AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಟಿಆರ್​ಪಿ ಪಡೆದ ‘ಭಾಗ್ಯಲಕ್ಷ್ಮೀ’; ಬಿಗ್ ಬಾಸ್ ಟಿಆರ್​ಪಿ ಎಷ್ಟು?

Kannada Serials TRP: ಬಿಗ್ ಬಾಸ್ ಟಿಆರ್​ಪಿಯಲ್ಲಿ ಭರ್ಜರಿ ಏರಿಕೆ ಕಂಡಿದೆ. ಶನಿವಾರದ ಎಪಿಸೋಡ್​ನಲ್ಲಿ 9.4 ಟಿವಿಆರ್ ಸಿಕ್ಕಿದೆ. ಭಾನುವಾರದ ಎಪಿಸೋಡ್​ಗೆ 9 ಟಿವಿಆರ್ ಸಿಕ್ಕಿದೆ. ಸೋಮವಾರದಿಂದ ಶುಕ್ರವಾರದವರೆಗೆ ಈ ಶೋ 7.2 ಟಿಆರ್​ಪಿ ಪಡೆದಿದೆ.

ಭರ್ಜರಿ ಟಿಆರ್​ಪಿ ಪಡೆದ ‘ಭಾಗ್ಯಲಕ್ಷ್ಮೀ’; ಬಿಗ್ ಬಾಸ್ ಟಿಆರ್​ಪಿ ಎಷ್ಟು?
ಭಾಗ್ಯಲಕ್ಷ್ಮಿ ಧಾರಾವಾಹಿ-ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on: Dec 21, 2023 | 2:11 PM

ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಭಾಗ್ಯಲಕ್ಷ್ಮೀ’ ಧಾರಾವಾಹಿ (Bhagyalakshmi Serial) ಪ್ರೇಕ್ಷಕರಿಗೆ ಇಷ್ಟ ಆಗುತ್ತಿದೆ. ಹಲವು ಟ್ವಿಸ್ಟ್​ಗಳನ್ನು ಪಡೆದು ಈ ಧಾರಾವಾಹಿ ಮುನ್ನುಗ್ಗುತ್ತಿದೆ. ಈಗ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಕೆ ಆಗಿದೆ. ಆರು ಅಥವಾ ಏಳನೇ ಸ್ಥಾನದಲ್ಲಿ ಇರುತ್ತಿದ್ದ ಈ ಧಾರಾವಾಹಿಗೆ ಈಗ ಭರ್ಜರಿ ಟಿಆರ್​ಪಿ ಸಿಕ್ಕಿದೆ. ಈ ಕಾರಣದಿಂದ ಧಾರಾವಾಹಿ ಎರಡನೇ ಸ್ಥಾನಕ್ಕೆ ಜಿಗಿದಿದೆ. ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್

ಬಿಗ್ ಬಾಸ್ ಟಿಆರ್​ಪಿಯಲ್ಲಿ ಭರ್ಜರಿ ಏರಿಕೆ ಕಂಡಿದೆ. ಶನಿವಾರದ ಎಪಿಸೋಡ್​ನಲ್ಲಿ 9.4 ಟಿವಿಆರ್ ಸಿಕ್ಕಿದೆ. ಭಾನುವಾರದ ಎಪಿಸೋಡ್​ಗೆ 9 ಟಿವಿಆರ್ ಸಿಕ್ಕಿದೆ. ಸೋಮವಾರದಿಂದ ಶುಕ್ರವಾರದವರೆಗೆ ಈ ಶೋ 7.2 ಟಿಆರ್​ಪಿ ಪಡೆದಿದೆ. ಬಿಗ್ ಬಾಸ್ ಭರ್ಜರಿ ಫೈಟ್​ ನಡೆದಿತ್ತು. ಸಂಗೀತಾ ಕಣ್ಣಿಗೆ ಹಾನಿ ಆಗಿತ್ತು. ಆ ವಾರದ ಟಿಆರ್​ಪಿ ಇದಾಗಿದೆ.

ಪುಟ್ಟಕ್ಕನ ಮಕ್ಕಳು

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಲವು ತಿಂಗಳಿಂದ ಮೊದಲ ಸ್ಥಾನದಲ್ಲಿ ಮುನ್ನಡೆಯುತ್ತಿದೆ. ಈ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಬಾರಿ ಈ ಧಾರಾವಾಹಿಯ ಟಿಆರ್​ಪಿ ಎರಡಂಕಿಯಲ್ಲಿದೆ. ಇದು ತಂಡದ ಖುಷಿ ಹೆಚ್ಚಿಸಿದೆ.

ಭಾಗ್ಯಲಕ್ಷ್ಮೀ

ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ವೀಕ್ಷಕರಿಂದ ಮೆಚ್ಚುಗೆ ಪಡೆದಿದೆ. ಈ ಧಾರಾವಾಹಿಗೆ ಎರಡನೇ ಸ್ಥಾನ ಸಿಕ್ಕಿದೆ. ಸುಷ್ಮಾ ರಾವ್, ಸುದರ್ಶನ್​, ಸುಷ್ಮಾ ನಾಣಯ್ಯ ಮೊದಲಾದವರು ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ವೀಕ್ಷಕರಿಗೆ ಈ ಧಾರಾವಾಹಿಯ ಕಥೆ ಇಷ್ಟ ಆಗಿದೆ.

ಗಟ್ಟಿಮೇಳ

‘ಗಟ್ಟಿಮೇಳ’ ಧಾರಾವಾಹಿ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಈ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಈ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಮೂರನೇ ಸ್ಥಾನದಲ್ಲಿದೆ.

ಅಮೃತಧಾರೆ-ಸತ್ಯ

ರಾಜೇಶ್ ನಟರಂಗ, ಛಾಯಾ ಸಿಂಗ್ ಮೊದಲಾದವರು ನಟಿಸಿರುವ ‘ಅಮೃತಧಾರೆ’ ಧಾರಾವಾಹಿ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿದೆ. ಈ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ. ‘ಸತ್ಯ’ ಧಾರಾವಾಹಿಗೂ ಒಂದೇ ರೀತಿಯ ಟಿಆರ್​ಪಿ ಸಿಕ್ಕಿದ್ದು. ಈ ಧಾರಾವಾಹಿಯೂ ನಾಲ್ಕನೇ ಸ್ಥಾನದಲ್ಲಿದೆ.

ಶ್ರೀರಸ್ತು ಶುಭಮಸ್ತು

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಐದನೇ ಸ್ಥಾನದಲ್ಲಿದೆ. ಈ ಧಾರಾವಾಹಿ ಕೂಡ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದೆ.

ಇದನ್ನೂ ಓದಿ: ಹೆಚ್ಚುತ್ತಲೇ ಇದೆ ಬಿಗ್ ಬಾಸ್ ಟಿಆರ್​ಪಿ; ಸಂಕಷ್ಟದಲ್ಲಿ ‘ಸೀತಾ ರಾಮ’ ಧಾರಾವಾಹಿ

‘ಸೀತಾ ರಾಮ’

‘ಸೀತಾ ರಾಮ’ ಧಾರಾವಾಹಿಯ ಟಿಆರ್​ಪಿ ದಿನ ಕಳೆದಂತೆ ಕುಗ್ಗುತ್ತಿದೆ. ಈ ಧಾರಾವಾಹಿ ಆರಂಭದಲ್ಲಿ ಉತ್ತಮ ಟಿಆರ್​ಪಿ ಪಡೆದಿತ್ತು. ಈ ಧಾರಾವಾಹಿ ಪ್ರಸಾರದ ಸಮಯದಲ್ಲಿ ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿರುವುದಕ್ಕೋ ಏನೋ ‘ಸೀತಾ ರಾಮ’ ಧಾರಾವಾಹಿಯ ಟಿಆರ್​ಪಿ ಕುಸಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ