AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Serials TRP: ಕಿಚ್ಚನ ಕೊನೆಯ ಪಂಚಾಯ್ತಿಗೆ ಸಿಕ್ಕ ಟಿಆರ್​ಪಿ ಎಷ್ಟು? ಇಲ್ಲಿದೆ ವಿವರ..

ಕಿಚ್ಚನ ಕೊನೆಯ ಪಂಚಾಯ್ತಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಶನಿವಾರದ ಎಪಿಸೋಡ್​ಗೆ 8.8 ರೇಟಿಂಗ್ ಹಾಗೂ ಭಾನುವಾರ ಎಪಿಸೋಡ್​ಗೆ 8.7 ರೇಟಿಂಗ್ ಸಿಕ್ಕಿದೆ ಎಂಬುದು ವಿಶೇಷ. ಫಿನಾಲೆ ವಾರಗಳಲ್ಲಿ ಬಿಗ್ ಬಾಸ್ 7.4  ರೇಟಿಂಗ್ ಪಡೆದಿದೆ. ಈ ಮೂಲಕ ಒಳ್ಳೆಯ ರೀತಿಯಲ್ಲಿ ಬಿಗ್ ಬಾಸ್ ಪೂರ್ಣಗೊಂಡಿದೆ.

Kannada Serials TRP: ಕಿಚ್ಚನ ಕೊನೆಯ ಪಂಚಾಯ್ತಿಗೆ ಸಿಕ್ಕ ಟಿಆರ್​ಪಿ ಎಷ್ಟು? ಇಲ್ಲಿದೆ ವಿವರ..
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Feb 01, 2024 | 12:29 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಇತ್ತೀಚೆಗೆ ಪೂರ್ಣಗೊಂಡಿದೆ. ಕಳೆದ ಸೀಸನ್​ಗಳಿಗೆ ಹೋಲಿಕೆ ಮಾಡಿದರೆ ಈ ಬಾರಿಯ ಸೀಸನ್ ಹೆಚ್ಚು ಟಿಆರ್​ಪಿ ಪಡೆದಿದೆ. ಈ ಸೀಸನ್​ನ ವೀಕೆಂಡ್ ಎಪಿಸೋಡ್​ಗಳು 9+ ಟಿಆರ್​ಪಿ ಪಡೆದ ಉದಾಹರಣೆ ಇದೆ. ಈಗ ಕೊನೆಯ ಪಂಚಾಯ್ತಿಯ ಟಿಆರ್​ಪಿ ಹೊರ ಬಿದ್ದಿದೆ. ಈ ವೇಳೆಯೂ ಭರ್ಜರಿ ಟಿಆರ್​ಪಿ ಪಡೆದೇ ಬಿಗ್ ಬಾಸ್ ಕೊನೆಗೊಂಡಿದೆ. ಇದು ಕಲರ್ಸ್ ಕನ್ನಡ ವಾಹಿನಿಯ ಖುಷಿ ಹೆಚ್ಚಿಸಿದೆ. ಕೊನೆಯ ವಾರವೂ ಉತ್ತಮ ರೇಟಿಂಗ್ ಪಡೆಯಲು ಬಿಗ್ ಬಾಸ್ ಯಶಸ್ವಿ ಆಗಿದೆ.

ಕಿಚ್ಚನ ಕೊನೆಯ ಪಂಚಾಯ್ತಿಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಶನಿವಾರದ ಎಪಿಸೋಡ್​ಗೆ 8.8 ರೇಟಿಂಗ್ ಹಾಗೂ ಭಾನುವಾರ ಎಪಿಸೋಡ್​ಗೆ 8.7 ರೇಟಿಂಗ್ ಸಿಕ್ಕಿದೆ. ಫಿನಾಲೆ ವಾರಗಳಲ್ಲಿ ಬಿಗ್ ಬಾಸ್ 7.4  ರೇಟಿಂಗ್ ಪಡೆದಿದೆ. ಈ ಮೂಲಕ ಒಳ್ಳೆಯ ರೀತಿಯಲ್ಲಿ ಬಿಗ್ ಬಾಸ್ ಕೊನೆಗೊಂಡಂತೆ ಆಗಿದೆ. ಫಿನಾಲೆ ವಾರದ ಟಿಆರ್​ಪಿ ಮುಂದಿನ ವಾರ ಹೊರ ಬೀಳಲಿದೆ.

ಧಾರಾವಾಹಿಗಳ ಟಿಆರ್​ಪಿ

ನಗರ ಭಾಗದ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ‘ಗಟ್ಟಿಮೇಳ’ ಈ ಮೊದಲು ಎರಡನೇ ಸ್ಥಾನ ಕಾಪಾಡಿಕೊಳ್ಳುತ್ತಾ ಬರುತ್ತಿತ್ತು. ಆ ಧಾರಾವಾಹಿ ಪೂರ್ಣಗೊಂಡಿದ್ದು, ‘ಲಕ್ಷ್ಮೀ ನಿವಾಸ’ ಪ್ರಾರಂಭ ಆಗಿದೆ. ಈ ಧಾರಾವಾಹಿಗೆ ಜನಮೆಚ್ಚುಗೆ ಸಿಕ್ಕಿದೆ. ಈ ಮೂಲಕ ಮೊದಲ ಸ್ಥಾನ ಸಿಕ್ಕಿದೆ. ‘ಪುಟ್ಟಕ್ಕನ ಮಕ್ಕಳು’ ಮೊದಲ ಸ್ಥಾನದಲ್ಲಿ ಮುಂದುವರಿಯುತ್ತಾ ಬರುತ್ತಿತ್ತು. ‘ಲಕ್ಷ್ಮೀ ನಿವಾಸ’ ಧಾರಾವಾಹಿ ‘ಗಟ್ಟಿಮೇಳ’ವನ್ನು ಹಿಂದಿಕ್ಕಿದೆ.

ಮೂರನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಇದೆ.  ಪ್ರಬುದ್ಧ ಪ್ರೇಮಕಥೆಯನ್ನು ಈ ಧಾರಾವಾಹಿ ಹೊಂದಿದೆ. ನಂತರದ ಸ್ಥಾನದಲ್ಲಿ ಅಂದರೆ ನಾಲ್ಕನೇ ಸ್ಥಾನದಲ್ಲಿ ‘ಸತ್ಯ’ ಧಾರಾವಾಹಿ ಇದೆ. ಐದನೇ ಸ್ಥಾನದಲ್ಲಿ ಕಲರ್ಸ್ ಕನ್ನಡದ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಇದೆ. ಸುದರ್ಶನ್, ಸುಷ್ಮಾ ರಾವ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ಬಾತ್​ರೂಂನಲ್ಲೂ ಇಡಲಾಗಿತ್ತು ಮೈಕ್ರೋಫೋನ್; ‘ಬಿಗ್ ಬಾಸ್’ ಮುಗಿದಮೇಲೆ ಗೊತ್ತಾಯ್ತು ವಿಚಾರ

‘ಸೀತಾ ರಾಮ’ ಹಾಗೂ ‘ಅಮೃತಧಾರೆ’ ಧಾರಾವಾಹಿಗಳ ಟಿಆರ್​ಪಿ ಕಡಿಮೆ ಆಗಿದೆ. ಈ ಧಾರಾವಾಹಿ ಮೊದಲಿನ ಚಾರ್ಮ್ ಉಳಿಸಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಈ ಧಾರಾವಾಹಿಗಳು ಹೆಚ್ಚಿನ ಟಿಆರ್​ಪಿ ಪಡೆಯಲಿವೆಯೇ ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​