‘ನಾವು ಮಾನವೀಯತೆ ಅಂತ ಹೋದರೆ ನಮ್ಮ ಮುಂದೆಯೇ ಹಳ್ಳ ತೋಡುತ್ತಾರೆ’: ವರ್ತೂರು ಸಂತೋಷ್​

ಇಷ್ಟು ದಿನಗಳ ಕಾಲ ತನಿಷಾ ಕುಪ್ಪಂಡ ಮತ್ತು ವರ್ತೂರು ಸಂತೋಷ್​ ಅವರ ನಡುವೆ ಆಪ್ತತೆ ಬೆಳೆದಿತ್ತು. ಆದರೆ ಈಗ ಅವರಿಬ್ಬರ ನಡುವೆ ಬಿರುಕು ಮೂಡಿದೆ. ತನಿಷಾಗೆ ತಾವು ಮಾನವೀಯತೆ ತೋರಿಸಲು ಸಾಧ್ಯವಿಲ್ಲ ಎಂದು ವರ್ತೂರು ಸಂತೋಷ್​ ಅವರು ಮುಖಕ್ಕೆ ಹೊಡೆದಂತೆ ಹೇಳಿದ್ದಾರೆ. ಆ ವಿಡಿಯೋ ಇಲ್ಲಿದೆ..

‘ನಾವು ಮಾನವೀಯತೆ ಅಂತ ಹೋದರೆ ನಮ್ಮ ಮುಂದೆಯೇ ಹಳ್ಳ ತೋಡುತ್ತಾರೆ’: ವರ್ತೂರು ಸಂತೋಷ್​
ವರ್ತೂರು ಸಂತೋಷ್​, ತನಿಷಾ ಕುಪ್ಪಂಡ
Follow us
|

Updated on: Dec 04, 2023 | 2:43 PM

ಬಿಗ್​ ಬಾಸ್​ ಮನೆಯಲ್ಲಿ ವರ್ತೂರು ಸಂತೋಷ್​ (Varthur Santhosh) ಅವರ ಆಟದ ವೈಖರಿ ಈಗ ಬದಲಾಗಿದೆ. ಆರಂಭದಲ್ಲಿ ಸುಮ್ಮನೆ ಇರುತ್ತಿದ್ದ ಅವರು ಈಗ ಸಖತ್​ ಜೋರಾಗಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ‘ಕಲರ್ಸ್ ಕನ್ನಡ’ ವಾಹಿನಿ ಹೊಸ ಪ್ರೋಮೋ ಹಂಚಿಕೊಂಡಿದೆ. ಡಿಸೆಂಬರ್​ 4ರ ಸಂಚಿಕೆಯಲ್ಲಿ ವರ್ತೂರು ಸಂತೋಷ್​ ಅವರು ಸಿಕ್ಕಾಪಟ್ಟೆ ನೇರವಾಗಿ ಮಾತನಾಡುತ್ತಾರೆ. ನಾಮಿನೇಷನ್​ ವಿಚಾರ ಬಂದಾಗ ತನಿಷಾ ಕುಪ್ಪಂಡ (Tanisha Kuppanda) ಅವರಿಗೂ ವರ್ತೂರು ಸಂತೋಷ್​ ಮುಲಾಜು ತೋರಿಸಿಲ್ಲ. ಅವರ ಈ ವರ್ತನೆ ನೋಡಿ ತನಿಷಾಗೆ ಶಾಕ್​ ಆಗಿದೆ. ಅಷ್ಟೇ ಅಲ್ಲ, ಬಿಗ್​ ಬಾಸ್​ (Bigg Boss Kannada) ಮನೆಯಲ್ಲಿ ಇರುವ ಇತರೆ ಸ್ಪರ್ಧಿಗಳೂ ಅಚ್ಚರಿಪಟ್ಟಿದ್ದಾರೆ. ಅಷ್ಟಕ್ಕೂ ವರ್ತೂರು ಸಂತೋಷ್​ ಹೇಳಿದ್ದೇನು? ಇಲ್ಲಿದೆ ವಿವರ..

ಸೋಮವಾರ ಬಂತೆಂದರೆ ನಾಮಿಷನ್​ ಪ್ರಕ್ರಿಯೆ ಶುರುವಾಗುತ್ತದೆ. ಯಾರು ಎಲಿಮಿನೇಟ್​ ಆಗಬೇಕು ಎಂಬುದಕ್ಕೆ ಸ್ಪರ್ಧಿಗಳ ಹೆಸರನ್ನು ನಾಮಿನೇಟ್​ ಮಾಡುವ ಸಂದರ್ಭ ಬಂದಾಗ ಎಲ್ಲರೂ ನಿಷ್ಠುರವಾಗಿ ನಡೆದುಕೊಳ್ಳುತ್ತಾರೆ. 9ನೇ ವಾರದಲ್ಲೂ ಹಾಗೆಯೇ ಆಗಿದೆ. ಅದರಲ್ಲೂ ವರ್ತೂರು ಸಂತೋಷ್​ ಅವರು ತನಿಷಾ ಕುಪ್ಪಂಡ ವಿರುದ್ಧವೇ ತಿರುಗಿ ಬಿದ್ದಿರುವುದು ಅಚ್ಚರಿಗೆ ಕಾರಣ ಆಗಿದೆ. 8ನೇ ವಾರದಲ್ಲಿ ತನಿಷಾಗೆ ಪೆಟ್ಟಾಗಿತ್ತು. ಆದರೂ ಕೂಡ ನಾಮಿನೇಷನ್​ ವಿಚಾರದಲ್ಲಿ ತಾವು ಮಾನವೀಯತೆ ತೋರಿಸಲು ಸಾಧ್ಯವಿಲ್ಲ ಎಂದು ವರ್ತೂರು ಸಂತೋಷ್​ ಅವರು ಹೇಳಿದ್ದಾರೆ.

‘ತನಿಷಾಗೆ ಇನ್ನೂ ಕಾಲು ನೋವು ಇದೆ. ಹಾಗಾಗಿ ಅವಳನ್ನೇ ಸೇವ್​ ಮಾಡಿ’ ಎಂದು ಕಾರ್ತಿಕ್ ಮಹೇಶ್​ ಅವರು ಕ್ಯಾಪ್ಟನ್​ ಆದ ಸ್ನೇಹಿತ್​ ಬಳಿ ಕೇಳಿಕೊಂಡರು. ಅದಕ್ಕೆ ವರ್ತೂರು ಸಂತೋಷ್​ ಒಪ್ಪಿಕೊಳ್ಳಲಿಲ್ಲ. ‘ತ್ಯಾಗಮೂರ್ತಿಗಳಾಗಲು ನಾವು ಇಲ್ಲಿಗೆ ಬಂದಿಲ್ಲ. ತನಿಷಾ ಅವರನ್ನು ನಾನು ಬೇಕಂತಲೇ ಹೋಗಿ ತಳ್ಳಿಲ್ಲ. ಅದಕ್ಕಾಗಿ ತನಿಷಾಗೆ ಇನ್ನೊಂದು ಚಾನ್ಸ್​ ಸಿಗಲಿ ಅಂತ ನಾನು ಕೇಳಲ್ಲ. ನಾವು ಮಾನವೀಯತೆ ಅಂತ ಹೋದರೆ ನಮ್ಮ ಹಿಂದೆ ಅಲ್ಲ.. ಮುಂದೆಯೇ ಹಳ್ಳ ತೋಡಿರುತ್ತಾರೆ’ ಎಂದು ವರ್ತೂರು ಸಂತೋಷ್​ ಹೇಳಿದ್ದಾರೆ.

ಇದನ್ನೂ ಓದಿ: ವರ್ತೂರು ಸಂತೋಷ್​ ಜೈಲಿನಿಂದ ಎಸ್ಕೇಪ್​ ಆಗಿದ್ದು ಹೇಗೆ? ಇಲ್ಲಿದೆ ವಿಡಿಯೋ

ವರ್ತೂರು ಸಂತೋಷ್​ ಅವರ ಈ ಮಾತಿನಿಂದ ನಮ್ರತಾ ಗೌಡ ಅವರಿಗೆ ಸಖತ್​ ಖುಷಿ ಆಗಿದೆ. ಅವರು ಚಪ್ಪಾಳೆ ಹೊಡೆದು ಬೆಂಬಲ ಸೂಚಿಸಿದ್ದಾರೆ. ಆದರೆ ತನಿಷಾ ಕುಪ್ಪಂಡ ಅವರಿಗೆ ತೀವ್ರ ಅಸಮಾಧಾನ ಆಗಿದೆ. ಅದಕ್ಕೆ ಅವರು ಕೂಡಲೇ ತಿರುಗೇಟು ನೀಡಿದ್ದಾರೆ. ‘ಈಗ ಒಂದು ವಾರದಿಂದ ಮಾತನಾಡುತ್ತಿರುವ ವರ್ತೂರು ಸಂತೋಷ್​ ಅವರು ಮೊದಲ ದಿನದಿಂದಲೇ ಮಾತನಾಡಿದ್ದರೆ ನಾನು ಈ ಮಾತನ್ನು ಮೆಚ್ಚಿಕೊಳ್ಳುತ್ತಿದ್ದೆ’ ಎಂದು ತನಿಷಾ ಹೇಳಿದ್ದಾರೆ. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಡಿಸೆಂಬರ್​ 4ರಂದು ರಾತ್ರಿ 9.30ಕ್ಕೆ ಈ ಸಂಚಿಕೆ ಪ್ರಸಾರ ಆಗಲಿದೆ. ‘ಜಿಯೋ’ ಸಿನಿಮಾದಲ್ಲಿ ಫ್ರೀ ಆಗಿ ಲೈವ್​ ನೋಡಲು ಅವಕಾಶ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ