AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Serials TRP: ಕಿಚ್ಚನ ಕೊನೆಯ ಪಂಚಾಯ್ತಿಗೆ ಸಿಕ್ಕ ಟಿಆರ್​ಪಿ ಎಷ್ಟು? ಇಲ್ಲಿದೆ ವಿವರ..

ಕಿಚ್ಚನ ಕೊನೆಯ ಪಂಚಾಯ್ತಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಶನಿವಾರದ ಎಪಿಸೋಡ್​ಗೆ 8.8 ರೇಟಿಂಗ್ ಹಾಗೂ ಭಾನುವಾರ ಎಪಿಸೋಡ್​ಗೆ 8.7 ರೇಟಿಂಗ್ ಸಿಕ್ಕಿದೆ ಎಂಬುದು ವಿಶೇಷ. ಫಿನಾಲೆ ವಾರಗಳಲ್ಲಿ ಬಿಗ್ ಬಾಸ್ 7.4  ರೇಟಿಂಗ್ ಪಡೆದಿದೆ. ಈ ಮೂಲಕ ಒಳ್ಳೆಯ ರೀತಿಯಲ್ಲಿ ಬಿಗ್ ಬಾಸ್ ಪೂರ್ಣಗೊಂಡಿದೆ.

Kannada Serials TRP: ಕಿಚ್ಚನ ಕೊನೆಯ ಪಂಚಾಯ್ತಿಗೆ ಸಿಕ್ಕ ಟಿಆರ್​ಪಿ ಎಷ್ಟು? ಇಲ್ಲಿದೆ ವಿವರ..
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Feb 01, 2024 | 12:29 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಇತ್ತೀಚೆಗೆ ಪೂರ್ಣಗೊಂಡಿದೆ. ಕಳೆದ ಸೀಸನ್​ಗಳಿಗೆ ಹೋಲಿಕೆ ಮಾಡಿದರೆ ಈ ಬಾರಿಯ ಸೀಸನ್ ಹೆಚ್ಚು ಟಿಆರ್​ಪಿ ಪಡೆದಿದೆ. ಈ ಸೀಸನ್​ನ ವೀಕೆಂಡ್ ಎಪಿಸೋಡ್​ಗಳು 9+ ಟಿಆರ್​ಪಿ ಪಡೆದ ಉದಾಹರಣೆ ಇದೆ. ಈಗ ಕೊನೆಯ ಪಂಚಾಯ್ತಿಯ ಟಿಆರ್​ಪಿ ಹೊರ ಬಿದ್ದಿದೆ. ಈ ವೇಳೆಯೂ ಭರ್ಜರಿ ಟಿಆರ್​ಪಿ ಪಡೆದೇ ಬಿಗ್ ಬಾಸ್ ಕೊನೆಗೊಂಡಿದೆ. ಇದು ಕಲರ್ಸ್ ಕನ್ನಡ ವಾಹಿನಿಯ ಖುಷಿ ಹೆಚ್ಚಿಸಿದೆ. ಕೊನೆಯ ವಾರವೂ ಉತ್ತಮ ರೇಟಿಂಗ್ ಪಡೆಯಲು ಬಿಗ್ ಬಾಸ್ ಯಶಸ್ವಿ ಆಗಿದೆ.

ಕಿಚ್ಚನ ಕೊನೆಯ ಪಂಚಾಯ್ತಿಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಶನಿವಾರದ ಎಪಿಸೋಡ್​ಗೆ 8.8 ರೇಟಿಂಗ್ ಹಾಗೂ ಭಾನುವಾರ ಎಪಿಸೋಡ್​ಗೆ 8.7 ರೇಟಿಂಗ್ ಸಿಕ್ಕಿದೆ. ಫಿನಾಲೆ ವಾರಗಳಲ್ಲಿ ಬಿಗ್ ಬಾಸ್ 7.4  ರೇಟಿಂಗ್ ಪಡೆದಿದೆ. ಈ ಮೂಲಕ ಒಳ್ಳೆಯ ರೀತಿಯಲ್ಲಿ ಬಿಗ್ ಬಾಸ್ ಕೊನೆಗೊಂಡಂತೆ ಆಗಿದೆ. ಫಿನಾಲೆ ವಾರದ ಟಿಆರ್​ಪಿ ಮುಂದಿನ ವಾರ ಹೊರ ಬೀಳಲಿದೆ.

ಧಾರಾವಾಹಿಗಳ ಟಿಆರ್​ಪಿ

ನಗರ ಭಾಗದ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ‘ಗಟ್ಟಿಮೇಳ’ ಈ ಮೊದಲು ಎರಡನೇ ಸ್ಥಾನ ಕಾಪಾಡಿಕೊಳ್ಳುತ್ತಾ ಬರುತ್ತಿತ್ತು. ಆ ಧಾರಾವಾಹಿ ಪೂರ್ಣಗೊಂಡಿದ್ದು, ‘ಲಕ್ಷ್ಮೀ ನಿವಾಸ’ ಪ್ರಾರಂಭ ಆಗಿದೆ. ಈ ಧಾರಾವಾಹಿಗೆ ಜನಮೆಚ್ಚುಗೆ ಸಿಕ್ಕಿದೆ. ಈ ಮೂಲಕ ಮೊದಲ ಸ್ಥಾನ ಸಿಕ್ಕಿದೆ. ‘ಪುಟ್ಟಕ್ಕನ ಮಕ್ಕಳು’ ಮೊದಲ ಸ್ಥಾನದಲ್ಲಿ ಮುಂದುವರಿಯುತ್ತಾ ಬರುತ್ತಿತ್ತು. ‘ಲಕ್ಷ್ಮೀ ನಿವಾಸ’ ಧಾರಾವಾಹಿ ‘ಗಟ್ಟಿಮೇಳ’ವನ್ನು ಹಿಂದಿಕ್ಕಿದೆ.

ಮೂರನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಇದೆ.  ಪ್ರಬುದ್ಧ ಪ್ರೇಮಕಥೆಯನ್ನು ಈ ಧಾರಾವಾಹಿ ಹೊಂದಿದೆ. ನಂತರದ ಸ್ಥಾನದಲ್ಲಿ ಅಂದರೆ ನಾಲ್ಕನೇ ಸ್ಥಾನದಲ್ಲಿ ‘ಸತ್ಯ’ ಧಾರಾವಾಹಿ ಇದೆ. ಐದನೇ ಸ್ಥಾನದಲ್ಲಿ ಕಲರ್ಸ್ ಕನ್ನಡದ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಇದೆ. ಸುದರ್ಶನ್, ಸುಷ್ಮಾ ರಾವ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ಬಾತ್​ರೂಂನಲ್ಲೂ ಇಡಲಾಗಿತ್ತು ಮೈಕ್ರೋಫೋನ್; ‘ಬಿಗ್ ಬಾಸ್’ ಮುಗಿದಮೇಲೆ ಗೊತ್ತಾಯ್ತು ವಿಚಾರ

‘ಸೀತಾ ರಾಮ’ ಹಾಗೂ ‘ಅಮೃತಧಾರೆ’ ಧಾರಾವಾಹಿಗಳ ಟಿಆರ್​ಪಿ ಕಡಿಮೆ ಆಗಿದೆ. ಈ ಧಾರಾವಾಹಿ ಮೊದಲಿನ ಚಾರ್ಮ್ ಉಳಿಸಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಈ ಧಾರಾವಾಹಿಗಳು ಹೆಚ್ಚಿನ ಟಿಆರ್​ಪಿ ಪಡೆಯಲಿವೆಯೇ ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ