AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮಂದಿಯ ಒಗ್ಗಟ್ಟಿನ ಹಿಂದೆ ಇದೆಯಾ ಕುತಂತ್ರ? ಬುದ್ಧಿವಂತಿಕೆಯಿಂದ ಯೋಚಿಸಿದ ತುಕಾಲಿ ಸಂತೋಷ್​

ಬಿಗ್​ ಬಾಸ್​ ಮನೆಯಲ್ಲಿ ಯಾರು ಯಾವಾಗ ಬದಲಾಗುತ್ತಾರೆ ಅಂತ ಹೇಳೋದು ಕಷ್ಟ. ಆ ಕಾರಣದಿಂದ ಯಾರನ್ನೂ ನಂಬೋಕೆ ಆಗಲ್ಲ. ಹಾಗಾಗಿ ತುಕಾಲಿ ಸಂತೋಷ್​ ಅವರು ತಮ್ಮ ನಿರ್ಧಾರ ಏನು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ವರ್ತೂರು ಸಂತೋಷ್​ ಜೊತೆ ಅವರು ಈ ಕುರಿತು ಚರ್ಚೆ ಮಾಡಿದ್ದಾರೆ.

ಬಿಗ್​ ಬಾಸ್​ ಮಂದಿಯ ಒಗ್ಗಟ್ಟಿನ ಹಿಂದೆ ಇದೆಯಾ ಕುತಂತ್ರ? ಬುದ್ಧಿವಂತಿಕೆಯಿಂದ ಯೋಚಿಸಿದ ತುಕಾಲಿ ಸಂತೋಷ್​
ವರ್ತೂರು ಸಂತೋಷ್​, ತುಕಾಲಿ ಸಂತೋಷ್​
ಮದನ್​ ಕುಮಾರ್​
|

Updated on: Dec 25, 2023 | 10:42 PM

Share

ಹಾಸ್ಯ ನಟ ತುಕಾಲಿ ಸಂತೋಷ್​ (Tukali Santhosh) ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಶೋನಲ್ಲಿ ಸಖತ್​ ಮನರಂಜನೆ ನೀಡುತ್ತಿದ್ದಾರೆ. ಟಾಸ್ಕ್​ ವಿಚಾರದಲ್ಲೂ ಅವರು ಹಿಂದುಳಿಯುತ್ತಿಲ್ಲ. ನಗಿಸುವುದರ ಜೊತೆಗೆ ಅವರು ಭರ್ಜರಿ ಪೈಪೋಟಿ ಕೂಡ ನೀಡುತ್ತಿದ್ದಾರೆ. ದೊಡ್ಮನೆಯಲ್ಲಿ 78 ದಿನಗಳನ್ನು ಕಳೆದಿರುವ ಅವರಿಗೆ ಎಲ್ಲರ ಆಟವೂ ಅರ್ಥವಾಗುತ್ತಿದೆ. ಇತ್ತೀಚೆಗೆ ವಿನಯ್​ ಗೌಡ (Vinay Gowda) ಅವರು ಹೊಸ ತಂತ್ರಗಾರಿಕೆ ರೂಪಿಸಿದ್ದಾರೆ. ಅದರ ಹಿಂದೆ ಇರುವ ಉದ್ದೇಶ ಏನು ಎಂಬುದನ್ನು ತುಕಾಲಿ ಸಂತೋಷ್​ ಅವರು ಊಹಿಸಿದ್ದಾರೆ. ಅ ಬಗ್ಗೆ ವರ್ತೂರು ಸಂತೋಷ್​ (Varthur Santhosh) ಬಳಿ ಅವರು ಚರ್ಚೆ ಮಾಡಿದ್ದಾರೆ.

ಇಷ್ಟು ದಿನಗಳ ಕಾಲ ಆಕ್ರಮಣಕಾರಿಯಾಗಿ ಆಟ ಆಡುತ್ತಿದ್ದ ವಿನಯ್​ ಗೌಡ ಅವರು ಈಗ ತಮ್ಮ ಮನಸ್ಸು ಬದಲಾಯಿಸಿಕೊಂಡಿದ್ದಾರೆ. ಇನ್ಮುಂದೆ ಹೊಡೆದಾಡುವುದು ಬೇಡ ಎಂದು ಅವರು ತೀರ್ಮಾನಿಸಿದ್ದಾರೆ. ಅವರ ಮಾತಿನ ಮೇಲೆ ತುಕಾಲಿ ಸಂತೋಷ್​ ಅವರಿಗೆ ನಂಬಿಕೆ ಬಂದಿಲ್ಲ. ಈ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯ ಏನು ಎಂಬುದನ್ನು ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಡಿವೋರ್ಸ್​ ನಿರ್ಧಾರ; ದಂಪತಿ ಜಗಳಕ್ಕೆ ಪ್ರೇಕ್ಷಕರು ಶಾಕ್​

‘ವಿನಯ್ ಬದಲಾಗಿರಬಹುದು. ನಾವು ಬದಲಾಗಲ್ಲ’ ಎಂಬರ್ಥದಲ್ಲಿ ತುಕಾಲಿ ಸಂತೋಷ್​ ಮಾತನಾಡಿದ್ದಾರೆ. ಈಗ ಎಲ್ಲರೂ ಒಗ್ಗಟ್ಟಿನಲ್ಲಿ ಇರುವ ರೀತಿ ಮಾತನಾಡುತ್ತಾರೆ. ಆದರೆ ಅಸಲಿ ವಿಷಯ ಆ ರೀತಿ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ. ಹಾಗಾಗಿ ತಾವು ಇಂಥ ಮಾತುಗಳಿಗೆ ಮರುಳಾಗುವುದಿಲ್ಲ ಎಂದು ತುಕಾಲಿ ಸಂತೋಷ್​ ಹೇಳಿದ್ದಾರೆ. ವರ್ತೂರು ಸಂತೋಷ್​ ಜೊತೆ ಅವರು ಮೊದಲಿನಿಂದಲೂ ಸ್ನೇಹ ಹೊಂದಿದ್ದಾರೆ.

ಇದನ್ನೂ ಓದಿ: ‘ಬಿಗ್​ ಬಾಸ್​ ಫಿನಾಲೆಯ ಟಾಪ್​ 2 ಸ್ಥಾನಕ್ಕೆ ಸಂಗೀತಾ ಬರಲ್ಲ’: ಪವಿ ಪೂವಪ್ಪ ನೇರ ಅಭಿಪ್ರಾಯ

ಬಿಗ್​ ಬಾಸ್​ ಮನೆಯಲ್ಲಿ ಯಾರು ಯಾವಾಗ ಬದಲಾಗುತ್ತಾರೆ ಎಂದು ಹೇಳೋದು ಕಷ್ಟ. ಆ ಕಾರಣದಿಂದ ಯಾರನ್ನೂ ನಂಬೋಕೆ ಆಗಲ್ಲ. ಹಾಗಾಗಿ ತುಕಾಲಿ ಸಂತೋಷ್​ ಅವರು ಹೀಗೆ ಹೇಳಿದ್ದಾರೆ. ಸಂಗೀತಾ ಶೃಂಗೇರಿ, ಕಾರ್ತಿಕ್​ ಮಹೇಶ್​, ಡ್ರೋನ್​ ಪ್ರತಾಪ್​, ತುಕಾಲಿ ಸಂತೋಷ್​, ವರ್ತೂರು ಸಂತೋಷ್​, ನಮ್ರತಾ ಗೌಡ, ತನಿಷಾ ಕುಪ್ಪಂಡ, ಸಿರಿ, ಮೈಕಲ್​ ಅಜಯ್​, ವಿನಯ್​ ಗೌಡ ಅವರ ನಡುವೆ ಪೈಪೋಟಿ ಮುಂದುವರಿದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?