AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ‘ಬಿಗ್ ಬಾಸ್​’ನಲ್ಲಿ ಮುಂದುವರೆದ ಹಳೆಯ ಟೆಕ್ನಿಕ್? ಏನದು?

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶೋ ಸೆಪ್ಟೆಂಬರ್​ 29ರಂದು ಅದ್ದೂರಿಯಾಗಿ ಲಾಂಚ್​ ಆಗಲಿದೆ. ಆ ಬಗ್ಗೆ ಮಾತನಾಡಲು ಸೆ.23ರಂದು ಪ್ರೆಸ್​ಮೀಟ್​ ಮಾಡಲಾಯಿತು. ಈ ವೇಳೆ ಕೆಲವು ವಿಚಾರಗಳನ್ನು ತಂಡ ರಿವೀಲ್ ಮಾಡಿದೆ. ಇದರಲ್ಲಿ ಸ್ವರ್ಗ-ನರಕ ಕೂಡ ಕೂಡಿದೆ.

Bigg Boss Kannada: ‘ಬಿಗ್ ಬಾಸ್​’ನಲ್ಲಿ ಮುಂದುವರೆದ ಹಳೆಯ ಟೆಕ್ನಿಕ್? ಏನದು?
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Sep 24, 2024 | 7:01 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಆರಂಭಕ್ಕೆ ಇನ್ನು ಉಳಿದಿರೋದು ಕೆಲವೇ ದಿನಗಳು ಮಾತ್ರ. ಶನಿವಾರ (ಸೆಪ್ಟೆಂಬರ್ 28) ಶೂಟಿಂಗ್ ನಡೆಯಲಿದ್ದು, ಸೆಪ್ಟೆಂಬರ್ 29ರಂದು ಕಲರ್ಸ್ ಕನ್ನಡದಲ್ಲಿ ಈ ಶೋ ಪ್ರಸಾರ ಕಾಣಲಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ನಟ ಕಿಚ್ಚ ಸುದೀಪ್ ಅವರು ಈ ಶೋನ ಭಾಗ ಆಗಲಿದ್ದಾರೆ. ಯಾವೆಲ್ಲ ಸ್ಪರ್ಧಿಗಳು ದೊಡ್ಮನೆ ಒಳಗೆ ಬರುತ್ತಾರೆ ಎನ್ನುವ ಬಗ್ಗೆ ಚರ್ಚೆ ಶುರುವಾಗಿದೆ. ಹೀಗಿರುವಾಗಲೇ ಬಿಗ್ ಬಾಸ್​ನವರು ಹಳೆಯ ಟೆಕ್ನಿಕ್ ಉಪಯೋಗಿಸಿದ್ದಾರೆ.

ಕಳೆದ ವರ್ಷ ಬಿಗ್ ಬಾಸ್​ನಲ್ಲಿ ಸಮರ್ಥರು ಹಾಗೂ ಅಸಮರ್ಥರು ಹೆಸರಿನ ಎರಡು ಗುಂಪನ್ನು ಮಾಡಲಾಗಿತ್ತು. ಒಂದು ವಾರಗಳ ಕಾಲ ಈ ಆಟ ಇತ್ತು. ಸಮರ್ಥರಿಗೆ ಮನೆ ಬಳಕೆಗೆ ಅವಕಾಶ ಇತ್ತು. ಜೊತೆಗೆ ಮನೆಯ ಎಲ್ಲಾ ಸೌಲಭ್ಯಗಳನ್ನು ನೀಡಲಾಗಿತ್ತು. ಅದೇ ರೀತಿ ಮನೆಯ ಸಾಮಾನ್ಯ ಬಟ್ಟೆ ಹಾಕಿಕೊಳ್ಳಲು ಅವಕಾಶ ಇತ್ತು. ಎಲಿಮಿನೇಷನ್​ಗೆ ಈ ತಂಡದಿಂದ ಯಾರೆಂದರೆ ಯಾರೂ ನಾಮಿನೇಟ್ ಆಗಿರಲಿಲ್ಲ.

ಅದೇ ರೀತಿ ಅಸಮರ್ಥರು ತಂಡದವರಿಗೆ ಸಮವಸ್ತ್ರ ಇತ್ತು. ಅದನ್ನೇ ಅವರು ಹಾಕಬೇಕಿತ್ತು. ಜೊತೆಗೆ ಅವರಿಗೆ ಮನೆಯ ಎಲ್ಲಾ ಸೌಲಭ್ಯಗಳನ್ನು ಬಳಕೆ ಮಾಡಲು ಅವಕಾಶ ಇರಲಿಲ್ಲ. ಎಲ್ಲರೂ ನಾಮಿನೇಟ್ ಆಗಿದ್ದು ಇದೇ ತಂಡದಿಂದಲೇ ಆಗಿತ್ತು. ಈ ಟಾಸ್ಕ್ ಒಂದೇ ವಾರಕ್ಕೆ ಮುಗಿದ ಹೊರತಾಗಿಯೂ ಮನೆಯಲ್ಲಿದ್ದ ಅನೇಕರು ಸಮರ್ಥರು-ಅಸಮರ್ಥರು ಎಂಬ ಗ್ಯಾಂಗ್​ನಿಂದಲೇ ಗುರುತಿಸಲ್ಪಡುತ್ತಿದ್ದರು. ಈ ರೀತಿಯಲ್ಲಿ ಸಮರ್ಥರು ಹಾಗೂ ಅಸಮರ್ಥರು ಎಂಬುದನ್ನು ನಿರ್ಧರಿಸಲಾಗಿದ್ದು ಪ್ರೇಕ್ಷಕರ ವೋಟಿಂಗ್ ಮೂಲಕವೇ.

ಇದನ್ನೂ ಓದಿ: ಬಿಗ್ ಬಾಸ್ ನಿರೂಪಣೆಗೆ ಬ್ರೇಕ್ ಹಾಕಲು ನಿರ್ಧರಿಸಿದ್ದ ಸುದೀಪ್; ಮತ್ತೆ ಒಪ್ಪಿದ್ದು ಹೇಗೆ?

ಈ ವಾರ ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಸ್ವರ್ಗ-ನರಕ ಕಾನ್ಸೆಪ್ಟ್​ ತರಲಾಗಿದೆ. ಯಾರು ಯಾವ ತಂಡ ಸೇರಬೇಕು ಎಂಬುದನ್ನು ವೋಟಿಂಗ್ ಆಧಾರದ ಮೂಲಕ ನಿರ್ಧರಿಸಲಾಗುವುದು ಎಂದು ವಾಹಿನಿ  ಹೇಳಿದೆ. ಈ ಮೂಲಕ ಕಳೆದ ವರ್ಷದ ಟೆಕ್ನಿಕ್​ನ ಮುಂದುವರಿಸಲಾಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಕೆಲವು ವರದಿಗಳು ಪ್ರಕಾರ ಹಲವು ವಾರಗಳ ಕಾಲ ಸ್ವರ್ಗ-ನರಕ ಕಾನ್ಸೆಪ್ಟ್​ ಇರಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಕೆಲವು ವರದಿಗಳು ಒಂದೇ ವಾರದಲ್ಲಿ ಎಲ್ಲವೂ ನಾರ್ಮಲ್​ ಆಗಲಿದೆ ಎನ್ನುತ್ತಿವೆ. ಸ್ವರ್ಗ-ನರಕ ಪಡೆಯಲು ಸ್ಪರ್ಧೆ ಏರ್ಪಟ್ಟರೂ ಅಚ್ಚರಿ ಏನಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ