ಸುದೀಪ್​ಗೆ ಉಘೇ ಎಂದ ವೀಕ್ಷಕರು; ಶನಿವಾರ-ಭಾನುವಾರ ಬಿಗ್ ಬಾಸ್​ಗೆ ಭರ್ಜರಿ ಟಿಆರ್​ಪಿ

ಸುದೀಪ್ ಹೋಸ್ಟ್ ಮಾಡಿದ ಮೊದಲ ವಾರದ ಟಿಆರ್​ಪಿ ಆಗಿದೆ. ಆ ವಾರದಲ್ಲಿ ಜಗದೀಶ್ ಅವರು ಬಿಗ್ ಬಾಸ್ ವಿರುದ್ಧ ಹರಿಹಾಯ್ದಿದ್ದರು. ಅವರು ಬಿಗ್ ಬಾಸ್​ನ ಟೀಕೆ ಮಾಡಿದ್ದರು. ಬಿಗ್ ಬಾಸ್​ನೇ ಖರೀದಿ ಮಾಡುವ ಮಾತನ್ನೂ ಆಡಿದ್ದರು. ಈ ಎಲ್ಲಾ ವಿಚಾರಗಳನ್ನು ಸುದೀಪ್ ಪ್ರಸ್ತಾಪ ಮಾಡಿದ್ದರು.

ಸುದೀಪ್​ಗೆ ಉಘೇ ಎಂದ ವೀಕ್ಷಕರು; ಶನಿವಾರ-ಭಾನುವಾರ ಬಿಗ್ ಬಾಸ್​ಗೆ ಭರ್ಜರಿ ಟಿಆರ್​ಪಿ
ಸುದೀಪ್
Follow us
|

Updated on: Oct 17, 2024 | 2:09 PM

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆ್ಯಂಕರಿಂಗ್​ನ ಅದ್ಭುತವಾಗಿ ಮಾಡುತ್ತಿದ್ದಾರೆ. ವೀಕೆಂಡ್ ಬಂತು ಎಂದರೆ ಜನರು ಈ ಶೋ ನೋಡಲು ಕಾಯುತ್ತಾ ಇರುತ್ತಾರೆ. ಅವರು ಮೊದಲ ವಾರ ಜಗದೀಶ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಇದರ ಟಿಆರ್​ಪಿ ಈಗ ರಿವೀಲ್ ಆಗಿದೆ. ವೀಕೆಂಡ್​ನಲ್ಲಿ ವೀಕ್ಷಕರು ಭರ್ಜರಿ ಟಿಆರ್​ಪಿ ತಂದುಕೊಟ್ಟಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಕಿಚ್ಚ ಸುದೀಪ್ ಅವರು ನಡೆಸಿಕೊಡುತ್ತಿರುವ ಕೊನೆಯ ಸೀಸನ್ ಇದಾಗಿದೆ. ಹೀಗಾಗಿ, ಜನರು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ. ವಾರದ ದಿನಗಳಲ್ಲಿ 7.2 ಟಿವಿಆರ್ ಪಡೆದುಕೊಂಡಿದೆ. ಶನಿವಾರ 8.8 ಟಿವಿಆರ್ ಸಿಕ್ಕಿದೆ. ಭಾನುವಾರ 9.2 ಟಿವಿಆರ್ ದೊರೆತಿದೆ. ಶನಿವಾರ ಹಾಗೂ ಭಾನುವಾರದ ಟಿವಿಆರ್ ಸೇರಿಸಿದರೆ 9 ಟಿವಿಆರ್ ಆಗಲಿದೆ. ಇದು ಕಿಚ್ಚನಿಗೆ ಇರೋ ಕ್ರೇಜ್​ನ ಸೂಚನೆ ಆಗಿದೆ.

ಇದು ಸುದೀಪ್ ಹೋಸ್ಟ್ ಮಾಡಿದ ಮೊದಲ ವಾರದ ಟಿಆರ್​ಪಿ ಆಗಿದೆ. ಆ ವಾರದಲ್ಲಿ ಜಗದೀಶ್ ಅವರು ಬಿಗ್ ಬಾಸ್ ವಿರುದ್ಧ ಹರಿಹಾಯ್ದಿದ್ದರು. ಅವರು ಬಿಗ್ ಬಾಸ್​ನ ಟೀಕೆ ಮಾಡಿದ್ದರು. ಬಿಗ್ ಬಾಸ್​ನೇ ಖರೀದಿ ಮಾಡುವ ಮಾತನ್ನೂ ಆಡಿದ್ದರು. ಈ ಎಲ್ಲಾ ವಿಚಾರಗಳನ್ನು ಸುದೀಪ್ ಪ್ರಸ್ತಾಪ ಮಾಡಿದ್ದರು.

ಇನ್ನು ಧಾರಾವಾಹಿ ವಿಚಾರದಲ್ಲಿ ಟಿಆರ್​ಪಿಯಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ ಪಡೆದಿದೆ. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಈ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಹಲವು ಸತ್ಯಗಳು ರಿವೀಲ್ ಆಗುತ್ತಿವೆ. ಹೀಗಾಗಿ, ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇದೆ.

ಇದನ್ನೂ ಓದಿ: ಬಿಗ್ ಬಾಸ್ ಲಾಂಚ್​ಗೆ ಭರ್ಜರಿ ಟಿಆರ್​ಪಿ; ಹೇಗಿತ್ತು ನೋಡಿ ಸೆಲೆಬ್ರೇಷನ್

ಮೂರನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಈ ಧಾರಾವಾಹಿಯ ಸಮಯ ಬದಲಾಗಿದೆ. ಆದಾಗ್ಯೂ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಈ ಧಾರಾವಾಹಿ ಮೂರನೇ ಸ್ಥಾನದಲ್ಲಿ ಇದೆ. ನಾಲ್ಕನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ. ಈ ಧಾರಾವಾಹಿ ಹೊಸದಾಗಿ ಆರಂಭ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಯೋಧ್ಯೆಯ ರಾಮ ಮಂದಿರ ನೋಡಿ ‘ಅದ್ಭುತ’ ಎಂದು ಉದ್ಘರಿಸಿದ ಇಸ್ರೇಲ್ ರಾಯಭಾರಿ
ಅಯೋಧ್ಯೆಯ ರಾಮ ಮಂದಿರ ನೋಡಿ ‘ಅದ್ಭುತ’ ಎಂದು ಉದ್ಘರಿಸಿದ ಇಸ್ರೇಲ್ ರಾಯಭಾರಿ
ಚನ್ನಪಟ್ಟಣ; ಕುಮಾರಸ್ವಾಮಿ ನಮ್ಮ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ:ಬೊಮ್ಮಾಯಿ
ಚನ್ನಪಟ್ಟಣ; ಕುಮಾರಸ್ವಾಮಿ ನಮ್ಮ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ:ಬೊಮ್ಮಾಯಿ
ಮಳೆಗಾಲದಲ್ಲೂ ಇಷ್ಟು ಜೋರು ಮಳೆಯಾಗಿರಲಿಲ್ಲ ಎನ್ನುತ್ತಾರೆ ಸ್ಥಳೀಯರು!
ಮಳೆಗಾಲದಲ್ಲೂ ಇಷ್ಟು ಜೋರು ಮಳೆಯಾಗಿರಲಿಲ್ಲ ಎನ್ನುತ್ತಾರೆ ಸ್ಥಳೀಯರು!
ಉತ್ತಮ ಮಳೆ, ತುಂಬಿದ ಕೆಆರ್​​ಎಸ್; ಮಂಡ್ಯ ರೈತನ ಸಂತೋಷಕ್ಕೆ ಪಾರವೇ ಇಲ್ಲ!
ಉತ್ತಮ ಮಳೆ, ತುಂಬಿದ ಕೆಆರ್​​ಎಸ್; ಮಂಡ್ಯ ರೈತನ ಸಂತೋಷಕ್ಕೆ ಪಾರವೇ ಇಲ್ಲ!
ನಡು ರಸ್ತೆಯಲ್ಲಿ ತಲ್ವಾರ್​ನಿಂದ ಕೇಕ್​ ಕತ್ತರಿಸಿ ಹುಟ್ಟು ಹಬ್ಬ ಆಚರಣೆ
ನಡು ರಸ್ತೆಯಲ್ಲಿ ತಲ್ವಾರ್​ನಿಂದ ಕೇಕ್​ ಕತ್ತರಿಸಿ ಹುಟ್ಟು ಹಬ್ಬ ಆಚರಣೆ
ಕಾವೇರಿ ತೀರ್ಥೋದ್ಭವ: ಆ ದಿವ್ಯ ಕ್ಷಣ ಹೇಗಿತ್ತು ನೋಡಿ
ಕಾವೇರಿ ತೀರ್ಥೋದ್ಭವ: ಆ ದಿವ್ಯ ಕ್ಷಣ ಹೇಗಿತ್ತು ನೋಡಿ
ರಣರೋಚಕ ಫೈನಲ್​ನಲ್ಲಿ ಗೆದ್ದು ಬೀಗಿದ ಸದರ್ನ್ ಸೂಪರ್ ಸ್ಟಾರ್ಸ್
ರಣರೋಚಕ ಫೈನಲ್​ನಲ್ಲಿ ಗೆದ್ದು ಬೀಗಿದ ಸದರ್ನ್ ಸೂಪರ್ ಸ್ಟಾರ್ಸ್
ಜಗದೀಶ್​ಗೆ ಸೀರೆ ಕೊಡೋಕೆ ಮುಂದಾದ ಮನೆ ಮಂದಿ; ‘ಹೆಂಗಸಾಗೋಕೂ ಯೋಗ್ಯತೆ ಇಲ್ಲ’
ಜಗದೀಶ್​ಗೆ ಸೀರೆ ಕೊಡೋಕೆ ಮುಂದಾದ ಮನೆ ಮಂದಿ; ‘ಹೆಂಗಸಾಗೋಕೂ ಯೋಗ್ಯತೆ ಇಲ್ಲ’
ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ, ಅರ್ಚಕರ ತಂಡದಿಂದ ಪೂಜೆ
ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ, ಅರ್ಚಕರ ತಂಡದಿಂದ ಪೂಜೆ
Cauvery Tirthodbhava Live: ಕಾವೇರಿ ತೀರ್ಥೋದ್ಭವ ಲೈವ್​ ನೋಡಿ
Cauvery Tirthodbhava Live: ಕಾವೇರಿ ತೀರ್ಥೋದ್ಭವ ಲೈವ್​ ನೋಡಿ