AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚುತ್ತಲೇ ಇದೆ ಬಿಗ್ ಬಾಸ್ ಟಿಆರ್​ಪಿ; ಸಂಕಷ್ಟದಲ್ಲಿ ‘ಸೀತಾ ರಾಮ’ ಧಾರಾವಾಹಿ

Kannada Serials TRP: ನಗರ ಭಾಗದಲ್ಲಿ ವಾರದ ದಿನಗಳಲ್ಲಿ 7.6 ಹಾಗೂ ವಾರಾಂತ್ಯದಲ್ಲಿ 8.4 ರೇಟಿಂಗ್ ಪಡೆದಿದೆ. ಬಿಗ್ ಬಾಸ್​ನಲ್ಲಿ ಈ ಬಾರಿ ಜಗಳ ಜೋರಾಗಿದೆ. ಈ ಕಾರಣಕ್ಕೆ ವೀಕ್ಷಕರನ್ನು ಶೋ ಸೆಳೆಯುತ್ತಿದೆ.

ಹೆಚ್ಚುತ್ತಲೇ ಇದೆ ಬಿಗ್ ಬಾಸ್ ಟಿಆರ್​ಪಿ; ಸಂಕಷ್ಟದಲ್ಲಿ ‘ಸೀತಾ ರಾಮ’ ಧಾರಾವಾಹಿ
ಸುದೀಪ್​-ವೈಷ್ಣವಿ
ರಾಜೇಶ್ ದುಗ್ಗುಮನೆ
|

Updated on: Dec 14, 2023 | 1:04 PM

Share

ಈ ಬಾರಿ ಬಿಗ್ ಬಾಸ್ (Bigg Boss) ಎಲ್ಲರ ಗಮನ ಸೆಳೆಯುತ್ತಿದೆ. ಒಳ್ಳೆಯ ಟಿಆರ್​ಪಿ ಪಡೆದುಕೊಂಡು ಈ ಶೋ ಮುನ್ನುಗ್ಗುತ್ತಿದೆ. ವಾರ ಕಳೆದಂತೆ ಬಿಗ್ ಬಾಸ್ ನೋಡುವರ ಸಂಖ್ಯೆ ಹೆಚ್ಚುತ್ತಿದೆ. ಇತರ ವಾಹಿನಿಗಳಲ್ಲಿ ಆ ಸಂದರ್ಭದಲ್ಲಿ ಪ್ರಸಾರ ಆಗುವ ಧಾರಾವಾಹಿಗಳ ಟಿಆರ್​ಪಿ ಮೇಲೆ ಬಿಗ್ ಬಾಸ್ ಪ್ರಭಾವ ಬೀರಿದೆ. ಹಾಗಾದರೆ, ಬಿಗ್ ಬಾಸ್​​ಗೆ ಸಿಗುತ್ತಿರುವ ಟಿಆರ್​ಪಿ ಎಷ್ಟು? ಉಳಿದ ಧಾರಾವಾಹಿಗಳು ಪಡೆಯುತ್ತಿರುವ ಟಿಆರ್​ಪಿ ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್

ಬಿಗ್ ಬಾಸ್​​ ವಾರದ ದಿನ ಹಾಗೂ ವಾರಾಂತ್ಯದಲ್ಲಿ ಒಳ್ಳೆಯ ಟಿಆರ್​ಪಿಯನ್ನೇ ಪಡೆಯುತ್ತಿದೆ. ಈ ಶೋ ರಾತ್ರಿ 9:30ಕ್ಕೆ ಪ್ರಸಾರ ಆರಂಭಿಸುವುದರಿಂದ ಇದನ್ನು ನೋಡುಗರ ಸಂಖ್ಯೆ ಕಡಿಮೆ ಆಗಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಈ ಊಹೆ ತಪ್ಪಾಗಿತ್ತು. ನಗರ ಭಾಗದಲ್ಲಿ ವಾರದ ದಿನಗಳಲ್ಲಿ 7.6 ಹಾಗೂ ವಾರಾಂತ್ಯದಲ್ಲಿ 8.4 ರೇಟಿಂಗ್ ಪಡೆದಿದೆ. ಬಿಗ್ ಬಾಸ್​ನಲ್ಲಿ ಈ ಬಾರಿ ಜಗಳ ಜೋರಾಗಿದೆ. ಈ ಕಾರಣಕ್ಕೆ ವೀಕ್ಷಕರನ್ನು ಶೋ ಸೆಳೆಯುತ್ತಿದೆ. ಕಲರ್ಸ್ ಕನ್ನಡ ವಾಹಿನಿ ಹಾಗೂ ಜಿಯೋ ಸಿನಿಮಾ ಒಟಿಟಿಯಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ.

ಧಾರಾವಾಹಿಗಳ ಟಿಆರ್​ಪಿ.. (ನಗರ ಹಾಗೂ ಗ್ರಾಮೀಣ ಭಾಗ)

ಟಿಆರ್​ಪಿ ಲಿಸ್ಟ್​ನಲ್ಲಿ ಮೊದಲ ಸ್ಥಾನದಲ್ಲಿ ಎಂದಿನಂತೆ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಈ ಧಾರಾವಾಹಿ ವರ್ಷದಿಂದ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ. ಟಿಆರ್​ಪಿ ಕೊಂಚ ಕಡಿಮೆ ಆದರೂ, ಮೊದಲ ಸ್ಥಾನಕ್ಕೆ ಕುತ್ತು ಬಂದಿಲ್ಲ. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಮೂರನೇ ಸ್ಥಾನದಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಇದೆ.

ಇದನ್ನೂ ಓದಿ: ಶಾಲೆಯಾಗಿ ಬದಲಾದ ಬಿಗ್ ಬಾಸ್ ಮನೆ; ಇಲ್ಲಿದೆ ನೋಡಿ ಫನ್ ವಿಡಿಯೋ

ನಾಲ್ಕನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮಿ’, ಐದನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು ಧಾರಾವಾಹಿ ಇದೆ. ದಿನ ಕಳೆದಂತೆ ‘ಸೀತಾ ರಾಮ’ ಧಾರಾವಾಹಿಯ ಟಿಆರ್​ಪಿ ಕುಗ್ಗುತ್ತಿದೆ. ಆರಂಭದಲ್ಲಿ ಈ ಧಾರಾವಾಹಿ ಎಲ್ಲರಿಂದ ಮೆಚ್ಚುಗೆ ಪಡೆದಿತ್ತು. ಆದರೆ, ದಿನ ಕಳೆದಂತೆ ಧಾರಾವಾಹಿಗೆ ಬೇಡಿಕೆ ಕಡಿಮೆ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು