AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಅಬ್ಬಬ್ಬಾ.. ಹೆಚ್ಚುತ್ತಲೇ ಇದೆ ‘ಕನ್ನಡ ಬಿಗ್ ಬಾಸ್’ ಟಿಆರ್​ಪಿ

ನಮ್ರತಾ ಗೌಡ ಅವರು ವಿನಯ್ ಚಮಚ ರೀತಿಯಲ್ಲಿ ವರ್ತಿಸಿದ್ದರು. ಈ ವಿಚಾರದಲ್ಲಿ ಸುದೀಪ್ ಅವರು ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದರು. ವೀಕೆಂಡ್​ನ ಎಪಿಸೋಡ್​ನ ಹೆಚ್ಚಿನ ವೀಕ್ಷಕರು ನೋಡಿದ್ದರು.

Bigg Boss Kannada: ಅಬ್ಬಬ್ಬಾ.. ಹೆಚ್ಚುತ್ತಲೇ ಇದೆ ‘ಕನ್ನಡ ಬಿಗ್ ಬಾಸ್’ ಟಿಆರ್​ಪಿ
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Nov 17, 2023 | 1:26 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ ಹೊಸ ರೀತಿಯಲ್ಲಿ ಮೂಡಿ ಬರುತ್ತಿದೆ. ಕಳೆದ ಸೀಸನ್​ಗಳಿಗೆ ಹೋಲಿಕೆ ಮಾಡಿದರೆ ಈ ಸೀಸನ್​ನಲ್ಲಿ ಟಿಆರ್​ಪಿ (TRP) ಹೆಚ್ಚುತ್ತಲೇ ಇದೆ. ಬಿಗ್ ಬಾಸ್ ಮನೆಯಲ್ಲಿ ಬಳೆಯ ವಿಚಾರ ಸಾಕಷ್ಟು ಸುದ್ದಿ ಆಗಿತ್ತು. ವೀಕೆಂಡ್​ನಲ್ಲಿ ಈ ವಿಚಾರದಲ್ಲಿ ಚರ್ಚೆ ಆಗಿತ್ತು. ಆ ವಾರದ ಟಿಆರ್​ಪಿ ಈಗ ಸಿಕ್ಕಿದೆ. ಭರ್ಜರಿ ಟಿಆರ್​ಪಿ ಪಡೆದು ಶೋ ಮುನ್ನುಗ್ಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಬಳೆ ದೌರ್ಬಲ್ಯದ ಸಂಕೇತ ಎಂಬ ಅರ್ಥದಲ್ಲಿ ವಿನಯ್ ಮಾತನಾಡಿದ್ದರು. ಆ ವಾರ ನಮ್ರತಾ ಗೌಡ ಅವರು ವಿನಯ್ ಚಮಚ ರೀತಿಯಲ್ಲಿ ವರ್ತಿಸಿದ್ದರು. ಈ ವಿಚಾರದಲ್ಲಿ ಸುದೀಪ್ ಅವರು ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದರು. ವೀಕೆಂಡ್​ನ ಎಪಿಸೋಡ್​ನ ಹೆಚ್ಚಿನ ವೀಕ್ಷಕರು ನೋಡಿದ್ದರು. ಈ ಸೀಸನ್​ ಹೆಚ್ಚು ಟಿಆರ್​ಪಿ ಶೋಗೆ ಸಿಕ್ಕಿದೆ. 8.5 ಟಿವಿಆರ್ ಸಿಕ್ಕಿದೆ. ಭಾನುವಾರದ ಎಪಿಸೋಡ್​ಗೆ 9.6 ಟಿಆರ್​ಪಿ ಸಿಕ್ಕಿದೆ. ವಾರ ದಿನಗಳಲ್ಲಿ 7.4 ಟಿಆರ್​ಪಿ ಸಿಕ್ಕಿದೆ. ಇಷ್ಟು ಟಿಆರ್​ಪಿಯನ್ನು ನಿರೀಕ್ಷಿಸಲಾಗಿತ್ತು  ಎಂದು ಅನೇಕರು ಹೇಳಿದ್ದಾರೆ.

ಧಾರಾವಾಹಿ ಟಿಆರ್​ಪಿ

ಎಂದಿನಂತೆ ‘ಪುಟ್ಟಕ್ಕನ  ಮಕ್ಕಳು’ ಧಾರಾವಾಹಿ ಮೊದಲ ಸ್ಥಾನದಲ್ಲಿದೆ. ಈ ಮೂಲಕ ಹಲವು ತಿಂಗಳಿಂದ ಈ ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಮುಂದೆ ಸಾಗಿದೆ. ‘ಗಟ್ಟಿಮೇಳ’ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಎರಡನೇ ಸ್ಥಾನ ಕಾಪಾಡಿಕೊಂಡು ಮುಂದೆ ಸಾಗುತ್ತಿದೆ. ಈ ಧಾರಾವಾಹಿ ಶೀಘ್ರವೇ ಪೂರ್ಣಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: SSE Side B Review: ‘ಸೈಡ್​ ಎ’ ಬಳಿಕ ಮನು, ಪ್ರಿಯಾ ಬದುಕು ಬದಲಾದರೂ ‘ಸೈಡ್​ ಬಿ’ ಲಯ ಬದಲಾಗಿಲ್ಲ

‘ಅಮೃತಧಾರೆ’ ಧಾರಾವಾಹಿ ಕೂಡ ಮೂರನೇ ಸ್ಥಾನದಲ್ಲಿ ಕಾಪಾಡಿಕೊಂಡಿದೆ. ನಾಲ್ಕನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಇದೆ. ಐದನೇ ಸ್ಥಾನದಲ್ಲಿ ‘ಸತ್ಯ’, ‘ಭಾಗ್ಯಲಕ್ಷ್ಮಿ’ ಧಾರಾವಾಹಿ ಇದೆ. ಆರನೇ ಸ್ಥಾನದಲ್ಲಿ ‘ಹಿಟ್ಲರ್ ಕಲ್ಯಾಣ’, ‘ಸೀತಾ ರಾಮ’, ‘ಕೆಂಡ ಸಂಪಿಗೆ’, ‘ರಾಮಾಚಾರಿ’ ಧಾರಾವಾಹಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:02 pm, Fri, 17 November 23

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ