ಬಿಗ್​ ಬಾಸ್​ ಮಂದಿಯ ಒಗ್ಗಟ್ಟಿನ ಹಿಂದೆ ಇದೆಯಾ ಕುತಂತ್ರ? ಬುದ್ಧಿವಂತಿಕೆಯಿಂದ ಯೋಚಿಸಿದ ತುಕಾಲಿ ಸಂತೋಷ್​

|

Updated on: Dec 25, 2023 | 10:42 PM

ಬಿಗ್​ ಬಾಸ್​ ಮನೆಯಲ್ಲಿ ಯಾರು ಯಾವಾಗ ಬದಲಾಗುತ್ತಾರೆ ಅಂತ ಹೇಳೋದು ಕಷ್ಟ. ಆ ಕಾರಣದಿಂದ ಯಾರನ್ನೂ ನಂಬೋಕೆ ಆಗಲ್ಲ. ಹಾಗಾಗಿ ತುಕಾಲಿ ಸಂತೋಷ್​ ಅವರು ತಮ್ಮ ನಿರ್ಧಾರ ಏನು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ವರ್ತೂರು ಸಂತೋಷ್​ ಜೊತೆ ಅವರು ಈ ಕುರಿತು ಚರ್ಚೆ ಮಾಡಿದ್ದಾರೆ.

ಬಿಗ್​ ಬಾಸ್​ ಮಂದಿಯ ಒಗ್ಗಟ್ಟಿನ ಹಿಂದೆ ಇದೆಯಾ ಕುತಂತ್ರ? ಬುದ್ಧಿವಂತಿಕೆಯಿಂದ ಯೋಚಿಸಿದ ತುಕಾಲಿ ಸಂತೋಷ್​
ವರ್ತೂರು ಸಂತೋಷ್​, ತುಕಾಲಿ ಸಂತೋಷ್​
Follow us on

ಹಾಸ್ಯ ನಟ ತುಕಾಲಿ ಸಂತೋಷ್​ (Tukali Santhosh) ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಶೋನಲ್ಲಿ ಸಖತ್​ ಮನರಂಜನೆ ನೀಡುತ್ತಿದ್ದಾರೆ. ಟಾಸ್ಕ್​ ವಿಚಾರದಲ್ಲೂ ಅವರು ಹಿಂದುಳಿಯುತ್ತಿಲ್ಲ. ನಗಿಸುವುದರ ಜೊತೆಗೆ ಅವರು ಭರ್ಜರಿ ಪೈಪೋಟಿ ಕೂಡ ನೀಡುತ್ತಿದ್ದಾರೆ. ದೊಡ್ಮನೆಯಲ್ಲಿ 78 ದಿನಗಳನ್ನು ಕಳೆದಿರುವ ಅವರಿಗೆ ಎಲ್ಲರ ಆಟವೂ ಅರ್ಥವಾಗುತ್ತಿದೆ. ಇತ್ತೀಚೆಗೆ ವಿನಯ್​ ಗೌಡ (Vinay Gowda) ಅವರು ಹೊಸ ತಂತ್ರಗಾರಿಕೆ ರೂಪಿಸಿದ್ದಾರೆ. ಅದರ ಹಿಂದೆ ಇರುವ ಉದ್ದೇಶ ಏನು ಎಂಬುದನ್ನು ತುಕಾಲಿ ಸಂತೋಷ್​ ಅವರು ಊಹಿಸಿದ್ದಾರೆ. ಅ ಬಗ್ಗೆ ವರ್ತೂರು ಸಂತೋಷ್​ (Varthur Santhosh) ಬಳಿ ಅವರು ಚರ್ಚೆ ಮಾಡಿದ್ದಾರೆ.

ಇಷ್ಟು ದಿನಗಳ ಕಾಲ ಆಕ್ರಮಣಕಾರಿಯಾಗಿ ಆಟ ಆಡುತ್ತಿದ್ದ ವಿನಯ್​ ಗೌಡ ಅವರು ಈಗ ತಮ್ಮ ಮನಸ್ಸು ಬದಲಾಯಿಸಿಕೊಂಡಿದ್ದಾರೆ. ಇನ್ಮುಂದೆ ಹೊಡೆದಾಡುವುದು ಬೇಡ ಎಂದು ಅವರು ತೀರ್ಮಾನಿಸಿದ್ದಾರೆ. ಅವರ ಮಾತಿನ ಮೇಲೆ ತುಕಾಲಿ ಸಂತೋಷ್​ ಅವರಿಗೆ ನಂಬಿಕೆ ಬಂದಿಲ್ಲ. ಈ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯ ಏನು ಎಂಬುದನ್ನು ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಡಿವೋರ್ಸ್​ ನಿರ್ಧಾರ; ದಂಪತಿ ಜಗಳಕ್ಕೆ ಪ್ರೇಕ್ಷಕರು ಶಾಕ್​

‘ವಿನಯ್ ಬದಲಾಗಿರಬಹುದು. ನಾವು ಬದಲಾಗಲ್ಲ’ ಎಂಬರ್ಥದಲ್ಲಿ ತುಕಾಲಿ ಸಂತೋಷ್​ ಮಾತನಾಡಿದ್ದಾರೆ. ಈಗ ಎಲ್ಲರೂ ಒಗ್ಗಟ್ಟಿನಲ್ಲಿ ಇರುವ ರೀತಿ ಮಾತನಾಡುತ್ತಾರೆ. ಆದರೆ ಅಸಲಿ ವಿಷಯ ಆ ರೀತಿ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ. ಹಾಗಾಗಿ ತಾವು ಇಂಥ ಮಾತುಗಳಿಗೆ ಮರುಳಾಗುವುದಿಲ್ಲ ಎಂದು ತುಕಾಲಿ ಸಂತೋಷ್​ ಹೇಳಿದ್ದಾರೆ. ವರ್ತೂರು ಸಂತೋಷ್​ ಜೊತೆ ಅವರು ಮೊದಲಿನಿಂದಲೂ ಸ್ನೇಹ ಹೊಂದಿದ್ದಾರೆ.

ಇದನ್ನೂ ಓದಿ: ‘ಬಿಗ್​ ಬಾಸ್​ ಫಿನಾಲೆಯ ಟಾಪ್​ 2 ಸ್ಥಾನಕ್ಕೆ ಸಂಗೀತಾ ಬರಲ್ಲ’: ಪವಿ ಪೂವಪ್ಪ ನೇರ ಅಭಿಪ್ರಾಯ

ಬಿಗ್​ ಬಾಸ್​ ಮನೆಯಲ್ಲಿ ಯಾರು ಯಾವಾಗ ಬದಲಾಗುತ್ತಾರೆ ಎಂದು ಹೇಳೋದು ಕಷ್ಟ. ಆ ಕಾರಣದಿಂದ ಯಾರನ್ನೂ ನಂಬೋಕೆ ಆಗಲ್ಲ. ಹಾಗಾಗಿ ತುಕಾಲಿ ಸಂತೋಷ್​ ಅವರು ಹೀಗೆ ಹೇಳಿದ್ದಾರೆ. ಸಂಗೀತಾ ಶೃಂಗೇರಿ, ಕಾರ್ತಿಕ್​ ಮಹೇಶ್​, ಡ್ರೋನ್​ ಪ್ರತಾಪ್​, ತುಕಾಲಿ ಸಂತೋಷ್​, ವರ್ತೂರು ಸಂತೋಷ್​, ನಮ್ರತಾ ಗೌಡ, ತನಿಷಾ ಕುಪ್ಪಂಡ, ಸಿರಿ, ಮೈಕಲ್​ ಅಜಯ್​, ವಿನಯ್​ ಗೌಡ ಅವರ ನಡುವೆ ಪೈಪೋಟಿ ಮುಂದುವರಿದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.