Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಂಗೇನು ತೆವಲಾ’: ಮೊದಲ ಬಾರಿಗೆ ಭವ್ಯಾ ವಿರುದ್ಧ ತಿರುಗಿಬಿದ್ದ ತ್ರಿವಿಕ್ರಂ

Bigg Boss Kannada: ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಭವ್ಯಾ ಗೌಡ ಹಾಗೂ ತ್ರಿವಿಕ್ರಂ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಈ ಮೊದಲು ಇಬ್ಬರೂ ‘ಬಿಗ್ ಬಾಸ್ ಕನ್ನಡ ಮಿನಿ ಸೀಸನ್​ನಲ್ಲಿ ಭಾಗಿ ಆಗಿದ್ದರು. ಈ ಕಾರಣಕ್ಕೋ ಏನೋ ಇಬ್ಬರ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಇವರು ಒಟ್ಟಾಗಿ ಆಟ ಆಡುತ್ತಿದ್ದಾರೆ. ಆದರೆ, ಈ ಬಾಡಿಂಗ್ ಇಬ್ಬರ ಆಟದ ಮೇಲೆ ಪರಿಣಾಮ ಬೀರುತ್ತಿದೆ ಎಂಬುದು ಅನೇಕರ ಅಭಿಪ್ರಾಯ. ಈಗ ಇಬ್ಬರ ಮಧ್ಯೆ ಕಿರಿಕ್ ಆಗಿದೆ.

‘ನಂಗೇನು ತೆವಲಾ’: ಮೊದಲ ಬಾರಿಗೆ ಭವ್ಯಾ ವಿರುದ್ಧ ತಿರುಗಿಬಿದ್ದ ತ್ರಿವಿಕ್ರಂ
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on: Dec 15, 2024 | 12:39 PM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಭವ್ಯಾ ಗೌಡ ಹಾಗೂ ತ್ರಿವಿಕ್ರಂ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಈ ಮೊದಲು ಇಬ್ಬರೂ ‘ಬಿಗ್ ಬಾಸ್ ಕನ್ನಡ ಮಿನಿ ಸೀಸನ್​ನಲ್ಲಿ ಭಾಗಿ ಆಗಿದ್ದರು. ಈ ಕಾರಣಕ್ಕೋ ಏನೋ ಇಬ್ಬರ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಇವರು ಒಟ್ಟಾಗಿ ಆಟ ಆಡುತ್ತಿದ್ದಾರೆ. ಆದರೆ, ಈ ಬಾಡಿಂಗ್ ಇಬ್ಬರ ಆಟದ ಮೇಲೆ ಪರಿಣಾಮ ಬೀರುತ್ತಿದೆ ಎಂಬುದು ಅನೇಕರ ಅಭಿಪ್ರಾಯ. ಈಗ ಇಬ್ಬರ ಮಧ್ಯೆ ಕಿರಿಕ್ ಆಗಿದೆ.

ಈ ವಾರ ಚೈತ್ರಾ ಕುಂದಾಪುರ ಹಾಗೂ ತ್ರಿವಿಕ್ರಂ ಅವರು ಕಳಪೆ ಆಗಿದ್ದರು. ಈ ಕಾರಣಕ್ಕೆ ಇಬ್ಬರೂ ಜೈಲು ಸೇರಿದ್ದಾರೆ. ಅಲ್ಲಿ ಇಡೀ ಮನೆಯ ಸ್ಪರ್ಧಿಗಳಿಗೆ ತೊಂದರೆ ಕೊಟ್ಟಿದ್ದಾರೆ. ಈ ತೊಂದರೆ ಮಿತಿಮೀರಿದೆ. ಈ ಕಾರಣಕ್ಕೆ ಅನೇಕರಿಗೆ ಬೇಸರ ಆಗಿದೆ. ಈ ಮಧ್ಯೆ ತ್ರಿವಿಕ್ರಂ ಅವರು ಭವ್ಯಾ ಗೌಡ ಅವರಿಗೆ ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ.

ಭವ್ಯಾ ಗೌಡ ಅವರು ದೂರದಲ್ಲಿ ಕಸ ಗುಡಿಸುತ್ತಾ ಇದ್ದರು. ಆಗ ತ್ರಿವಿಕ್ರಂ ಅವರು ಭವ್ಯಾ ಗೌಡ ಅವರನ್ನು ಕರೆದರು. ‘ಇಲ್ಲಿ ನನಗೆ ಡಸ್ಟ್ ಅಲರ್ಜಿ ಆಗುತ್ತಿದೆ. ಬಂದು ಕಸ ಗುಡಿಸಿ’ ಎಂದರು ತ್ರಿವಿಕ್ರಂ. ಆದರೆ, ಭವ್ಯಾ ಗೌಡ ಬರಲಿಲ್ಲ. ‘ಏನು ನಿಮ್ಮ ಸಮಸ್ಯೆ’ ಎಂದು ಭವ್ಯಾ ಕೇಳಿದರು. ಇದಕ್ಕೆ ತ್ರಿವಿಕ್ರಂ ಸಿಟ್ಟಾದರು.

‘ನನಗೆ ಡಸ್ಟ್ ಅಲರ್ಜಿ ಆಗುತ್ತಿದೆ. ಬಂದು ಕಸ ಗುಡಿಸಿ. ನಂಗೇನು ಸುಮ್ಮನೆ ಹೇಳೋಕೆ ತೆವಲಾ? ನೀವೇ ನಮ್ಮನ್ನು ಒಳಕ್ಕೆ ಕಳುಹಿಸಿದ್ದು’ ಎಂದು ಕೂಗಾಡಿಕೊಂಡರು ತ್ರಿವಿಕ್ರಂ. ಅವರ ಮಾತಿನಿಂದ ಭವ್ಯಾ ಗೌಡ ಅವರು ಸಾಕಷ್ಟು ಬೇಸರಗೊಂಡರು. ತ್ರಿವಿಕ್ರಂ ಬಳಿ ಅವರು ಜಗಳಕ್ಕೆ ಇಳಿದರು. ಆ ಬಳಿಕ ಅಸಲಿ ವಿಚಾರ ಏನು ಎಂಬುದು ಗೊತ್ತಾಯಿತು.

ಭವ್ಯಾ ಗೌಡ ಅವರು ಜೈಲಿನ ಬಳಿ ಬಂದು ಹರಟೆ ಹೊಡೆಯಬೇಕು ಎಂಬುದು ತ್ರಿವಿಕ್ರಂ ಅವರ ಆಸೆ ಆಗಿತ್ತು. ಆದರೆ, ಈ ಆಸೆ ಈಡೇರಿಸಿಕೊಳ್ಳಲು ತ್ರಿವಿಕ್ರಂ ಅವರು ಇಷ್ಟೆಲ್ಲ ಸಾಹಸ ಮಾಡಿದರು. ‘ನೀವೇ ತಾನೇ ಆಗ ಇಲ್ಲಿಗೆ ಬರಬೇಡಿ ಎಂದು ಹೇಳಿದ್ದು. ಈಗ ನೋಡಿದರೆ ಬನ್ನಿ ಎನ್ನುತ್ತಿದ್ದೀರಲ್ಲ’ ಎಂದರು ಭವ್ಯಾ ಗೌಡ. ಅಲ್ಲಿಗೆ ಇಬ್ಬರ ಮಧ್ಯೆ ಎಲ್ಲವೂ ಸಮಸ್ಯೆ ಬಗೆಹರಿಯಿತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ