AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್, ಧಾರಾವಾಹಿಗಳ ಟಿಆರ್​ಪಿ ಔಟ್; ಸುದೀಪ್ ಇಲ್ಲದ ವಾರದ ರೇಟಿಂಗ್ ಹೇಗಿತ್ತು?

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆರನೇ ವಾರದ ಟಿಆರ್​ಪಿ ಬಿಡುಗಡೆಯಾಗಿದೆ. ಸುದೀಪ್ ಅವರ ಅನುಪಸ್ಥಿತಿಯಲ್ಲಿ ಟಿಆರ್​ಪಿ ಸ್ವಲ್ಪ ಕುಸಿದಿದೆ. ವಾರದ ದಿನಗಳಲ್ಲೂ ಟಿಆರ್​ಪಿ ಕಡಿಮೆಯಾಗಿದೆ. ಪುಟ್ಟಕ್ಕನ ಮಕ್ಕಳು ಧಾರಾವಾಹಿ ಟಿಆರ್​ಪಿ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

ಬಿಗ್ ಬಾಸ್, ಧಾರಾವಾಹಿಗಳ ಟಿಆರ್​ಪಿ ಔಟ್; ಸುದೀಪ್ ಇಲ್ಲದ ವಾರದ ರೇಟಿಂಗ್ ಹೇಗಿತ್ತು?
ಬಿಗ್ ಬಾಸ್, ಧಾರಾವಾಹಿಗಳ ಟಿಆರ್​ಪಿ ಔಟ್; ಸುದೀಪ್ ಇಲ್ಲದ ವಾರದ ರೇಟಿಂಗ್ ಹೇಗಿತ್ತು?
ರಾಜೇಶ್ ದುಗ್ಗುಮನೆ
|

Updated on: Nov 07, 2024 | 2:49 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ಈಗಾಗಲೇ ಆರು ವಾರಗಳನ್ನು ಪೂರ್ಣಗೊಳಿಸುವ ಹಂತಕ್ಕೆ ಬಂದಿದೆ. ಪ್ರತಿ ವಾರವೂ ಬಿಗ್ ಬಾಸ್ ಉತ್ತಮ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಕಲರ್ಸ್ ಕನ್ನಡ ವಾಹಿನಿಗೆ ಈ ಶೋನಿಂದ ಸಾಕಷ್ಟು ಲಾಭ ಆಗುತ್ತಿದೆ. ಹಾಗಾದರೆ, ಸುದೀಪ್ ಇಲ್ಲದ ವಾರದಲ್ಲಿ ಬಿಗ್ ಬಾಸ್​ಗೆ ಎಷ್ಟು ಟಿಆರ್​ಪಿ ಸಿಕ್ಕಿದೆ? ವಾರದ ದಿನಗಳಲ್ಲಿ ಸಿಕ್ಕ ರೇಟಿಂಗ್ ಎಷ್ಟು? ಧಾರಾವಾಹಿಗಳು ಪಡೆದ ಟಿಆರ್​ಪಿ ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಸುದೀಪ್ ಇದ್ದರೆ ಒಳ್ಳೆಯ ಟಿಆರ್​ಪಿ ಬರುತ್ತದೆ. ಅವರು ಶೋ ನಡೆಸಿಕೊಡೋ ವಿಧಾನವೇ ಇದಕ್ಕೆ ಕಾರಣ. ತಾಯಿ ಕಳೆದುಕೊಂಡ ಕಾರಣಕ್ಕೆ ಸುದೀಪ್ ಅವರು ಶನಿವಾರ ಹಾಗೂ ಭಾನುವಾರ ಬಂದಿರಲಿಲ್ಲ. ಆ ವಾರದ ಟಿಆರ್​ಪಿ ಹೊರಬಿದ್ದಿದೆ. ನಗರ ಭಾಗದಲ್ಲಿ ಈ ಶೋಗೆ 7.3 ಹಾಗೂ ಗ್ರಾಮೀಣ ಮತ್ತು ನಗರ ಭಾಗ ಸೇರಿ 7 ಟಿವಿಆರ್ ಸಿಕ್ಕಿದೆ. ಸುದೀಪ್ ಇದ್ದಾಗ ಟಿಆರ್​ಪಿ 10+ ಟಿವಿಆರ್ ಸಿಗುತ್ತಿತ್ತು.

ವಾರದ ದಿನಗಳಲ್ಲಿ ‘ಬಿಗ್ ಬಾಸ್’ ಟಿಆರ್​ಪಿ ನಿಧಾನವಾಗಿ ಕುಗ್ಗುತ್ತಿದೆ. ಮುಂದಿನ ದಿನಗಳಲ್ಲಿ ಈ ಟಿಆರ್​ಪಿ ಹೆಚ್ಚಬಹುದು ಎನ್ನುವ ನಿರೀಕ್ಷೆಯಲ್ಲಿ ವಾಹಿನಿ ಇದೆ. ‘ಜಗದೀಶ್ ಹೋಗಿದ್ದಕ್ಕೆ ಬಿಗ್ ಬಾಸ್ ಟಿಆರ್​ಪಿ ಕುಗ್ಗುತ್ತಿದೆ’ ಎಂದು ಕೆಲವರು ಹೇಳಿದ್ದು ಇದೆ. ಆದರೆ, ಅಂಥ ದೊಡ್ಡ ವ್ಯತ್ಯಾಸ ಏನೂ ಆಗಿಲ್ಲ. 43ನೇ ವಾರದ ಪಟ್ಟಿಯಲ್ಲಿ (ವಾರದ ದಿನಗಳಲ್ಲಿ) 7 ಟಿವಿಆರ್​ ಸಿಗುತ್ತಿತ್ತು, ಈಗ ಅದು 6.4ಗೆ ಕುಸಿದಿದೆ.

ಇದನ್ನೂ ಓದಿ: ಬಿಗ್ ಬಾಸ್ ಹಾಗೂ ಧಾರಾವಾಹಿಗಳ​ ಟಿಆರ್​ಪಿ ಔಟ್; ಇಲ್ಲಿದೆ ಸಂಪೂರ್ಣ ವಿವರ

ಧಾರಾವಾಹಿ ಸಾಲಿನಲ್ಲಿ (ನಗರ ಹಾಗೂ ಗ್ರಾಮೀಣ ಒಟ್ಟಾಗಿ ಸೇರಿ) ‘ಪುಟ್ಟಕ್ಕನ ಮಕ್ಕಳು’ ಮೊದಲ ಸ್ಥಾನದಲ್ಲಿ ಇದೆ. ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಮೂರನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ನಾಲ್ಕನೇ ಸ್ಥಾನದಲ್ಲಿ ‘ಅಣ್ಣಯ್ಯ’ ಹಾಗೂ ಐದನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ