Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ಗೆ ಉಘೇ ಎಂದ ವೀಕ್ಷಕರು; ಶನಿವಾರ-ಭಾನುವಾರ ಬಿಗ್ ಬಾಸ್​ಗೆ ಭರ್ಜರಿ ಟಿಆರ್​ಪಿ

ಸುದೀಪ್ ಹೋಸ್ಟ್ ಮಾಡಿದ ಮೊದಲ ವಾರದ ಟಿಆರ್​ಪಿ ಆಗಿದೆ. ಆ ವಾರದಲ್ಲಿ ಜಗದೀಶ್ ಅವರು ಬಿಗ್ ಬಾಸ್ ವಿರುದ್ಧ ಹರಿಹಾಯ್ದಿದ್ದರು. ಅವರು ಬಿಗ್ ಬಾಸ್​ನ ಟೀಕೆ ಮಾಡಿದ್ದರು. ಬಿಗ್ ಬಾಸ್​ನೇ ಖರೀದಿ ಮಾಡುವ ಮಾತನ್ನೂ ಆಡಿದ್ದರು. ಈ ಎಲ್ಲಾ ವಿಚಾರಗಳನ್ನು ಸುದೀಪ್ ಪ್ರಸ್ತಾಪ ಮಾಡಿದ್ದರು.

ಸುದೀಪ್​ಗೆ ಉಘೇ ಎಂದ ವೀಕ್ಷಕರು; ಶನಿವಾರ-ಭಾನುವಾರ ಬಿಗ್ ಬಾಸ್​ಗೆ ಭರ್ಜರಿ ಟಿಆರ್​ಪಿ
ಸುದೀಪ್
Follow us
ರಾಜೇಶ್ ದುಗ್ಗುಮನೆ
| Updated By: ಪೃಥ್ವಿಶಂಕರ

Updated on:Oct 17, 2024 | 5:40 PM

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆ್ಯಂಕರಿಂಗ್​ನ ಅದ್ಭುತವಾಗಿ ಮಾಡುತ್ತಿದ್ದಾರೆ. ವೀಕೆಂಡ್ ಬಂತು ಎಂದರೆ ಜನರು ಈ ಶೋ ನೋಡಲು ಕಾಯುತ್ತಾ ಇರುತ್ತಾರೆ. ಅವರು ಮೊದಲ ವಾರ ಜಗದೀಶ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಇದರ ಟಿಆರ್​ಪಿ ಈಗ ರಿವೀಲ್ ಆಗಿದೆ. ವೀಕೆಂಡ್​ನಲ್ಲಿ ವೀಕ್ಷಕರು ಭರ್ಜರಿ ಟಿಆರ್​ಪಿ ತಂದುಕೊಟ್ಟಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಕಿಚ್ಚ ಸುದೀಪ್ ಅವರು ನಡೆಸಿಕೊಡುತ್ತಿರುವ ಕೊನೆಯ ಸೀಸನ್ ಇದಾಗಿದೆ. ಹೀಗಾಗಿ, ಜನರು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ. ವಾರದ ದಿನಗಳಲ್ಲಿ 7.2 ಟಿವಿಆರ್ ಪಡೆದುಕೊಂಡಿದೆ. ಶನಿವಾರ 8.8 ಟಿವಿಆರ್ ಸಿಕ್ಕಿದೆ. ಭಾನುವಾರ 9.2 ಟಿವಿಆರ್ ದೊರೆತಿದೆ. ಶನಿವಾರ ಹಾಗೂ ಭಾನುವಾರದ ಟಿವಿಆರ್ ಸೇರಿಸಿದರೆ 9 ಟಿವಿಆರ್ ಆಗಲಿದೆ. ಇದು ಕಿಚ್ಚನಿಗೆ ಇರೋ ಕ್ರೇಜ್​ನ ಸೂಚನೆ ಆಗಿದೆ.

ಇದು ಸುದೀಪ್ ಹೋಸ್ಟ್ ಮಾಡಿದ ಮೊದಲ ವಾರದ ಟಿಆರ್​ಪಿ ಆಗಿದೆ. ಆ ವಾರದಲ್ಲಿ ಜಗದೀಶ್ ಅವರು ಬಿಗ್ ಬಾಸ್ ವಿರುದ್ಧ ಹರಿಹಾಯ್ದಿದ್ದರು. ಅವರು ಬಿಗ್ ಬಾಸ್​ನ ಟೀಕೆ ಮಾಡಿದ್ದರು. ಬಿಗ್ ಬಾಸ್​ನೇ ಖರೀದಿ ಮಾಡುವ ಮಾತನ್ನೂ ಆಡಿದ್ದರು. ಈ ಎಲ್ಲಾ ವಿಚಾರಗಳನ್ನು ಸುದೀಪ್ ಪ್ರಸ್ತಾಪ ಮಾಡಿದ್ದರು.

ಇನ್ನು ಧಾರಾವಾಹಿ ವಿಚಾರದಲ್ಲಿ ಟಿಆರ್​ಪಿಯಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ ಪಡೆದಿದೆ. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಈ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಹಲವು ಸತ್ಯಗಳು ರಿವೀಲ್ ಆಗುತ್ತಿವೆ. ಹೀಗಾಗಿ, ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇದೆ.

ಇದನ್ನೂ ಓದಿ: ಬಿಗ್ ಬಾಸ್ ಲಾಂಚ್​ಗೆ ಭರ್ಜರಿ ಟಿಆರ್​ಪಿ; ಹೇಗಿತ್ತು ನೋಡಿ ಸೆಲೆಬ್ರೇಷನ್

ಮೂರನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಈ ಧಾರಾವಾಹಿಯ ಸಮಯ ಬದಲಾಗಿದೆ. ಆದಾಗ್ಯೂ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಈ ಧಾರಾವಾಹಿ ಮೂರನೇ ಸ್ಥಾನದಲ್ಲಿ ಇದೆ. ನಾಲ್ಕನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ. ಈ ಧಾರಾವಾಹಿ ಹೊಸದಾಗಿ ಆರಂಭ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:09 pm, Thu, 17 October 24

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ