸಾರ್ಟ್​​ನಲ್ಲಿ ಇಡಲಾಗಿತ್ತು. ಆದರೆ ಸುದೀಪ್ ಹಾಗೂ ಇನ್ನೂ ಕೆಲವರ ಪ್ರಯತ್ನದಿಂದ ಕೇವಲ 24 ಗಂಟೆಗಳಲ್ಲಿ ಮತ್ತೆ ಸ್ಪರ್ಧಿಗಳೆಲ್ಲ ಮನೆ ಸೇರಿದರು. ಆ ಘಟನೆಯ ಬಳಿಕ ಮೊದಲ ಬಾರಿಗೆ ಸುದೀಪ್ ವಾರದ ಪಂಚಾಯಿತಿ ನಡೆಸಿಕೊಡಲು ಬಂದಿದ್ದು ಘಟನೆಯ ಬಗ್ಗೆ ಮಾತನಾಡಿದರು.

ಬಿಗ್​​ಬಾಸ್ ಮೇಲೆ ಕಣ್ಣು ಬಿದ್ದಿದೆ ಎಂದ ಸುದೀಪ್ ಧನ್ಯವಾದ ಹೇಳಿದ್ದು ಯಾರಿಗೆ?
Bigg Boss Kannada 12
ಮಂಜುನಾಥ ಸಿ.
|

Updated on: Oct 11, 2025 | 10:19 PM

Share

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಪ್ರಾರಂಭವಾಗಿ ಎರಡು ವಾರಗಳಾಗಿವೆ. 12 ಸೀಸನ್ ಈ ವರೆಗೆ ನಡೆದಿದೆ. ಒಂದು ಒಟಿಟಿ ಶೋ ಸಹ ನಡೆದಿದೆ. ಆದರೆ ಕೋವಿಡ್ ಹೊರತಾಗಿ ಇನ್ಯಾವ ವರ್ಷವೂ ಸಹ ಬಿಗ್​​ಬಾಸ್ ನಿಂತಿಲ್ಲ. ಆದರೆ ಈ ವರ್ಷ ಒಂದು ದಿನದ ಮಟ್ಟಿಗೆ ಶೋ ನಿಂತಿತ್ತು. ಬಿಗ್​​ಬಾಸ್ ಮನೆಯ ಸ್ಪರ್ಧಿಗಳನ್ನು ಮನೆಯಿಂದ ಸ್ಥಳಾಂತರ ಮಾಡಿ ರೆಸಾರ್ಟ್​​ನಲ್ಲಿ ಇಡಲಾಗಿತ್ತು. ಆದರೆ ಸುದೀಪ್ ಹಾಗೂ ಇನ್ನೂ ಕೆಲವರ ಪ್ರಯತ್ನದಿಂದ ಕೇವಲ 24 ಗಂಟೆಗಳಲ್ಲಿ ಮತ್ತೆ ಸ್ಪರ್ಧಿಗಳೆಲ್ಲ ಮನೆ ಸೇರಿದರು. ಆ ಘಟನೆಯ ಬಳಿಕ ಮೊದಲ ಬಾರಿಗೆ ಸುದೀಪ್ ವಾರದ ಪಂಚಾಯಿತಿ ನಡೆಸಿಕೊಡಲು ಬಂದಿದ್ದು ಘಟನೆಯ ಬಗ್ಗೆ ಮಾತನಾಡಿದರು.

‘ಬಿಗ್​​ಬಾಸ್ ಕನ್ನಡಿಗರ ಹೆಮ್ಮೆಯ ಶೋ, 12 ಸೀಸನ್​​ಗಳಿಂದಲೂ ಇದನ್ನು ಕನ್ನಡಿಗರು ಬೆಳೆಸಿಕೊಂಡು ಬಂದಿದ್ದಾರೆ. ಇದನ್ನು ಹಾಳು ಮಾಡುವುದು ಸುಲಭದ ಕೆಲಸವಲ್ಲ. ಕನ್ನಡಿಗರ ಪ್ರೀತಿ ಇರುವವರೆಗೆ ನಾವು ಅಂದರೆ ಬಿಗ್​​ಬಾಸ್ ಮುನ್ನುಗ್ಗುತ್ತಲೇ ಇರುತ್ತದೆ. ಇತ್ತೀಚೆಗೆ ಎದುರಾದ ಸಮಸ್ಯೆಯ ಸಮಯದಲ್ಲಿ ಬಿಗ್​​ಬಾಸ್ ಜ್ಯೋತಿ ಆರದಂತೆ ಕಾಪಾಡಿದ ಎಲ್ಲರಿಗೂ ಧನ್ಯವಾದ’ ಎಂದರು.

ಮುಂದುವರೆದು, ‘ಕೆಲ ದಿನಗಳ ಹಿಂದೆ ಆದ ಸಮಸ್ಯೆಗೂ ಬಿಗ್​​ಬಾಸ್​​ಗೂ ಯಾವುದೇ ಸಂಬಂಧ ಇರಲಿಲ್ಲ. ಆದರೆ ಬಿಗ್​​ಬಾಸ್ ಎಂಬುದೇ ಒಂದು ಅಡ್ರೆಸ್ ಆಗಿಬಿಟ್ಟಿರುವಾಗ ಕೆಲವರು ಆ ಅಡ್ರೆಸ್ ಅನ್ನು ಕ್ಲೋಸ್ ಮಾಡುವ ಪ್ರಯತ್ನ ಮಾಡಿದರು. ಆದರೆ ಅದು ಸಾಧ್ಯವಿಲ್ಲ. 12 ಸೀಸನ್​​ಗಳಿಂದಲೂ ಈ ಶೋ ಕೇವಲ ಶೋ ಆಗಿ ಮಾತ್ರವೇ ಉಳಿದಿಲ್ಲ. ಇದು ಸಾವಿರಾರು ಜನರಿಗೆ ಉದ್ಯೋಗ ಕೊಟ್ಟಿದೆ, ಹಲವಾರು ಜನರ ಜೀವನವನ್ನೇ ಬದಲಾಯಿಸಿದೆ. ಹಾಗಾಗಿ ಕೆಲವರ ಕಣ್ಣು ನಮ್ಮ ಶೋ ಮೇಲೆ ಬಿದ್ದಿರಲೂ ಬಹುದು ಎಂದರು ಸುದೀಪ್.

ಇದನ್ನೂ ಓದಿ:ಗಂಭೀರತೆ ಇಲ್ಲ, ಸ್ಪರ್ಧಿಗಳ ಹೊರಗೆ ಕಳಿಸಲು ಬಿಗ್​​ಬಾಸ್ ಬಾಗಿಲು ತೆಗೆಸಿದ ಕಿಚ್ಚ

ಸಮಸ್ಯೆ ಒಂದು ಎದುರಾದಾಗ ನಮಗೆ ಬೆಂಬಲ ನೀಡಿದ, ಸಹಾಯ ನೀಡಿದವರ ಹೆಸರನ್ನು ನಾನು ತೆಗೆದುಕೊಳ್ಳಲೇ ಬೇಕು. ‘ನಮ್ಮ ಡಿಕೆ ಸಾಹೇಬರಿಗೆ ಹಾಗೂ ಆತ್ಮೀಯ ಗೆಳೆಯ ನಲಪಾಡ್ ಅವರಿಗೆ ಧನ್ಯವಾದಗಳು. ಜೊತೆಗೆ ಈ ವಿವಾದದಲ್ಲಿ ಬಿಗ್​​ಬಾಸ್ ಪಾತ್ರ ಏನಿಲ್ಲ. ಬಿಗ್​​ಬಾಸ್ ಕಡೆಯಿಂದ ತಪ್ಪು ಆಗಿಲ್ಲ ಎಂದು ಸ್ಪಷ್ಟಪಡಿಸಿದ, ಬಿಗ್​​ಬಾಸ್ ಮತ್ತೆ ಶುರುವಾಗಲು ನೆರವಾದ ಆಡಳಿತ ವಿಭಾಗದ ಅಧಿಕಾರಿಗಳಿಗೆ ಧನ್ಯವಾದಗಳು ಎಂದರು ಸುದೀಪ್.

ಬಿಗ್​​ಬಾಸ್ ಸೆಟ್ ನಿರ್ಮಿಸಲಾಗಿರುವ ಜಾಲಿವುಡ್ ಸ್ಟುಡಿಯೋಕ್ಕೆ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ನೊಟೀಸ್ ನೀಡಿದ್ದರು. ನೊಟೀಸ್​​ಗೆ ಸ್ಪಂದಿಸದ ಕಾರಣಕ್ಕೆ ಜಾಲಿವುಡ್​​ಗೆ ಜಿಲ್ಲಾಡಳಿತ ಬೀಗ ಜಡಿದಿತ್ತು, ಹಾಗಾಗಿ ಜಾಲಿವುಡ್​​ನ ಒಳಗೆ ಇದ್ದ ಬಿಗ್​​ಬಾಸ್ ಮನೆಯ ಸ್ಪರ್ಧಿಗಳನ್ನು ಸಹ ಹೊರಗೆ ಕಳಿಸಲಾಗಿತ್ತು. ಬಳಿಕ ಸುದೀಪ್ ಅವರು ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿಕೊಂಡ ತರುವಾಯ ಬಿಗ್​​ಬಾಸ್​​ಗೆ ಪ್ರತ್ಯೇಕವಾಗಿ ಅವಕಾಶ ಕಲ್ಪಿಸಲಾಯ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ