AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ಚೈತ್ರಾಗೆ ಕ್ಲಾಸ್ ತೆಗೆದುಕೊಂಡ ವಾರ ಕಿತ್ಗೊಂಡು ಬಂತು ಟಿಆರ್​ಪಿ; ಕುಗ್ಗಲಿಲ್ಲ ‘ಪುಟ್ಟಕ್ಕ’

ಚೈತ್ರಾ ಅವರು ಅನಾರೋಗ್ಯದ ಕಾರಣ ಹೊರಕ್ಕೆ ಹೋಗಿದ್ದರು. ಆಸ್ಪತ್ರೆಯಿಂದ ಅವರು ಕೆಲ ವಿಚಾರ ತಿಳಿದುಕೊಂಡು ಬಂದು ಹೇಳಿದ್ದರು. ಇದು ಸುದೀಪ್ ಅವರಿಗೆ ಕೋಪವನ್ನು ತರಿಸಿತ್ತು. ಆ ವಾರ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದರು. ಈಗ ಆ ವಾರದ ಟಿಆರ್​ಪಿ ಹೊರ ಬಿದ್ದಿದೆ.

ಬಿಗ್ ಬಾಸ್​ನಲ್ಲಿ ಚೈತ್ರಾಗೆ ಕ್ಲಾಸ್ ತೆಗೆದುಕೊಂಡ ವಾರ ಕಿತ್ಗೊಂಡು ಬಂತು ಟಿಆರ್​ಪಿ; ಕುಗ್ಗಲಿಲ್ಲ ‘ಪುಟ್ಟಕ್ಕ’
ಬಿಗ್ ಬಾಸ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 30, 2024 | 11:33 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಕೆಲ ವಾರಗಳ ಹಿಂದೆ ಚೈತ್ರಾ ಕುಂದಾಪುರ ಅವರಿಗೆ ಸುದೀಪ್ ಅವರು ಕ್ಲಾಸ್ ತೆಗೆದುಕೊಂಡಿದ್ದು ಎಲ್ಲರಿಗೂ ನೆನಪು ಇರಬಹುದು. ಹೊರಗಿನ ವಿಚಾರಗಳನ್ನು ಅವರು ಎಲ್ಲರಿಗೂ ಹೇಳುವ ಮೂಲಕ ಸಾಕಷ್ಟು ಸದ್ದು ಮಾಡಿದ್ದರು. ಇದಕ್ಕೆ ಕಿಚ್ಚ ಸುದೀಪ್ ಅವರು ಕ್ಲಾಸ್ ಕೂಡ ತೆಗೆದುಕೊಂಡಿದ್ದರು. ಮಾತು ಮಾತಿಗೆ ಚೈತ್ರಾಗೆ ಬೈದಿದ್ದರು. ಈ ವಿಚಾರ ಸಖತ್ ಚರ್ಚೆಗೆ ಗ್ರಾಸ ಆಗಿತ್ತು. ಆ ವಾರ ಸಾಕಷ್ಟು ಟಿಆರ್​ಪಿ ಬರಲಿದೆ ಎಂದು ಊಹಿಸಲಾಗಿತ್ತು. ಹಾಗೆಯೇ ಆಗಿದೆ.

ಚೈತ್ರಾ ಅವರು ಅನಾರೋಗ್ಯದ ಕಾರಣ ಹೊರಕ್ಕೆ ಹೋಗಿದ್ದರು. ಆಸ್ಪತ್ರೆಯಿಂದ ಅವರು ಕೆಲ ವಿಚಾರ ತಿಳಿದುಕೊಂಡು ಬಂದರು ಎನ್ನಲಾಗಿದೆ. ಅವರು ಹೊರಗಿನ ವಿಚಾರಗಳನ್ನು ಎಲ್ಲರಿಗೂ ಹೇಳುವ ಕೆಲಸ ಮಾಡಿದ್ದರು. ಕಥೆಯ ಮೂಲಕ ಎಲ್ಲರಿಗೂ ಹೊರಗಿನ ವಿಚಾರ, ಹೊರಗಿನ ಅಭಿಪ್ರಾಯ ಹೇಳಿದ್ದರು. ಇದು ಸುದೀಪ್ ಅವರಿಗೆ ಕೋಪವನ್ನು ತರಿಸಿತ್ತು. ಈ ಕೋಪ ಕಡಿಮೆ ಆಗಿರಲೇ ಇಲ್ಲ. ಚೈತ್ರಾ ಅವರು ದೊಡ್ಮನೆಯಿಂದ ಹೊರ ಹೋಗುವ ನಿರ್ಧಾರಕ್ಕೂ ಬಂದಿದ್ದರು. ಈಗ ಆ ವಾರದ ಟಿಆರ್​ಪಿ ಹೊರ ಬಿದ್ದಿದೆ.

ವಾರದ ದಿನಗಳಲ್ಲಿ 8 (ನಗರ ಭಾಗ), ಶನಿವಾರ 9.5 (ನಗರ ಭಾಗ) ಹಾಗೂ ಭಾನುವಾರ 10.0 (ನಗರ ಭಾಗ) ಸಿಕ್ಕಿದೆ. ಇದು ಸುದೀಪ್ ಅವರ ನಿರೂಪಣೆಗೆ ಇರುವ ಗತ್ತು ಏನು ಎಂಬುದು ಸಾಬೀತಾಗಿದೆ. ಬಿಗ್ ಬಾಸ್ ಕೊನೆ ಹಂತಕ್ಕೆ ಹೋದಂತೆಲ್ಲ ಟಿಆರ್​ಪಿ ಹೆಚ್ಚುತ್ತಲೇ ಹೋಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಬಿಗ್ ಬಾಸ್ ವೇದಿಕೆ ಮೇಲೆ ಪ್ರಿಯಾ ಸುದೀಪ್; ಪ್ಲೇ ಆಗಿತ್ತು ಕಿಚ್ಚನ ವಿಟಿ

ಧಾರಾವಾಹಿಗಳ ಟಿಆರ್​ಪಿ ಬಗ್ಗೆ ಹೇಳಬೇಕು ಎಂದರೆ ಮೊದಲ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ ಧಾರಾವಾಹಿ ಇದೆ. ಎರಡನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಧಾರಾವಾಹಿಯ ಸಮಯ ಬದಲಾವಣೆ ಹಾಗೂ ಪ್ರಮುಖ ಪಾತ್ರಧಾರಿ ಸ್ನೇಹಾ ಪಾತ್ರ ಕೊನೆ ಆದ ಹೊರತಾಗಿಯೂ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದು ಸಾಗುತ್ತಿದೆ. ಮೂರನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ಗೌತಮ್ ದೀವಾನ್ ತಾಯಿಯ ಹುಡುಕಾಟದಲ್ಲಿ ಇದ್ದಾನೆ. ನಾಲ್ಕನೇ ಸ್ಥಾನದಲ್ಲಿ ಕಲರ್ಸ್ ಕನ್ನಡದ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಇದೆ. ಐದನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:28 pm, Thu, 28 November 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ