AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿ ವಿಚಾರದಲ್ಲಿ ‘ಬಿಗ್ ಬಾಸ್ ಫಿನಾಲೆ’ ದಾಖಲೆ; ಹೊಸ ಧಾರಾವಾಹಿಗಳ ರೇಟಿಂಗ್ ಹೇಗಿದೆ?

ಬಿಗ್ ಬಾಸ್ ಕನ್ನಡ ಸೀಸನ್ 11ರ ಫೈನಲ್ ಎಪಿಸೋಡ್ ಜನವರಿ 25 ಮತ್ತು 26 ರಂದು ಪ್ರಸಾರವಾಯಿತು. ಈ ಎಪಿಸೋಡ್ ಅತ್ಯಧಿಕ ಟಿಆರ್‌ಪಿ ಪಡೆದು ದಾಖಲೆ ಬರೆದಿದೆ. ಶನಿವಾರ 9.9 ಮತ್ತು ಭಾನುವಾರ 13.7 ಟಿವಿಆರ್ ಪಡೆದುಕೊಂಡಿದೆ. ಹನುಮಂತ ಲಮಾಣಿ ವಿಜೇತರಾದರೆ, ತ್ರಿವಿಕ್ರಂ ರನ್ನರ್ ಅಪ್ ಆದರು.

ಟಿಆರ್​ಪಿ ವಿಚಾರದಲ್ಲಿ ‘ಬಿಗ್ ಬಾಸ್ ಫಿನಾಲೆ’ ದಾಖಲೆ; ಹೊಸ ಧಾರಾವಾಹಿಗಳ ರೇಟಿಂಗ್ ಹೇಗಿದೆ?
ಟಿಆರ್​ಪಿ ವಿವರ
ರಾಜೇಶ್ ದುಗ್ಗುಮನೆ
|

Updated on:Feb 06, 2025 | 1:22 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆ ಕಳೆದ ಜನವರಿ 25 ಹಾಗೂ 26ರಂದು ನಡೆಯಿತು. ಇದರ ಟಿಆರ್​ಪಿ ಈಗ ಹೊರ ಬಿದ್ದಿದೆ. ಟಿಆರ್​ಪಿ ವಿಚಾರದಲ್ಲಿ ಫಿನಾಲೆ ಎಪಿಸೋಡ್ ದಾಖಲೆ ಬರೆದಿದೆ. ಕಿಚ್ಚ ಸುದೀಪ್ ಅವರು ನಡೆಸಿಕೊಟ್ಟ ಫಿನಾಲೆ ಎಪಿಸೋಡ್​ನಲ್ಲಿ ಹನುಮಂತ ಲಮಾಣಿ ಅವರು ಕಪ್ ಗೆದ್ದರೆ ತ್ರಿವಿಕ್ರಂ ಅವರು ರನ್ನರ್​ ಅಪ್ ಆದರು. ಈ ಎಪಿಸೋಡ್​ನ ಸಾಕಷ್ಟು ಸಂಖ್ಯೆಯಲ್ಲಿ ವೀಕ್ಷಣೆ ಮಾಡಲಾಗಿದೆ.

ಬಿಗ್ ಬಾಸ್ ಶನಿವಾರದ ಎಪಿಸೋಡ್ 9.9 ಟಿವಿಆರ್ ಪಡೆದರೆ ಭಾನುವಾರದ ಎಪಿಸೋಡ್ 13.7 ಟಿವಿಆರ್ ಪಡೆದುಕೊಂಡಿದೆ. ಈ ಮೂಲಕ ಈ ರಿಯಾಲಿಟಿ ಶೋ ದಾಖಲೆಯ ಟಿಆರ್​ಪಿ ಪಡೆದುಕೊಂಡಿದೆ. ಕಳೆದ ಸೀಸನ್​ಗಿಂತ ಈ ಸೀಸನ್ ಉತ್ತಮ ಟಿಆರ್​ಪಿ ಪಡೆದು ಸೀಸನ್​ನ ಕೊನೆಗೊಳಿಸಿದೆ.

ಸೀರಿಯಲ್​ಗಳ ವಿಚಾರಕ್ಕೆ ಬರೋದಾದರೆ ಈ ಮೊದಲು ಪ್ರಸಾರ ಕಾಣುತ್ತಿದ್ದ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿ ಇದೆ. ಈ ಮೊದಲು ಎರಡು ಹಾಗೂ ಮೂರನೇ ಸ್ಥಾನದಲ್ಲಿ ಇರುತ್ತಿದ್ದ ಈ ಧಾರಾವಾಹಿ ಈಗ ಮೊದಲ ಸ್ಥಾನ ಪಡೆದುಕೊಂಡಿದೆ ಅನ್ನೋದು ವಿಶೇಷ.

ಇನ್ನು, ಇತ್ತೀಚೆಗೆ ಪ್ರಸಾರ ಆರಂಭಿಸಿರೋ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಬ್ಲಾಕ್​ಬಸ್ಟರ್ ಎನಿಸಿಕೊಂಡಿದೆ. ಈ ಧಾರಾವಾಹಿ, ನಗರ ವಿಭಾಗದಲ್ಲಿ ಎರಡನೇ ಸ್ಥಾನ ಪಡೆದಿದೆ. ಓಪನಿಂಗ್ ವೀಕ್​ನಲ್ಲಿ ಇಷ್ಟು ಒಳ್ಳೆಯ ಟಿಆರ್​ಪಿ ಪಡೆದುಕೊಂಡಿದ್ದು ತಂಡಕ್ಕೆ ಖುಷಿ ನೀಡಿದೆ.  ಮೂರನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’, ನಾಲ್ಕನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ಕಲರ್ಸ್​​ನಲ್ಲಿ ಆರಂಭ ಆದ ‘ವಧು’, ‘ಅಣ್ಣಯ್ಯ’, ‘ನೂರು ಜನ್ಮಕು’ ಧಾರಾವಾಹಿಗಳು ಸಾಧಾರಣ ಟಿಆರ್​ಪಿ ಪಡೆದುಕೊಂಡಿವೆ.

ಇದನ್ನೂ ಓದಿ: ಸೀತಾಗೆ ಸಿಹಿ ಸಿಗೋ ಮೊದಲೇ ಬದಲಾಯಿತು ‘ಸೀತಾ ರಾಮ’ ಪ್ರಸಾರ ಸಮಯ: ವೀಕ್ಷಕರ ಅಸಮಾಧಾನ

ಅತ್ತ ‘ಸೀತಾ ರಾಮ’ ಧಾರಾವಾಹಿಯ ಸಮಯ ಬದಲಾವಣೆ ಆಗಿದೆ. ಈ ಧಾರಾವಾಹಿಯನ್ನು ರಾತ್ರಿ 9.30ರಿಂದ ಸಂಜೆ 5.30ಕ್ಕೆ ಶಿಫ್ಟ್ ಮಾಡಲಾಗಿದೆ. ಇದು ಧಾರಾವಾಹಿ ಟಿಆರ್​ಪಿ ಮೇಲೆ ದೊಡ್ಡ ಪರಿಣಾಮ ಬೀರಿದೆ. ಈ ಧಾರಾವಾಹಿಯ ಟಿಆರ್​ಪಿ ಮತ್ತಷ್ಟು ಕುಸಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:22 pm, Thu, 6 February 25

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ