AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್, ಧಾರಾವಾಹಿಗಳ ಟಿಆರ್​ಪಿ ಔಟ್; ಸುದೀಪ್ ಇಲ್ಲದ ವಾರದ ರೇಟಿಂಗ್ ಹೇಗಿತ್ತು?

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆರನೇ ವಾರದ ಟಿಆರ್​ಪಿ ಬಿಡುಗಡೆಯಾಗಿದೆ. ಸುದೀಪ್ ಅವರ ಅನುಪಸ್ಥಿತಿಯಲ್ಲಿ ಟಿಆರ್​ಪಿ ಸ್ವಲ್ಪ ಕುಸಿದಿದೆ. ವಾರದ ದಿನಗಳಲ್ಲೂ ಟಿಆರ್​ಪಿ ಕಡಿಮೆಯಾಗಿದೆ. ಪುಟ್ಟಕ್ಕನ ಮಕ್ಕಳು ಧಾರಾವಾಹಿ ಟಿಆರ್​ಪಿ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

ಬಿಗ್ ಬಾಸ್, ಧಾರಾವಾಹಿಗಳ ಟಿಆರ್​ಪಿ ಔಟ್; ಸುದೀಪ್ ಇಲ್ಲದ ವಾರದ ರೇಟಿಂಗ್ ಹೇಗಿತ್ತು?
ಬಿಗ್ ಬಾಸ್, ಧಾರಾವಾಹಿಗಳ ಟಿಆರ್​ಪಿ ಔಟ್; ಸುದೀಪ್ ಇಲ್ಲದ ವಾರದ ರೇಟಿಂಗ್ ಹೇಗಿತ್ತು?
ರಾಜೇಶ್ ದುಗ್ಗುಮನೆ
|

Updated on: Nov 07, 2024 | 2:49 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ಈಗಾಗಲೇ ಆರು ವಾರಗಳನ್ನು ಪೂರ್ಣಗೊಳಿಸುವ ಹಂತಕ್ಕೆ ಬಂದಿದೆ. ಪ್ರತಿ ವಾರವೂ ಬಿಗ್ ಬಾಸ್ ಉತ್ತಮ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಕಲರ್ಸ್ ಕನ್ನಡ ವಾಹಿನಿಗೆ ಈ ಶೋನಿಂದ ಸಾಕಷ್ಟು ಲಾಭ ಆಗುತ್ತಿದೆ. ಹಾಗಾದರೆ, ಸುದೀಪ್ ಇಲ್ಲದ ವಾರದಲ್ಲಿ ಬಿಗ್ ಬಾಸ್​ಗೆ ಎಷ್ಟು ಟಿಆರ್​ಪಿ ಸಿಕ್ಕಿದೆ? ವಾರದ ದಿನಗಳಲ್ಲಿ ಸಿಕ್ಕ ರೇಟಿಂಗ್ ಎಷ್ಟು? ಧಾರಾವಾಹಿಗಳು ಪಡೆದ ಟಿಆರ್​ಪಿ ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಸುದೀಪ್ ಇದ್ದರೆ ಒಳ್ಳೆಯ ಟಿಆರ್​ಪಿ ಬರುತ್ತದೆ. ಅವರು ಶೋ ನಡೆಸಿಕೊಡೋ ವಿಧಾನವೇ ಇದಕ್ಕೆ ಕಾರಣ. ತಾಯಿ ಕಳೆದುಕೊಂಡ ಕಾರಣಕ್ಕೆ ಸುದೀಪ್ ಅವರು ಶನಿವಾರ ಹಾಗೂ ಭಾನುವಾರ ಬಂದಿರಲಿಲ್ಲ. ಆ ವಾರದ ಟಿಆರ್​ಪಿ ಹೊರಬಿದ್ದಿದೆ. ನಗರ ಭಾಗದಲ್ಲಿ ಈ ಶೋಗೆ 7.3 ಹಾಗೂ ಗ್ರಾಮೀಣ ಮತ್ತು ನಗರ ಭಾಗ ಸೇರಿ 7 ಟಿವಿಆರ್ ಸಿಕ್ಕಿದೆ. ಸುದೀಪ್ ಇದ್ದಾಗ ಟಿಆರ್​ಪಿ 10+ ಟಿವಿಆರ್ ಸಿಗುತ್ತಿತ್ತು.

ವಾರದ ದಿನಗಳಲ್ಲಿ ‘ಬಿಗ್ ಬಾಸ್’ ಟಿಆರ್​ಪಿ ನಿಧಾನವಾಗಿ ಕುಗ್ಗುತ್ತಿದೆ. ಮುಂದಿನ ದಿನಗಳಲ್ಲಿ ಈ ಟಿಆರ್​ಪಿ ಹೆಚ್ಚಬಹುದು ಎನ್ನುವ ನಿರೀಕ್ಷೆಯಲ್ಲಿ ವಾಹಿನಿ ಇದೆ. ‘ಜಗದೀಶ್ ಹೋಗಿದ್ದಕ್ಕೆ ಬಿಗ್ ಬಾಸ್ ಟಿಆರ್​ಪಿ ಕುಗ್ಗುತ್ತಿದೆ’ ಎಂದು ಕೆಲವರು ಹೇಳಿದ್ದು ಇದೆ. ಆದರೆ, ಅಂಥ ದೊಡ್ಡ ವ್ಯತ್ಯಾಸ ಏನೂ ಆಗಿಲ್ಲ. 43ನೇ ವಾರದ ಪಟ್ಟಿಯಲ್ಲಿ (ವಾರದ ದಿನಗಳಲ್ಲಿ) 7 ಟಿವಿಆರ್​ ಸಿಗುತ್ತಿತ್ತು, ಈಗ ಅದು 6.4ಗೆ ಕುಸಿದಿದೆ.

ಇದನ್ನೂ ಓದಿ: ಬಿಗ್ ಬಾಸ್ ಹಾಗೂ ಧಾರಾವಾಹಿಗಳ​ ಟಿಆರ್​ಪಿ ಔಟ್; ಇಲ್ಲಿದೆ ಸಂಪೂರ್ಣ ವಿವರ

ಧಾರಾವಾಹಿ ಸಾಲಿನಲ್ಲಿ (ನಗರ ಹಾಗೂ ಗ್ರಾಮೀಣ ಒಟ್ಟಾಗಿ ಸೇರಿ) ‘ಪುಟ್ಟಕ್ಕನ ಮಕ್ಕಳು’ ಮೊದಲ ಸ್ಥಾನದಲ್ಲಿ ಇದೆ. ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಮೂರನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ನಾಲ್ಕನೇ ಸ್ಥಾನದಲ್ಲಿ ‘ಅಣ್ಣಯ್ಯ’ ಹಾಗೂ ಐದನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ