AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Serials TRP: ಕಿಚ್ಚನ ಕೊನೆಯ ಪಂಚಾಯ್ತಿಗೆ ಸಿಕ್ಕ ಟಿಆರ್​ಪಿ ಎಷ್ಟು? ಇಲ್ಲಿದೆ ವಿವರ..

ಕಿಚ್ಚನ ಕೊನೆಯ ಪಂಚಾಯ್ತಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಶನಿವಾರದ ಎಪಿಸೋಡ್​ಗೆ 8.8 ರೇಟಿಂಗ್ ಹಾಗೂ ಭಾನುವಾರ ಎಪಿಸೋಡ್​ಗೆ 8.7 ರೇಟಿಂಗ್ ಸಿಕ್ಕಿದೆ ಎಂಬುದು ವಿಶೇಷ. ಫಿನಾಲೆ ವಾರಗಳಲ್ಲಿ ಬಿಗ್ ಬಾಸ್ 7.4  ರೇಟಿಂಗ್ ಪಡೆದಿದೆ. ಈ ಮೂಲಕ ಒಳ್ಳೆಯ ರೀತಿಯಲ್ಲಿ ಬಿಗ್ ಬಾಸ್ ಪೂರ್ಣಗೊಂಡಿದೆ.

Kannada Serials TRP: ಕಿಚ್ಚನ ಕೊನೆಯ ಪಂಚಾಯ್ತಿಗೆ ಸಿಕ್ಕ ಟಿಆರ್​ಪಿ ಎಷ್ಟು? ಇಲ್ಲಿದೆ ವಿವರ..
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Feb 01, 2024 | 12:29 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಇತ್ತೀಚೆಗೆ ಪೂರ್ಣಗೊಂಡಿದೆ. ಕಳೆದ ಸೀಸನ್​ಗಳಿಗೆ ಹೋಲಿಕೆ ಮಾಡಿದರೆ ಈ ಬಾರಿಯ ಸೀಸನ್ ಹೆಚ್ಚು ಟಿಆರ್​ಪಿ ಪಡೆದಿದೆ. ಈ ಸೀಸನ್​ನ ವೀಕೆಂಡ್ ಎಪಿಸೋಡ್​ಗಳು 9+ ಟಿಆರ್​ಪಿ ಪಡೆದ ಉದಾಹರಣೆ ಇದೆ. ಈಗ ಕೊನೆಯ ಪಂಚಾಯ್ತಿಯ ಟಿಆರ್​ಪಿ ಹೊರ ಬಿದ್ದಿದೆ. ಈ ವೇಳೆಯೂ ಭರ್ಜರಿ ಟಿಆರ್​ಪಿ ಪಡೆದೇ ಬಿಗ್ ಬಾಸ್ ಕೊನೆಗೊಂಡಿದೆ. ಇದು ಕಲರ್ಸ್ ಕನ್ನಡ ವಾಹಿನಿಯ ಖುಷಿ ಹೆಚ್ಚಿಸಿದೆ. ಕೊನೆಯ ವಾರವೂ ಉತ್ತಮ ರೇಟಿಂಗ್ ಪಡೆಯಲು ಬಿಗ್ ಬಾಸ್ ಯಶಸ್ವಿ ಆಗಿದೆ.

ಕಿಚ್ಚನ ಕೊನೆಯ ಪಂಚಾಯ್ತಿಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಶನಿವಾರದ ಎಪಿಸೋಡ್​ಗೆ 8.8 ರೇಟಿಂಗ್ ಹಾಗೂ ಭಾನುವಾರ ಎಪಿಸೋಡ್​ಗೆ 8.7 ರೇಟಿಂಗ್ ಸಿಕ್ಕಿದೆ. ಫಿನಾಲೆ ವಾರಗಳಲ್ಲಿ ಬಿಗ್ ಬಾಸ್ 7.4  ರೇಟಿಂಗ್ ಪಡೆದಿದೆ. ಈ ಮೂಲಕ ಒಳ್ಳೆಯ ರೀತಿಯಲ್ಲಿ ಬಿಗ್ ಬಾಸ್ ಕೊನೆಗೊಂಡಂತೆ ಆಗಿದೆ. ಫಿನಾಲೆ ವಾರದ ಟಿಆರ್​ಪಿ ಮುಂದಿನ ವಾರ ಹೊರ ಬೀಳಲಿದೆ.

ಧಾರಾವಾಹಿಗಳ ಟಿಆರ್​ಪಿ

ನಗರ ಭಾಗದ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ‘ಗಟ್ಟಿಮೇಳ’ ಈ ಮೊದಲು ಎರಡನೇ ಸ್ಥಾನ ಕಾಪಾಡಿಕೊಳ್ಳುತ್ತಾ ಬರುತ್ತಿತ್ತು. ಆ ಧಾರಾವಾಹಿ ಪೂರ್ಣಗೊಂಡಿದ್ದು, ‘ಲಕ್ಷ್ಮೀ ನಿವಾಸ’ ಪ್ರಾರಂಭ ಆಗಿದೆ. ಈ ಧಾರಾವಾಹಿಗೆ ಜನಮೆಚ್ಚುಗೆ ಸಿಕ್ಕಿದೆ. ಈ ಮೂಲಕ ಮೊದಲ ಸ್ಥಾನ ಸಿಕ್ಕಿದೆ. ‘ಪುಟ್ಟಕ್ಕನ ಮಕ್ಕಳು’ ಮೊದಲ ಸ್ಥಾನದಲ್ಲಿ ಮುಂದುವರಿಯುತ್ತಾ ಬರುತ್ತಿತ್ತು. ‘ಲಕ್ಷ್ಮೀ ನಿವಾಸ’ ಧಾರಾವಾಹಿ ‘ಗಟ್ಟಿಮೇಳ’ವನ್ನು ಹಿಂದಿಕ್ಕಿದೆ.

ಮೂರನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಇದೆ.  ಪ್ರಬುದ್ಧ ಪ್ರೇಮಕಥೆಯನ್ನು ಈ ಧಾರಾವಾಹಿ ಹೊಂದಿದೆ. ನಂತರದ ಸ್ಥಾನದಲ್ಲಿ ಅಂದರೆ ನಾಲ್ಕನೇ ಸ್ಥಾನದಲ್ಲಿ ‘ಸತ್ಯ’ ಧಾರಾವಾಹಿ ಇದೆ. ಐದನೇ ಸ್ಥಾನದಲ್ಲಿ ಕಲರ್ಸ್ ಕನ್ನಡದ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಇದೆ. ಸುದರ್ಶನ್, ಸುಷ್ಮಾ ರಾವ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ಬಾತ್​ರೂಂನಲ್ಲೂ ಇಡಲಾಗಿತ್ತು ಮೈಕ್ರೋಫೋನ್; ‘ಬಿಗ್ ಬಾಸ್’ ಮುಗಿದಮೇಲೆ ಗೊತ್ತಾಯ್ತು ವಿಚಾರ

‘ಸೀತಾ ರಾಮ’ ಹಾಗೂ ‘ಅಮೃತಧಾರೆ’ ಧಾರಾವಾಹಿಗಳ ಟಿಆರ್​ಪಿ ಕಡಿಮೆ ಆಗಿದೆ. ಈ ಧಾರಾವಾಹಿ ಮೊದಲಿನ ಚಾರ್ಮ್ ಉಳಿಸಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಈ ಧಾರಾವಾಹಿಗಳು ಹೆಚ್ಚಿನ ಟಿಆರ್​ಪಿ ಪಡೆಯಲಿವೆಯೇ ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್