AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​​​ನಿಂದ ‘ಸೀತಾ ರಾಮ’ ಧಾರಾವಾಹಿ ಮೇಲೆ ನೇರ ಪರಿಣಾಮ; ಇಲ್ಲಿದೆ ಟಿಆರ್​ಪಿ ವಿವರ

ಬಿಗ್ ಬಾಸ್​ನಲ್ಲಿ ಸಾಕಷ್ಟು ಡ್ರಾಮಾಗಳು ನಡೆಯುತ್ತಿವೆ. ಹಲವು ಸ್ಪರ್ಧಿಗಳು ಅಗ್ರೆಸ್ಸಿವ್ ಆಗಿ ನಡೆದುಕೊಳ್ಳುತ್ತಿದ್ದಾರೆ. ಪ್ರೀತಿ-ಪ್ರೇಮದ ವಿಚಾರವೂ ಆಗಾಗ ನುಸುಳುತ್ತಿದೆ. ಈ ಎಲ್ಲಾ ಕಾರಣಕ್ಕೆ ಬಿಗ್ ಬಾಸ್ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ.

ಬಿಗ್ ಬಾಸ್​​​ನಿಂದ ‘ಸೀತಾ ರಾಮ’ ಧಾರಾವಾಹಿ ಮೇಲೆ ನೇರ ಪರಿಣಾಮ; ಇಲ್ಲಿದೆ ಟಿಆರ್​ಪಿ ವಿವರ
ವೈಷ್ಣವಿ-ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on: Nov 23, 2023 | 2:09 PM

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಆರಂಭ ಆದಾಗಿನಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಹಲವು ಕಾಂಟ್ರವರ್ಸಿಗಳು ಈ ಸೀಸನ್​ನಲ್ಲಿ ಹುಟ್ಟಿಕೊಂಡಿವೆ. ನಿತ್ಯ ರಾತ್ರಿ 9:30ಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಇದು ಇತರ ವಾಹಿನಿಗಳ ಧಾರಾವಾಹಿಗಳ ಮೇಲೆ ನೇರ ಎಫೆಕ್ಟ್ ಬೀಳುತ್ತಿದೆ. ಬಿಗ್ ಬಾಸ್ ಪೂರ್ಣಗೊಳ್ಳುವವರೆಗೆ ಇದೇ ರೀತಿಯ ಪರಿಸ್ಥಿತಿ ಮುಂದುವರಿಯಲಿದೆ ಎಂಬುದು ಅನೇಕರ ಅಭಿಪ್ರಾಯ.

ಬಿಗ್ ಬಾಸ್​ನಲ್ಲಿ ಸಾಕಷ್ಟು ಡ್ರಾಮಾಗಳು ನಡೆಯುತ್ತಿವೆ. ಹಲವು ಸ್ಪರ್ಧಿಗಳು ಅಗ್ರೆಸ್ಸಿವ್ ಆಗಿ ನಡೆದುಕೊಳ್ಳುತ್ತಿದ್ದಾರೆ. ಪ್ರೀತಿ-ಪ್ರೇಮದ ವಿಚಾರವೂ ಆಗಾಗ ನುಸುಳುತ್ತಿದೆ. ಈ ಎಲ್ಲಾ ಕಾರಣಕ್ಕೆ ಬಿಗ್ ಬಾಸ್ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಬಿಗ್ ಬಾಸ್​ಗೆ ನಗರ ಭಾಗದಲ್ಲಿ ವಾರಾಂತ್ಯದಲ್ಲಿ 7.9 ಟಿವಿಆರ್ ಹಾಗೂ ವಾರದ ದಿನಗಳಲ್ಲಿ 7.2 ಟಿವಿಆರ್ ಸಿಕ್ಕಿದೆ.

ಬಿಗ್ ಬಾಸ್ ಎಫೆಕ್ಟ್​ ‘ಸೀತಾ ರಾಮ’ ಧಾರಾವಾಹಿ ಮೇಲೆ ಆಗುತ್ತಿದೆ. ಈ ಮೊದಲು ‘ಸೀತಾ ರಾಮ’ ಉತ್ತಮ ಟಿಆರ್​ಪಿ ಪಡೆಯುತ್ತಿತ್ತು. ಆದರೆ, ಬಿಗ್ ಬಾಸ್ ಪ್ರಸಾರ ಕಾಣಲು ಆರಂಭಿಸಿದ ಬಳಿಕ ‘ಸೀತಾ ರಾಮ’ ಧಾರಾವಾಹಿಯ ಟಿಆರ್​ಪಿಯಲ್ಲಿ ಇಳಿಕೆ ಆಗಿದೆ. ಬಿಗ್ ಬಾಸ್ ಹಾಗೂ ಸೀತಾ ರಾಮ ಧಾರಾವಾಹಿಯ ಪ್ರಸಾರದ ಸಮಯ ಒಂದೇ ಆಗಿದೆ. ಹೀಗಾಗಿ, ಎಫೆಕ್ಟ್ ಉಂಟಾಗಿದೆ. ಇನ್ನು, ‘ಭೂಮಿಗೆ ಬಂದ ಭಗವಂತ’ ಧಾರಾವಾಹಿಗೂ ಕೊಂಚ ಹಿನ್ನಡೆ ಆಗುತ್ತಿದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿಲ್ಲ ಸ್ವಚ್ಛತೆ; ಅಡುಗೆಗೆ ಸಂಬಂಧಿಸಿದ ಎಲ್ಲಾ ವಸ್ತುಗಳು ಮಾಯ

ಧಾರಾವಾಹಿ ಟಿಆರ್​ಪಿ ವಿವರ..

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡಿದೆ. ‘ಅಮೃತಧಾರೆ’ ಧಾರಾವಾಹಿಗೆ ಎರಡನೇ ಸ್ಥಾನ ಸಿಕ್ಕಿದೆ. ಮೂರನೇ ಸ್ಥಾನದಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಇದೆ. ನಾಲ್ಕನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು’ ಇದೆ. ಐದನೇ ಸ್ಥಾನದಲ್ಲಿ ‘ಸತ್ಯ’ ಧಾರಾವಾಹಿ ಇದೆ. ‘ಸೀತಾ ರಾಮ’ ಧಾರಾವಾಹಿಯ ಟಿಆರ್​ಪಿ ತಗ್ಗುತ್ತಲೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​