AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಗ್ಗಿತು ಬಿಗ್ ಬಾಸ್​ ಟಿಆರ್​ಪಿ; ಧಾರಾವಾಹಿಗಳಲ್ಲಿ ‘ಪುಟ್ಟಕ್ಕ’ನೇ ನಂಬರ್ 1

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆ್ಯಂಕರಿಂಗ್​ನ ಅದ್ಭುತವಾಗಿ ಮಾಡುತ್ತಿದ್ದಾರೆ. ವೀಕೆಂಡ್ ಬಂತು ಎಂದರೆ ಜನರು ಈ ಶೋ ನೋಡಲು ಕಾಯುತ್ತಾ ಇರುತ್ತಾರೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈಗ ಟಿಆರ್​ಪಿ ಕುಗ್ಗಿದೆ ಎಂದು ಹೇಳಬಹುದು.

ತಗ್ಗಿತು ಬಿಗ್ ಬಾಸ್​ ಟಿಆರ್​ಪಿ; ಧಾರಾವಾಹಿಗಳಲ್ಲಿ ‘ಪುಟ್ಟಕ್ಕ’ನೇ ನಂಬರ್ 1
ಬಿಗ್ ಬಾಸ್-ಪುಟ್ಟಕ್ಕನ ಮಕ್ಕಳು
ರಾಜೇಶ್ ದುಗ್ಗುಮನೆ
|

Updated on: Oct 24, 2024 | 2:43 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ಆರಂಭದಲ್ಲಿ ಭರ್ಜರಿ ಟಿಆರ್​ಪಿ ಪಡೆದುಕೊಂಡಿತು. ಓಪನಿಂಗ್ ದಿನ 9+ ಟಿಆರ್​ಪಿ ಪಡೆದು ಮೊದಲ ಸ್ಥಾನ ಪಡೆದುಕೊಂಡಿತು. ಈಗ ನಿಧಾನವಾಗಿ ಬಿಗ್ ಬಾಸ್ ಟಿಆರ್​ಪಿ ಕುಗ್ಗಿದೆ. ಹಾಗಂತ ಜಗದೀಶ್ ಇಲ್ಲದ ಕಾರಣಕ್ಕೆ ಬಿಗ್ ಬಾಸ್ ಟಿಆರ್​ಪಿ ಕುಗ್ಗಿದೆ ಎಂದು ಹೇಳೋಕೆ ಆಗಲ್ಲ. ಏಕೆಂದರೆ ಇದು ಜಗದೀಶ್ ಇದ್ದ ಎಪಿಸೋಡ್​ಗಳ ಟಿಆರ್​ಪಿ.

ಶನಿವಾರ ಬಿಗ್ ಬಾಸ್​ಗೆ 7.3 ಟಿಆರ್​ಪಿ ಸಿಕ್ಕಿದೆ. ಭಾನುವಾರ 6.9 ಟಿಆರ್​ಪಿ ಸಿಕ್ಕಿದೆ. ವಾರದ ದಿನಗಳಲ್ಲಿ 7.0 ಟಿಆರ್​ಪಿ ಸಿಕ್ಕಿದೆ. ವಾರಾಂತ್ಯದ ಟಿಆರ್​ಪಿಯಲ್ಲಿ ಸಾಕಷ್ಟು ಕುಸಿತ ಕಂಡಿದೆ. ಭಾನುವಾರ ಯಾರಿಗೂ ಕ್ಲಾಸ್ ತೆಗೆದುಕೊಳ್ಳುವುದಿಲ್ಲ. ಅಲ್ಲಿ ಫನ್ ಆ್ಯಕ್ಟಿವಿಟಿ ಮಾಡಿಸಲಾಗುತ್ತದೆ. ಆದರೆ, ಇದು ಅಷ್ಟು ಮನರಂಜನಾತ್ಮಕವಾಗಿರುವುದಿಲ್ಲ ಅನ್ನೋದು ಕೆಲವರ ಅಭಿಪ್ರಾಯ. ಈ ಕಾರಣಕ್ಕೂ ಭಾನುವಾರದ ಟಿಆರ್​ಪಿ ಕುಗ್ಗಿರಬಹುದು.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಲವು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಈ ಧಾರಾವಾಹಿ ಈ ಮೊದಲು ಒಂದನೇ ಸ್ಥಾನದಲ್ಲಿ ಇರುತ್ತಿತ್ತು. ಆದರೆ, ಸಮಯ ಬದಲಾವಣೆಯ ನಂತರ ಟಿಆರ್​ಪಿ ಕುಸಿದಿತ್ತು. ಈಗ ಮತ್ತೆ ಈ ಧಾರಾವಾಹಿ ಮೊದಲ ಸ್ಥಾನಕ್ಕೆ ಬಂದಿದೆ. ಎರಡಂಕಿ ತಲುಪಲು ಈ ಧಾರಾವಾಹಿಗೆ ಬೇಕಿರೋದು ಕೇವಲ 0.1 ಟಿವಿಆರ್ ಮಾತ್ರ ಎಂಬುದು ಇಲ್ಲಿ ಗಮನಿಸಬೇಕಾದ ವಿಚಾರ.

ಇದನ್ನೂ ಓದಿ: ಸುದೀಪ್​ಗೆ ಉಘೇ ಎಂದ ವೀಕ್ಷಕರು; ಶನಿವಾರ-ಭಾನುವಾರ ಬಿಗ್ ಬಾಸ್​ಗೆ ಭರ್ಜರಿ ಟಿಆರ್​ಪಿ

ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಮೂರನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಹಲವು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ‘ಅಣ್ಣಯ್ಯ’ ಧಾರಾವಾಹಿಗೆ ನಾಲ್ಕನೇ ಸ್ಥಾನ ಸಿಕ್ಕಿದೆ. ಇತ್ತೀಚೆಗೆ ಆರಂಭವಾದ ಧಾರಾವಾಹಿ ಇದಾಗಿದ್ದು, ಕಡಿಮೆ ಟಿಆರ್​ಪಿ ಪಡೆದಿತ್ತು. ಈಗ ಧಾರಾವಾಹಿ ಮತ್ತೆ ಪುಟಿದ್ದೆದ್ದಿದೆ. ಐದನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಬಾರಿ ಟಾಪ್​ ಐದರಲ್ಲಿ ಇರೋ ಎಲ್ಲಾ ಧಾರಾವಾಹಿಗಳು ಜೀ ಕನ್ನಡದವೇ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ