AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿ ವಿಚಾರದಲ್ಲಿ ‘ಬಿಗ್ ಬಾಸ್ ಫಿನಾಲೆ’ ದಾಖಲೆ; ಹೊಸ ಧಾರಾವಾಹಿಗಳ ರೇಟಿಂಗ್ ಹೇಗಿದೆ?

ಬಿಗ್ ಬಾಸ್ ಕನ್ನಡ ಸೀಸನ್ 11ರ ಫೈನಲ್ ಎಪಿಸೋಡ್ ಜನವರಿ 25 ಮತ್ತು 26 ರಂದು ಪ್ರಸಾರವಾಯಿತು. ಈ ಎಪಿಸೋಡ್ ಅತ್ಯಧಿಕ ಟಿಆರ್‌ಪಿ ಪಡೆದು ದಾಖಲೆ ಬರೆದಿದೆ. ಶನಿವಾರ 9.9 ಮತ್ತು ಭಾನುವಾರ 13.7 ಟಿವಿಆರ್ ಪಡೆದುಕೊಂಡಿದೆ. ಹನುಮಂತ ಲಮಾಣಿ ವಿಜೇತರಾದರೆ, ತ್ರಿವಿಕ್ರಂ ರನ್ನರ್ ಅಪ್ ಆದರು.

ಟಿಆರ್​ಪಿ ವಿಚಾರದಲ್ಲಿ ‘ಬಿಗ್ ಬಾಸ್ ಫಿನಾಲೆ’ ದಾಖಲೆ; ಹೊಸ ಧಾರಾವಾಹಿಗಳ ರೇಟಿಂಗ್ ಹೇಗಿದೆ?
ಟಿಆರ್​ಪಿ ವಿವರ
ರಾಜೇಶ್ ದುಗ್ಗುಮನೆ
|

Updated on:Feb 06, 2025 | 1:22 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆ ಕಳೆದ ಜನವರಿ 25 ಹಾಗೂ 26ರಂದು ನಡೆಯಿತು. ಇದರ ಟಿಆರ್​ಪಿ ಈಗ ಹೊರ ಬಿದ್ದಿದೆ. ಟಿಆರ್​ಪಿ ವಿಚಾರದಲ್ಲಿ ಫಿನಾಲೆ ಎಪಿಸೋಡ್ ದಾಖಲೆ ಬರೆದಿದೆ. ಕಿಚ್ಚ ಸುದೀಪ್ ಅವರು ನಡೆಸಿಕೊಟ್ಟ ಫಿನಾಲೆ ಎಪಿಸೋಡ್​ನಲ್ಲಿ ಹನುಮಂತ ಲಮಾಣಿ ಅವರು ಕಪ್ ಗೆದ್ದರೆ ತ್ರಿವಿಕ್ರಂ ಅವರು ರನ್ನರ್​ ಅಪ್ ಆದರು. ಈ ಎಪಿಸೋಡ್​ನ ಸಾಕಷ್ಟು ಸಂಖ್ಯೆಯಲ್ಲಿ ವೀಕ್ಷಣೆ ಮಾಡಲಾಗಿದೆ.

ಬಿಗ್ ಬಾಸ್ ಶನಿವಾರದ ಎಪಿಸೋಡ್ 9.9 ಟಿವಿಆರ್ ಪಡೆದರೆ ಭಾನುವಾರದ ಎಪಿಸೋಡ್ 13.7 ಟಿವಿಆರ್ ಪಡೆದುಕೊಂಡಿದೆ. ಈ ಮೂಲಕ ಈ ರಿಯಾಲಿಟಿ ಶೋ ದಾಖಲೆಯ ಟಿಆರ್​ಪಿ ಪಡೆದುಕೊಂಡಿದೆ. ಕಳೆದ ಸೀಸನ್​ಗಿಂತ ಈ ಸೀಸನ್ ಉತ್ತಮ ಟಿಆರ್​ಪಿ ಪಡೆದು ಸೀಸನ್​ನ ಕೊನೆಗೊಳಿಸಿದೆ.

ಸೀರಿಯಲ್​ಗಳ ವಿಚಾರಕ್ಕೆ ಬರೋದಾದರೆ ಈ ಮೊದಲು ಪ್ರಸಾರ ಕಾಣುತ್ತಿದ್ದ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿ ಇದೆ. ಈ ಮೊದಲು ಎರಡು ಹಾಗೂ ಮೂರನೇ ಸ್ಥಾನದಲ್ಲಿ ಇರುತ್ತಿದ್ದ ಈ ಧಾರಾವಾಹಿ ಈಗ ಮೊದಲ ಸ್ಥಾನ ಪಡೆದುಕೊಂಡಿದೆ ಅನ್ನೋದು ವಿಶೇಷ.

ಇನ್ನು, ಇತ್ತೀಚೆಗೆ ಪ್ರಸಾರ ಆರಂಭಿಸಿರೋ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಬ್ಲಾಕ್​ಬಸ್ಟರ್ ಎನಿಸಿಕೊಂಡಿದೆ. ಈ ಧಾರಾವಾಹಿ, ನಗರ ವಿಭಾಗದಲ್ಲಿ ಎರಡನೇ ಸ್ಥಾನ ಪಡೆದಿದೆ. ಓಪನಿಂಗ್ ವೀಕ್​ನಲ್ಲಿ ಇಷ್ಟು ಒಳ್ಳೆಯ ಟಿಆರ್​ಪಿ ಪಡೆದುಕೊಂಡಿದ್ದು ತಂಡಕ್ಕೆ ಖುಷಿ ನೀಡಿದೆ.  ಮೂರನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’, ನಾಲ್ಕನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ಕಲರ್ಸ್​​ನಲ್ಲಿ ಆರಂಭ ಆದ ‘ವಧು’, ‘ಅಣ್ಣಯ್ಯ’, ‘ನೂರು ಜನ್ಮಕು’ ಧಾರಾವಾಹಿಗಳು ಸಾಧಾರಣ ಟಿಆರ್​ಪಿ ಪಡೆದುಕೊಂಡಿವೆ.

ಇದನ್ನೂ ಓದಿ: ಸೀತಾಗೆ ಸಿಹಿ ಸಿಗೋ ಮೊದಲೇ ಬದಲಾಯಿತು ‘ಸೀತಾ ರಾಮ’ ಪ್ರಸಾರ ಸಮಯ: ವೀಕ್ಷಕರ ಅಸಮಾಧಾನ

ಅತ್ತ ‘ಸೀತಾ ರಾಮ’ ಧಾರಾವಾಹಿಯ ಸಮಯ ಬದಲಾವಣೆ ಆಗಿದೆ. ಈ ಧಾರಾವಾಹಿಯನ್ನು ರಾತ್ರಿ 9.30ರಿಂದ ಸಂಜೆ 5.30ಕ್ಕೆ ಶಿಫ್ಟ್ ಮಾಡಲಾಗಿದೆ. ಇದು ಧಾರಾವಾಹಿ ಟಿಆರ್​ಪಿ ಮೇಲೆ ದೊಡ್ಡ ಪರಿಣಾಮ ಬೀರಿದೆ. ಈ ಧಾರಾವಾಹಿಯ ಟಿಆರ್​ಪಿ ಮತ್ತಷ್ಟು ಕುಸಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:22 pm, Thu, 6 February 25

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!