AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚುತ್ತಲೇ ಇದೆ ಬಿಗ್ ಬಾಸ್ ಟಿಆರ್​ಪಿ; ಸಂಕಷ್ಟದಲ್ಲಿ ‘ಸೀತಾ ರಾಮ’ ಧಾರಾವಾಹಿ

Kannada Serials TRP: ನಗರ ಭಾಗದಲ್ಲಿ ವಾರದ ದಿನಗಳಲ್ಲಿ 7.6 ಹಾಗೂ ವಾರಾಂತ್ಯದಲ್ಲಿ 8.4 ರೇಟಿಂಗ್ ಪಡೆದಿದೆ. ಬಿಗ್ ಬಾಸ್​ನಲ್ಲಿ ಈ ಬಾರಿ ಜಗಳ ಜೋರಾಗಿದೆ. ಈ ಕಾರಣಕ್ಕೆ ವೀಕ್ಷಕರನ್ನು ಶೋ ಸೆಳೆಯುತ್ತಿದೆ.

ಹೆಚ್ಚುತ್ತಲೇ ಇದೆ ಬಿಗ್ ಬಾಸ್ ಟಿಆರ್​ಪಿ; ಸಂಕಷ್ಟದಲ್ಲಿ ‘ಸೀತಾ ರಾಮ’ ಧಾರಾವಾಹಿ
ಸುದೀಪ್​-ವೈಷ್ಣವಿ
ರಾಜೇಶ್ ದುಗ್ಗುಮನೆ
|

Updated on: Dec 14, 2023 | 1:04 PM

Share

ಈ ಬಾರಿ ಬಿಗ್ ಬಾಸ್ (Bigg Boss) ಎಲ್ಲರ ಗಮನ ಸೆಳೆಯುತ್ತಿದೆ. ಒಳ್ಳೆಯ ಟಿಆರ್​ಪಿ ಪಡೆದುಕೊಂಡು ಈ ಶೋ ಮುನ್ನುಗ್ಗುತ್ತಿದೆ. ವಾರ ಕಳೆದಂತೆ ಬಿಗ್ ಬಾಸ್ ನೋಡುವರ ಸಂಖ್ಯೆ ಹೆಚ್ಚುತ್ತಿದೆ. ಇತರ ವಾಹಿನಿಗಳಲ್ಲಿ ಆ ಸಂದರ್ಭದಲ್ಲಿ ಪ್ರಸಾರ ಆಗುವ ಧಾರಾವಾಹಿಗಳ ಟಿಆರ್​ಪಿ ಮೇಲೆ ಬಿಗ್ ಬಾಸ್ ಪ್ರಭಾವ ಬೀರಿದೆ. ಹಾಗಾದರೆ, ಬಿಗ್ ಬಾಸ್​​ಗೆ ಸಿಗುತ್ತಿರುವ ಟಿಆರ್​ಪಿ ಎಷ್ಟು? ಉಳಿದ ಧಾರಾವಾಹಿಗಳು ಪಡೆಯುತ್ತಿರುವ ಟಿಆರ್​ಪಿ ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್

ಬಿಗ್ ಬಾಸ್​​ ವಾರದ ದಿನ ಹಾಗೂ ವಾರಾಂತ್ಯದಲ್ಲಿ ಒಳ್ಳೆಯ ಟಿಆರ್​ಪಿಯನ್ನೇ ಪಡೆಯುತ್ತಿದೆ. ಈ ಶೋ ರಾತ್ರಿ 9:30ಕ್ಕೆ ಪ್ರಸಾರ ಆರಂಭಿಸುವುದರಿಂದ ಇದನ್ನು ನೋಡುಗರ ಸಂಖ್ಯೆ ಕಡಿಮೆ ಆಗಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಈ ಊಹೆ ತಪ್ಪಾಗಿತ್ತು. ನಗರ ಭಾಗದಲ್ಲಿ ವಾರದ ದಿನಗಳಲ್ಲಿ 7.6 ಹಾಗೂ ವಾರಾಂತ್ಯದಲ್ಲಿ 8.4 ರೇಟಿಂಗ್ ಪಡೆದಿದೆ. ಬಿಗ್ ಬಾಸ್​ನಲ್ಲಿ ಈ ಬಾರಿ ಜಗಳ ಜೋರಾಗಿದೆ. ಈ ಕಾರಣಕ್ಕೆ ವೀಕ್ಷಕರನ್ನು ಶೋ ಸೆಳೆಯುತ್ತಿದೆ. ಕಲರ್ಸ್ ಕನ್ನಡ ವಾಹಿನಿ ಹಾಗೂ ಜಿಯೋ ಸಿನಿಮಾ ಒಟಿಟಿಯಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ.

ಧಾರಾವಾಹಿಗಳ ಟಿಆರ್​ಪಿ.. (ನಗರ ಹಾಗೂ ಗ್ರಾಮೀಣ ಭಾಗ)

ಟಿಆರ್​ಪಿ ಲಿಸ್ಟ್​ನಲ್ಲಿ ಮೊದಲ ಸ್ಥಾನದಲ್ಲಿ ಎಂದಿನಂತೆ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಈ ಧಾರಾವಾಹಿ ವರ್ಷದಿಂದ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ. ಟಿಆರ್​ಪಿ ಕೊಂಚ ಕಡಿಮೆ ಆದರೂ, ಮೊದಲ ಸ್ಥಾನಕ್ಕೆ ಕುತ್ತು ಬಂದಿಲ್ಲ. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಮೂರನೇ ಸ್ಥಾನದಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಇದೆ.

ಇದನ್ನೂ ಓದಿ: ಶಾಲೆಯಾಗಿ ಬದಲಾದ ಬಿಗ್ ಬಾಸ್ ಮನೆ; ಇಲ್ಲಿದೆ ನೋಡಿ ಫನ್ ವಿಡಿಯೋ

ನಾಲ್ಕನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮಿ’, ಐದನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು ಧಾರಾವಾಹಿ ಇದೆ. ದಿನ ಕಳೆದಂತೆ ‘ಸೀತಾ ರಾಮ’ ಧಾರಾವಾಹಿಯ ಟಿಆರ್​ಪಿ ಕುಗ್ಗುತ್ತಿದೆ. ಆರಂಭದಲ್ಲಿ ಈ ಧಾರಾವಾಹಿ ಎಲ್ಲರಿಂದ ಮೆಚ್ಚುಗೆ ಪಡೆದಿತ್ತು. ಆದರೆ, ದಿನ ಕಳೆದಂತೆ ಧಾರಾವಾಹಿಗೆ ಬೇಡಿಕೆ ಕಡಿಮೆ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್