AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚುತ್ತಲೇ ಇದೆ ಬಿಗ್ ಬಾಸ್ ಟಿಆರ್​ಪಿ; ಸಂಕಷ್ಟದಲ್ಲಿ ‘ಸೀತಾ ರಾಮ’ ಧಾರಾವಾಹಿ

Kannada Serials TRP: ನಗರ ಭಾಗದಲ್ಲಿ ವಾರದ ದಿನಗಳಲ್ಲಿ 7.6 ಹಾಗೂ ವಾರಾಂತ್ಯದಲ್ಲಿ 8.4 ರೇಟಿಂಗ್ ಪಡೆದಿದೆ. ಬಿಗ್ ಬಾಸ್​ನಲ್ಲಿ ಈ ಬಾರಿ ಜಗಳ ಜೋರಾಗಿದೆ. ಈ ಕಾರಣಕ್ಕೆ ವೀಕ್ಷಕರನ್ನು ಶೋ ಸೆಳೆಯುತ್ತಿದೆ.

ಹೆಚ್ಚುತ್ತಲೇ ಇದೆ ಬಿಗ್ ಬಾಸ್ ಟಿಆರ್​ಪಿ; ಸಂಕಷ್ಟದಲ್ಲಿ ‘ಸೀತಾ ರಾಮ’ ಧಾರಾವಾಹಿ
ಸುದೀಪ್​-ವೈಷ್ಣವಿ
ರಾಜೇಶ್ ದುಗ್ಗುಮನೆ
|

Updated on: Dec 14, 2023 | 1:04 PM

Share

ಈ ಬಾರಿ ಬಿಗ್ ಬಾಸ್ (Bigg Boss) ಎಲ್ಲರ ಗಮನ ಸೆಳೆಯುತ್ತಿದೆ. ಒಳ್ಳೆಯ ಟಿಆರ್​ಪಿ ಪಡೆದುಕೊಂಡು ಈ ಶೋ ಮುನ್ನುಗ್ಗುತ್ತಿದೆ. ವಾರ ಕಳೆದಂತೆ ಬಿಗ್ ಬಾಸ್ ನೋಡುವರ ಸಂಖ್ಯೆ ಹೆಚ್ಚುತ್ತಿದೆ. ಇತರ ವಾಹಿನಿಗಳಲ್ಲಿ ಆ ಸಂದರ್ಭದಲ್ಲಿ ಪ್ರಸಾರ ಆಗುವ ಧಾರಾವಾಹಿಗಳ ಟಿಆರ್​ಪಿ ಮೇಲೆ ಬಿಗ್ ಬಾಸ್ ಪ್ರಭಾವ ಬೀರಿದೆ. ಹಾಗಾದರೆ, ಬಿಗ್ ಬಾಸ್​​ಗೆ ಸಿಗುತ್ತಿರುವ ಟಿಆರ್​ಪಿ ಎಷ್ಟು? ಉಳಿದ ಧಾರಾವಾಹಿಗಳು ಪಡೆಯುತ್ತಿರುವ ಟಿಆರ್​ಪಿ ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್

ಬಿಗ್ ಬಾಸ್​​ ವಾರದ ದಿನ ಹಾಗೂ ವಾರಾಂತ್ಯದಲ್ಲಿ ಒಳ್ಳೆಯ ಟಿಆರ್​ಪಿಯನ್ನೇ ಪಡೆಯುತ್ತಿದೆ. ಈ ಶೋ ರಾತ್ರಿ 9:30ಕ್ಕೆ ಪ್ರಸಾರ ಆರಂಭಿಸುವುದರಿಂದ ಇದನ್ನು ನೋಡುಗರ ಸಂಖ್ಯೆ ಕಡಿಮೆ ಆಗಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಈ ಊಹೆ ತಪ್ಪಾಗಿತ್ತು. ನಗರ ಭಾಗದಲ್ಲಿ ವಾರದ ದಿನಗಳಲ್ಲಿ 7.6 ಹಾಗೂ ವಾರಾಂತ್ಯದಲ್ಲಿ 8.4 ರೇಟಿಂಗ್ ಪಡೆದಿದೆ. ಬಿಗ್ ಬಾಸ್​ನಲ್ಲಿ ಈ ಬಾರಿ ಜಗಳ ಜೋರಾಗಿದೆ. ಈ ಕಾರಣಕ್ಕೆ ವೀಕ್ಷಕರನ್ನು ಶೋ ಸೆಳೆಯುತ್ತಿದೆ. ಕಲರ್ಸ್ ಕನ್ನಡ ವಾಹಿನಿ ಹಾಗೂ ಜಿಯೋ ಸಿನಿಮಾ ಒಟಿಟಿಯಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ.

ಧಾರಾವಾಹಿಗಳ ಟಿಆರ್​ಪಿ.. (ನಗರ ಹಾಗೂ ಗ್ರಾಮೀಣ ಭಾಗ)

ಟಿಆರ್​ಪಿ ಲಿಸ್ಟ್​ನಲ್ಲಿ ಮೊದಲ ಸ್ಥಾನದಲ್ಲಿ ಎಂದಿನಂತೆ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಈ ಧಾರಾವಾಹಿ ವರ್ಷದಿಂದ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ. ಟಿಆರ್​ಪಿ ಕೊಂಚ ಕಡಿಮೆ ಆದರೂ, ಮೊದಲ ಸ್ಥಾನಕ್ಕೆ ಕುತ್ತು ಬಂದಿಲ್ಲ. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಮೂರನೇ ಸ್ಥಾನದಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಇದೆ.

ಇದನ್ನೂ ಓದಿ: ಶಾಲೆಯಾಗಿ ಬದಲಾದ ಬಿಗ್ ಬಾಸ್ ಮನೆ; ಇಲ್ಲಿದೆ ನೋಡಿ ಫನ್ ವಿಡಿಯೋ

ನಾಲ್ಕನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮಿ’, ಐದನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು ಧಾರಾವಾಹಿ ಇದೆ. ದಿನ ಕಳೆದಂತೆ ‘ಸೀತಾ ರಾಮ’ ಧಾರಾವಾಹಿಯ ಟಿಆರ್​ಪಿ ಕುಗ್ಗುತ್ತಿದೆ. ಆರಂಭದಲ್ಲಿ ಈ ಧಾರಾವಾಹಿ ಎಲ್ಲರಿಂದ ಮೆಚ್ಚುಗೆ ಪಡೆದಿತ್ತು. ಆದರೆ, ದಿನ ಕಳೆದಂತೆ ಧಾರಾವಾಹಿಗೆ ಬೇಡಿಕೆ ಕಡಿಮೆ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ