AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಕನ್ನಡದ ಮೂರನೇ ಸ್ಪರ್ಧಿ ಘೋಷಣೆ: ಇವರಿಗೆ ಮೈಕ್, ಜೈಲು ಎರಡೂ ಹೊಸದಲ್ಲ

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ರ ಇಬ್ಬರು ಸ್ಪರ್ಧಿಗಳ ಹೆಸರು ಈಗಾಗಲೇ ಘೋಷಣೆ ಆಗಿದ್ದು, ನಟಿ ಗೌತಮಿ ಜಾಧವ್ ಹಾಗೂ ಲಾಯರ್ ಜಗದೀಶ್ ಅವರುಗಳು ಬಿಗ್​ಬಾಸ್​ಗೆ ಹೋಗುತ್ತಿದ್ದಾರೆ. ಇದೀಗ ಮೂರನೇ ಸ್ಪರ್ಧಿಯ ಘೋಷಣೆಯೂ ಆಗಿದೆ.

ಬಿಗ್​ಬಾಸ್ ಕನ್ನಡದ ಮೂರನೇ ಸ್ಪರ್ಧಿ ಘೋಷಣೆ: ಇವರಿಗೆ ಮೈಕ್, ಜೈಲು ಎರಡೂ ಹೊಸದಲ್ಲ
ಮಂಜುನಾಥ ಸಿ.
|

Updated on:Sep 28, 2024 | 9:21 PM

Share

ಬಿಗ್​ಬಾಸ್ ಕನ್ನಡ ಸೀಸನ್ 11 ರ ಸ್ಪರ್ಧಿಗಳ ಘೋಷಣೆ ನಡೆಯುತ್ತಿದೆ. ಬಿಗ್​ಬಾಸ್ ಕನ್ನಡ 11 ಭಾನುವಾರ ಸಂಜೆ ಪ್ರಾರಂಭವಾಗಲಿದೆ. ಆದರೆ ಶನಿವಾರವೇ ಸ್ಪರ್ಧಿಗಳ ಘೋಷಣೆ ಮಾಡಲಾಗುತ್ತಿದೆ. ಶನಿವಾರ ಕಲರ್ಸ್ ವಾಹಿನಿಯ ‘ರಾಜಾ ರಾಣಿ’ ರಿಯಾಲಿಟಿ ಶೋನ ಫಿನಾಲೆ ನಡೆಯುತ್ತಿದ್ದು, ಫಿನಾಲೆ ನಡುವೆ ಬಿಗ್​ಬಾಸ್ ಕನ್ನಡ ಸೀಸನ್ 11 ರ ಕೆಲ ಸ್ಪರ್ಧಿಗಳ ಹೆಸರು ಘೋಷಣೆ ಆಗುತ್ತಿದ್ದು, ಹೊಸ ನಿಯಮದಂತೆ ಆ ಹೊಸ ಸ್ಪರ್ಧಿಗಳು ಸ್ವರ್ಗಕ್ಕೆ ಹೋಗಬೇಕಾ, ನರಕಕ್ಕೆ ಹೋಗಬೇಕಾ ಎಂದು ಪ್ರೇಕ್ಷಕರು ಮತ ಚಲಾಯಿಸಬೇಕಿದೆ. ಈವರೆಗೂ ಇಬ್ಬರು ಸ್ಪರ್ಧಿಗಳನ್ನು ಘೋಷಿಸಲಾಗಿದೆ. ಮೊದಲನೇಯ ಸ್ಪರ್ಧಿ ನಟಿ ಗೌತಮಿ ಜಾಧವ್ ಆಗಿದ್ದರೆ ಎರಡನೇ ಸ್ಪರ್ಧಿ ಲಾಯರ್ ಜಗದೀಶ್ ಇದೀಗ ಮೂರನೇ ಸ್ಪರ್ಧಿಯ ಘೋಷಣೆ ಆಗಿದೆ.

ಹಿಂದೂಪರ ಸಂಘಟನೆಗಳಲ್ಲಿ ಭಾಷಣಕಾರಳಾಗಿ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರ ಅವರನ್ನು ಮೂರನೇ ಸ್ಪರ್ಧಿಯಾಗಿ ಬಿಗ್​ಬಾಸ್ ಸ್ಪರ್ಧಿಯಾಗಿ ಮನೆಗೆ ಕಳಿಸಲಾಗುತ್ತಿದೆ. ಚೈತ್ರಾ ಕುಂದಾಪುರ ಹಿಂದೂಪರ ಸಂಘಟನೆ, ಹೋರಾಟಗಳಿಂದ ಗುರುತು ಪಡೆದುಕೊಂಡಿದ್ದಾರೆ. ಹಿಂದೂಪರ ಭಾಷಣಗಳು, ಕೆಲವು ಸಂದರ್ಭದಲ್ಲಿ ದ್ವೇಷ ಭಾಷಣಗಳನ್ನು ಮಾಡಿದ ಆರೋಪವೂ ಚೈತ್ರಾ ಮೇಲಿದೆ. ಜನಪ್ರಿಯತೆಯ ಉತ್ತುಂಗದಲ್ಲಿದ್ದಾಗಲೇ ಬಿಜೆಪಿಯ ಕೆಲ ಶಾಸಕರು, ಸಂಸದರಿಂದ ಭಾರಿ ಮೊತ್ತದ ಹಣ ವಂಚನೆ ಮಾಡಿದ ಆರೋಪದಲ್ಲಿ ಜೈಲು ಪಾಲಾದರು.

ಇದನ್ನೂ ಓದಿ:ಬಿಗ್​ಬಾಸ್ ಎರಡನೇ ಸ್ಪರ್ಧಿ ಘೋಷಣೆ: ಮನೆ ಅಲ್ಲೋಲ ಕಲ್ಲೋಲ ಗ್ಯಾರೆಂಟಿ

ಟಿಕೆಟ್ ಕೊಡಿಸುವ ಆಮೀಷಗಳನ್ನು ಒಡ್ಡಿ ಕೆಲವು ಬಿಜೆಪಿ ಮುಖಂಡರಿಂದ ಭಾರಿ ಮೊತ್ತದ ಹಣವನ್ನು ಚೈತ್ರಾ ಕುಂದಾಪುರ ಹಾಗೂ ಅವರ ಸಂಗಡಿಗರು ತೆಗೆದುಕೊಂಡಿದ್ದಾರೆಂದು ಆರೋಪ ಮಾಡಲಾಯ್ತು, ಪ್ರಕರಣ ದಾಖಲಾಗಿ ಚೈತ್ರಾ ಕುಂದಾಪುರ ಹಾಗೂ ಇನ್ನಿತರರು ಜೈಲು ಪಾಲಾದರು. ಪ್ರಸ್ತುತ ಚೈತ್ರಾ ಕುಂದಾಪುರ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಚೈತ್ರಾ ಕುಂದಾಪುರ ಜೈಲಿನಿಂದ ಹೊರಬಂದ ಬಳಿಕ ಯಾವುದೇ ಹೋರಾಟಗಳಲ್ಲಿ ಗುರುತಿಸಿಕೊಂಡಿಲ್ಲ. ಇದೀಗ ಏಕಾಏಕಿ ಬಿಗ್​ಬಾಸ್ ಮನೆಗೆ ಹೋಗುತ್ತಿದ್ದಾರೆ.

ಹಾಲು ಮಾರುವವರ ಮಗಳಾಗಿ ಹುಟ್ಟಿಯೂ ನಾನು ಈ ಹಂತಕ್ಕೆ ಬೆಳೆದಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಂಡಿರುವ ಚೈತ್ರಾ ಕುಂದಾಪುರ, ಆ ಕೋರ್ಟ್ ಕೇಸು ನನ್ನನ್ನು ಕುಗ್ಗಿಸಿಲ್ಲ ಎಂದು ಹೇಳುತ್ತಾ ಆತ್ಮವಿಶ್ವಾಸದಿಂದಲೇ ಬಿಗ್​ಬಾಸ್ ಮನೆಗೆ ಕಾಲಿಡಲು ರೆಡಿಯಾಗಿದ್ದಾರೆ. ಕಳೆದ ಬಾರಿ ಸುಳ್ಳು ಹೇಳಿ, ವಂಚನೆ ಮಾಡಿ ಜನರ ಕಣ್ಣಲ್ಲಿ ವಿಲನ್ ಆಗಿದ್ದ ಡ್ರೋನ್ ಪ್ರತಾಪ್ ಅನ್ನು ಕರೆತಂದು ಆತ ಅಮಾಯಕ ಎಂಬಂತೆ ಬಿಂಬಿಸಲಾಗಿತ್ತು. ಈ ಬಾರಿ ವಂಚನೆ ಪ್ರಕರಣದ ಆರೋಪಿ ಚೈತ್ರಾರನ್ನು ಬಿಗ್​ಬಾಸ್ ಮನೆಗೆ ಕರೆತರಲಾಗಿದ್ದು, ಡ್ರೋನ್ ಪ್ರತಾಪ್ ರೀತಿ ಚೈತ್ರಾ ಅವರಿಗೂ ಕ್ಲೀನ್ ಸರ್ಟಿಫಿಕೇಟ್ ಕೊಡಲಾಗುತ್ತದೆಯೇ ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:15 pm, Sat, 28 September 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!