AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆ ಬರೆದ ‘ಬಿಗ್ ಬಾಸ್’: ಶನಿವಾರದ ಎಪಿಸೋಡ್​ಗೆ ಸಿಕ್ಕ ಟಿಆರ್​ಪಿ ಎಷ್ಟು? ಇಲ್ಲಿದೆ ವಿವರ

‘ಬಿಗ್ ಬಾಸ್’ ಆಗಮನ ಆಗುತ್ತದೆ ಎಂದರೆ ಮೂರು ಧಾರಾವಾಹಿಗಳ ಸ್ಲಾಟ್​ನ ಈ ರಿಯಾಲಿಟಿ ಶೋಗೆ ಮೀಸಲಿಡಲಾಗುತ್ತದೆ. ಹೀಗಾಗಿ, ಈ ರಿಯಾಲಿಟಿ ಶೋ ಮೇಲೆ ಹೆಚ್ಚಿನ ನಿರೀಕ್ಷೆ ಇರುತ್ತದೆ. ಈ ಬಾರಿ ಬಿಗ್ ಬಾಸ್ ಅಂದುಕೊಂಡಿದ್ದಕ್ಕಿಂತಲೂ ಹೆಚ್ಚು ಜನರಿಗೆ ಇಷ್ಟವಾಗುತ್ತಿದೆ.

ದಾಖಲೆ ಬರೆದ ‘ಬಿಗ್ ಬಾಸ್’: ಶನಿವಾರದ ಎಪಿಸೋಡ್​ಗೆ ಸಿಕ್ಕ ಟಿಆರ್​ಪಿ ಎಷ್ಟು? ಇಲ್ಲಿದೆ ವಿವರ
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Nov 09, 2023 | 12:34 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಸಾಕಷ್ಟು ಅದ್ದೂರಿ ಹಾಗೂ ವಿಶೇಷವಾಗಿರಲಿದೆ ಎಂದು ವಾಹಿನಿಯವರು ಮೊದಲೇ ಹೇಳಿದ್ದರು. ಅದಕ್ಕೆ ತಕ್ಕಂತೆ ಹೊಸ ಮನೆ ನಿರ್ಮಾಣ ಮಾಡಲಾಯಿತು. ಶೋ ಆರಂಭ ಆದಾಗಿನಿಂದಲೂ ದೊಡ್ಮನೆಯಲ್ಲಿ ಸಾಕಷ್ಟು ಡ್ರಾಮಾಗಳು ನಡೆಯುತ್ತಿವೆ. ಕಳೆದ ಶನಿವಾರ (ನವೆಂಬರ್ 4) ಕಿಚ್ಚ ಸುದೀಪ್ ಅವರು ಅನೇಕರಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಈ ಎಪಿಸೋಡ್ ಬಗ್ಗೆ ಭರ್ಜರಿ ಚರ್ಚೆ ಆಗಿತ್ತು. ಎಲ್ಲರೂ ಶೋಗೆ ಒಳ್ಳೆಯ ಟಿಆರ್​ಪಿ ಬರಬಹುದು ಎಂದು ಊಹಿಸಿದ್ದರು. ಈ ಊಹೆ ನಿಜವಾಗಿದೆ. ‘ಬಿಗ್ ಬಾಸ್’ ರಿಯಾಲಿಟಿ ಶೋ ಭರ್ಜರಿ ಟಿಆರ್​ಪಿಯೊಂದಿಗೆ ಮುನ್ನುಗ್ಗುತ್ತಿದೆ.

‘ಬಿಗ್ ಬಾಸ್’ ಆಗಮನ ಆಗುತ್ತದೆ ಎಂದರೆ ಮೂರು ಧಾರಾವಾಹಿಗಳ ಸ್ಲಾಟ್​ನ ಈ ರಿಯಾಲಿಟಿ ಶೋಗೆ ಮೀಸಲಿಡಲಾಗುತ್ತದೆ. ಹೀಗಾಗಿ, ಈ ರಿಯಾಲಿಟಿ ಶೋ ಮೇಲೆ ಹೆಚ್ಚಿನ ನಿರೀಕ್ಷೆ ಇರುತ್ತದೆ. ಈ ಬಾರಿ ಬಿಗ್ ಬಾಸ್ ಅಂದುಕೊಂಡಿದ್ದಕ್ಕಿಂತಲೂ ಹೆಚ್ಚು ಜನರಿಗೆ ಇಷ್ಟವಾಗುತ್ತಿದೆ. ಮನೆಯಲ್ಲಿ ಎರಡು ಟೀಂ ಆಗಿದೆ. ಕಳೆದ ವಾರ ಆದ ಕೆಟ್ಟ ಭಾಷೆಗಳ ಬಳಕೆ, ಮಹಿಳೆಯರಿಗೆ ಅವಮಾನ ಮತ್ತಿತ್ಯಾದಿ ವಿಚಾರಗಳಲ್ಲಿ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದರು. ಇದು ಸಹಕಾರಿ ಆಗಿದೆ.

ಶನಿವಾರದ ಬಿಗ್ ಬಾಸ್ ಎಪಿಸೋಡ್​ ನಗರ ಭಾಗದಲ್ಲಿ 8.1 ಟಿವಿಆರ್​ ಪಡೆದಿದೆ. ಭಾನುವಾರ 7.6 ಟಿವಿಆರ್ ಹಾಗೂ ವಾರದ ದಿನಗಳಲ್ಲಿ 7.5 ಟಿವಿಆರ್ ಪಡೆದಿದೆ. ಈ ಮೂಲಕ ಬಿಗ್ ಬಾಸ್ ಶೋ ಮೇಲುಗೈ ಸಾಧಿಸಿದಿದೆ.

ಇದನ್ನೂ ಓದಿ: ಬಿಗ್ ಬಾಸ್ ಎಫೆಕ್ಟ್: ‘ಸೀತಾ ರಾಮ’ ಧಾರಾವಾಹಿ ಟಿಆರ್​ಪಿಯಲ್ಲಿ ಇಳಿಕೆ; ಇಲ್ಲಿದೆ ವಿವರ

ಧಾರಾವಾಹಿಗಳ ಟಿಆರ್​ಪಿ ಕೂಡ ಹೊರಬಿದ್ದಿದೆ. ನಗರ ಭಾಗದಲ್ಲಿ ಪುಟ್ಟಕ್ಕನ್ನ ಮಕ್ಕಳು ಮೊದಲ ಸ್ಥಾನದಲ್ಲಿ ಇದೆ. ಎರಡನೇ ಸ್ಥಾನದಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಇದೆ. ಮೂರನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮಿ’

ನಾಲ್ಕನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ, ಐದನೇ ಸ್ಥಾನದಲ್ಲಿ ‘ಸತ್ಯ ಹಾಗೂ ಶ್ರೀರಸ್ತು ಶುಭಮಸ್ತು’ ಆರನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:33 pm, Thu, 9 November 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು