ಸುದೀಪ್​ಗೆ ಉಘೇ ಎಂದ ವೀಕ್ಷಕರು; ಶನಿವಾರ-ಭಾನುವಾರ ಬಿಗ್ ಬಾಸ್​ಗೆ ಭರ್ಜರಿ ಟಿಆರ್​ಪಿ

ಸುದೀಪ್ ಹೋಸ್ಟ್ ಮಾಡಿದ ಮೊದಲ ವಾರದ ಟಿಆರ್​ಪಿ ಆಗಿದೆ. ಆ ವಾರದಲ್ಲಿ ಜಗದೀಶ್ ಅವರು ಬಿಗ್ ಬಾಸ್ ವಿರುದ್ಧ ಹರಿಹಾಯ್ದಿದ್ದರು. ಅವರು ಬಿಗ್ ಬಾಸ್​ನ ಟೀಕೆ ಮಾಡಿದ್ದರು. ಬಿಗ್ ಬಾಸ್​ನೇ ಖರೀದಿ ಮಾಡುವ ಮಾತನ್ನೂ ಆಡಿದ್ದರು. ಈ ಎಲ್ಲಾ ವಿಚಾರಗಳನ್ನು ಸುದೀಪ್ ಪ್ರಸ್ತಾಪ ಮಾಡಿದ್ದರು.

ಸುದೀಪ್​ಗೆ ಉಘೇ ಎಂದ ವೀಕ್ಷಕರು; ಶನಿವಾರ-ಭಾನುವಾರ ಬಿಗ್ ಬಾಸ್​ಗೆ ಭರ್ಜರಿ ಟಿಆರ್​ಪಿ
ಸುದೀಪ್
Edited By:

Updated on: Oct 17, 2024 | 5:40 PM

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆ್ಯಂಕರಿಂಗ್​ನ ಅದ್ಭುತವಾಗಿ ಮಾಡುತ್ತಿದ್ದಾರೆ. ವೀಕೆಂಡ್ ಬಂತು ಎಂದರೆ ಜನರು ಈ ಶೋ ನೋಡಲು ಕಾಯುತ್ತಾ ಇರುತ್ತಾರೆ. ಅವರು ಮೊದಲ ವಾರ ಜಗದೀಶ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಇದರ ಟಿಆರ್​ಪಿ ಈಗ ರಿವೀಲ್ ಆಗಿದೆ. ವೀಕೆಂಡ್​ನಲ್ಲಿ ವೀಕ್ಷಕರು ಭರ್ಜರಿ ಟಿಆರ್​ಪಿ ತಂದುಕೊಟ್ಟಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಕಿಚ್ಚ ಸುದೀಪ್ ಅವರು ನಡೆಸಿಕೊಡುತ್ತಿರುವ ಕೊನೆಯ ಸೀಸನ್ ಇದಾಗಿದೆ. ಹೀಗಾಗಿ, ಜನರು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ. ವಾರದ ದಿನಗಳಲ್ಲಿ 7.2 ಟಿವಿಆರ್ ಪಡೆದುಕೊಂಡಿದೆ. ಶನಿವಾರ 8.8 ಟಿವಿಆರ್ ಸಿಕ್ಕಿದೆ. ಭಾನುವಾರ 9.2 ಟಿವಿಆರ್ ದೊರೆತಿದೆ. ಶನಿವಾರ ಹಾಗೂ ಭಾನುವಾರದ ಟಿವಿಆರ್ ಸೇರಿಸಿದರೆ 9 ಟಿವಿಆರ್ ಆಗಲಿದೆ. ಇದು ಕಿಚ್ಚನಿಗೆ ಇರೋ ಕ್ರೇಜ್​ನ ಸೂಚನೆ ಆಗಿದೆ.

ಇದು ಸುದೀಪ್ ಹೋಸ್ಟ್ ಮಾಡಿದ ಮೊದಲ ವಾರದ ಟಿಆರ್​ಪಿ ಆಗಿದೆ. ಆ ವಾರದಲ್ಲಿ ಜಗದೀಶ್ ಅವರು ಬಿಗ್ ಬಾಸ್ ವಿರುದ್ಧ ಹರಿಹಾಯ್ದಿದ್ದರು. ಅವರು ಬಿಗ್ ಬಾಸ್​ನ ಟೀಕೆ ಮಾಡಿದ್ದರು. ಬಿಗ್ ಬಾಸ್​ನೇ ಖರೀದಿ ಮಾಡುವ ಮಾತನ್ನೂ ಆಡಿದ್ದರು. ಈ ಎಲ್ಲಾ ವಿಚಾರಗಳನ್ನು ಸುದೀಪ್ ಪ್ರಸ್ತಾಪ ಮಾಡಿದ್ದರು.

ಇನ್ನು ಧಾರಾವಾಹಿ ವಿಚಾರದಲ್ಲಿ ಟಿಆರ್​ಪಿಯಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ ಪಡೆದಿದೆ. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಈ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಹಲವು ಸತ್ಯಗಳು ರಿವೀಲ್ ಆಗುತ್ತಿವೆ. ಹೀಗಾಗಿ, ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇದೆ.

ಇದನ್ನೂ ಓದಿ: ಬಿಗ್ ಬಾಸ್ ಲಾಂಚ್​ಗೆ ಭರ್ಜರಿ ಟಿಆರ್​ಪಿ; ಹೇಗಿತ್ತು ನೋಡಿ ಸೆಲೆಬ್ರೇಷನ್

ಮೂರನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಈ ಧಾರಾವಾಹಿಯ ಸಮಯ ಬದಲಾಗಿದೆ. ಆದಾಗ್ಯೂ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಈ ಧಾರಾವಾಹಿ ಮೂರನೇ ಸ್ಥಾನದಲ್ಲಿ ಇದೆ. ನಾಲ್ಕನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ. ಈ ಧಾರಾವಾಹಿ ಹೊಸದಾಗಿ ಆರಂಭ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:09 pm, Thu, 17 October 24

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us