AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಗ್ಗಿತು ಬಿಗ್ ಬಾಸ್​ ಟಿಆರ್​ಪಿ; ಧಾರಾವಾಹಿಗಳಲ್ಲಿ ‘ಪುಟ್ಟಕ್ಕ’ನೇ ನಂಬರ್ 1

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆ್ಯಂಕರಿಂಗ್​ನ ಅದ್ಭುತವಾಗಿ ಮಾಡುತ್ತಿದ್ದಾರೆ. ವೀಕೆಂಡ್ ಬಂತು ಎಂದರೆ ಜನರು ಈ ಶೋ ನೋಡಲು ಕಾಯುತ್ತಾ ಇರುತ್ತಾರೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈಗ ಟಿಆರ್​ಪಿ ಕುಗ್ಗಿದೆ ಎಂದು ಹೇಳಬಹುದು.

ತಗ್ಗಿತು ಬಿಗ್ ಬಾಸ್​ ಟಿಆರ್​ಪಿ; ಧಾರಾವಾಹಿಗಳಲ್ಲಿ ‘ಪುಟ್ಟಕ್ಕ’ನೇ ನಂಬರ್ 1
ಬಿಗ್ ಬಾಸ್-ಪುಟ್ಟಕ್ಕನ ಮಕ್ಕಳು
ರಾಜೇಶ್ ದುಗ್ಗುಮನೆ
|

Updated on: Oct 24, 2024 | 2:43 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ಆರಂಭದಲ್ಲಿ ಭರ್ಜರಿ ಟಿಆರ್​ಪಿ ಪಡೆದುಕೊಂಡಿತು. ಓಪನಿಂಗ್ ದಿನ 9+ ಟಿಆರ್​ಪಿ ಪಡೆದು ಮೊದಲ ಸ್ಥಾನ ಪಡೆದುಕೊಂಡಿತು. ಈಗ ನಿಧಾನವಾಗಿ ಬಿಗ್ ಬಾಸ್ ಟಿಆರ್​ಪಿ ಕುಗ್ಗಿದೆ. ಹಾಗಂತ ಜಗದೀಶ್ ಇಲ್ಲದ ಕಾರಣಕ್ಕೆ ಬಿಗ್ ಬಾಸ್ ಟಿಆರ್​ಪಿ ಕುಗ್ಗಿದೆ ಎಂದು ಹೇಳೋಕೆ ಆಗಲ್ಲ. ಏಕೆಂದರೆ ಇದು ಜಗದೀಶ್ ಇದ್ದ ಎಪಿಸೋಡ್​ಗಳ ಟಿಆರ್​ಪಿ.

ಶನಿವಾರ ಬಿಗ್ ಬಾಸ್​ಗೆ 7.3 ಟಿಆರ್​ಪಿ ಸಿಕ್ಕಿದೆ. ಭಾನುವಾರ 6.9 ಟಿಆರ್​ಪಿ ಸಿಕ್ಕಿದೆ. ವಾರದ ದಿನಗಳಲ್ಲಿ 7.0 ಟಿಆರ್​ಪಿ ಸಿಕ್ಕಿದೆ. ವಾರಾಂತ್ಯದ ಟಿಆರ್​ಪಿಯಲ್ಲಿ ಸಾಕಷ್ಟು ಕುಸಿತ ಕಂಡಿದೆ. ಭಾನುವಾರ ಯಾರಿಗೂ ಕ್ಲಾಸ್ ತೆಗೆದುಕೊಳ್ಳುವುದಿಲ್ಲ. ಅಲ್ಲಿ ಫನ್ ಆ್ಯಕ್ಟಿವಿಟಿ ಮಾಡಿಸಲಾಗುತ್ತದೆ. ಆದರೆ, ಇದು ಅಷ್ಟು ಮನರಂಜನಾತ್ಮಕವಾಗಿರುವುದಿಲ್ಲ ಅನ್ನೋದು ಕೆಲವರ ಅಭಿಪ್ರಾಯ. ಈ ಕಾರಣಕ್ಕೂ ಭಾನುವಾರದ ಟಿಆರ್​ಪಿ ಕುಗ್ಗಿರಬಹುದು.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಲವು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಈ ಧಾರಾವಾಹಿ ಈ ಮೊದಲು ಒಂದನೇ ಸ್ಥಾನದಲ್ಲಿ ಇರುತ್ತಿತ್ತು. ಆದರೆ, ಸಮಯ ಬದಲಾವಣೆಯ ನಂತರ ಟಿಆರ್​ಪಿ ಕುಸಿದಿತ್ತು. ಈಗ ಮತ್ತೆ ಈ ಧಾರಾವಾಹಿ ಮೊದಲ ಸ್ಥಾನಕ್ಕೆ ಬಂದಿದೆ. ಎರಡಂಕಿ ತಲುಪಲು ಈ ಧಾರಾವಾಹಿಗೆ ಬೇಕಿರೋದು ಕೇವಲ 0.1 ಟಿವಿಆರ್ ಮಾತ್ರ ಎಂಬುದು ಇಲ್ಲಿ ಗಮನಿಸಬೇಕಾದ ವಿಚಾರ.

ಇದನ್ನೂ ಓದಿ: ಸುದೀಪ್​ಗೆ ಉಘೇ ಎಂದ ವೀಕ್ಷಕರು; ಶನಿವಾರ-ಭಾನುವಾರ ಬಿಗ್ ಬಾಸ್​ಗೆ ಭರ್ಜರಿ ಟಿಆರ್​ಪಿ

ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಮೂರನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಹಲವು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ‘ಅಣ್ಣಯ್ಯ’ ಧಾರಾವಾಹಿಗೆ ನಾಲ್ಕನೇ ಸ್ಥಾನ ಸಿಕ್ಕಿದೆ. ಇತ್ತೀಚೆಗೆ ಆರಂಭವಾದ ಧಾರಾವಾಹಿ ಇದಾಗಿದ್ದು, ಕಡಿಮೆ ಟಿಆರ್​ಪಿ ಪಡೆದಿತ್ತು. ಈಗ ಧಾರಾವಾಹಿ ಮತ್ತೆ ಪುಟಿದ್ದೆದ್ದಿದೆ. ಐದನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಬಾರಿ ಟಾಪ್​ ಐದರಲ್ಲಿ ಇರೋ ಎಲ್ಲಾ ಧಾರಾವಾಹಿಗಳು ಜೀ ಕನ್ನಡದವೇ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ