AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೃಷ್ಣ ಇಲ್ಲದ ಮಹಾಭಾರತ, ಸುದೀಪ್ ಇಲ್ಲದ ಬಿಗ್ ಬಾಸ್ ಎರಡೂ ಒಂದೇ’; ಎಲ್ಲರದ್ದೂ ಒಂದೇ ಅಭಿಪ್ರಾಯ

ಸುದೀಪ್ ಅವರು ಈ ವರೆಗೆ ‘ಬಿಗ್ ಬಾಸ್​’ನ 10 ಟಿವಿ ಸೀಸನ್​ಗಳನ್ನು ನಡೆಸಿಕೊಟ್ಟಿದ್ದು, 11ನೇ ಸೀಸನ್​ನ ನಿರೂಪಣೆ ನಡೆಯುತ್ತಿದೆ. ಈಗ ಸುದೀಪ್ ಅವರು ಬಿಗ್ ಬಾಸ್ ತೊರೆಯೋ ನಿರ್ಧಾರ ಮಾಡಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿಲ್ಲ. ಅವರನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಎಲ್ಲರೂ ಹೇಳಿದ್ದಾರೆ.

‘ಕೃಷ್ಣ ಇಲ್ಲದ ಮಹಾಭಾರತ, ಸುದೀಪ್ ಇಲ್ಲದ ಬಿಗ್ ಬಾಸ್ ಎರಡೂ ಒಂದೇ’; ಎಲ್ಲರದ್ದೂ ಒಂದೇ ಅಭಿಪ್ರಾಯ
ಕಿಚ್ಚ ಸುದೀಪ್
ರಾಜೇಶ್ ದುಗ್ಗುಮನೆ
|

Updated on: Oct 14, 2024 | 2:23 PM

Share

ಮಹಾಭಾರತದಲ್ಲಿ ಕೃಷ್ಣನ ಪಾತ್ರದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಇಡೀ ಮಹಭಾರತಕ್ಕೆ ಅವರದ್ದೇ ನೇತೃತ್ವ. ಅವರು ಇಲ್ಲದೆ ಮಹಾಭಾರತವನ್ನು ಊಹಿಸಿಕೊಳ್ಳುವುದು ಕಷ್ಟ. ಈಗ ಸುದೀಪ್ ಅವರು ‘ಬಿಗ್ ಬಾಸ್’ ತೊರೆದ ಬಗ್ಗೆಯೂ ಇದೇ ರೀತಿಯ ಅಭಿಪ್ರಾಯ ವ್ಯಕ್ತವಾಗಿದೆ. ‘ಸುದೀಪ್ ಇಲ್ಲದ ಬಿಗ್ ಬಾಸ್​ನ ಊಹಿಸಿಕೊಳ್ಳೋದು ಕಷ್ಟ’ ಎಂದು ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ. ಬೇರೆ ಹೀರೋಗಳು ನಿರೂಪಣೆಗೆ ಬಂದರೆ ಟಿಆರ್​ಪಿ ತಗ್ಗಲಿದೆ ಎನ್ನುವ ಅಭಿಪ್ರಾಯ ಹೊರಹಾಕಿದ್ದಾರೆ.

ಮಾಜಿ ಸ್ಪರ್ಧಿಗಳಾದ ಪ್ರಶಾಂತ್ ಸಂಬಂರ್ಗಿ, ವಿನಯ್ ಗೌಡ ಅವರು ಈ ಬಗ್ಗೆ ಮಾತನಾಡಿದ್ದು, ‘ಕೃಷ್ಣ ಇಲ್ಲದ ಮಹಾಭಾರತ ಹಾಗೂ ಸುದೀಪ್ ಇಲ್ಲದ ಬಿಗ್ ಬಾಸ್ ಎರಡೂ ಒಂದೇ’ ಎಂದು ಅವರು ಹೇಳಿದ್ದಾರೆ. ಸುದೀಪ್ ಮಗಳು ಸಾನ್ವಿ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ‘ಅಪ್ಪಾ ನಿಮ್ಮ ಜರ್ನಿ ಬಗ್ಗೆ ಖುಷಿ ಇದೆ. ನಿಮ್ಮಂತೆ ಬೇರೆ ಯಾರಿಗೂ ಮಾಡಲು ಸಾಧ್ಯವಿಲ್ಲ. ನಿಮ್ಮನ್ನು ಆ ಸ್ಟೇಜ್​ ಮೇಲೆ ನೋಡುವುದನ್ನು ಮಿಸ್ ಮಾಡಿಕೊಳ್ಳುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ: ‘ಬಿಗ್ ಬಾಸ್​’ ಹೊಸ ಸೀಸನ್​ಗೆ ಸುದೀಪ್ ಪಡೆದ ಸಂಭಾವನೆ ಎಷ್ಟು? ಮೊದಲು ಎಷ್ಟಿತ್ತು?

ಅನೇಕರು ಕಲರ್ಸ್ ಕನ್ನಡ ವಾಹಿನಿಯ ವಿರುದ್ಧ ಕಿಡಿಕಾರಿದ್ದಾರೆ. ‘ಬಿಗ್ ಬಾಸ್​ನಿಂದ ಸುದೀಪ್ ಅವರನ್ನು ಕಳೆದುಕೊಂಡ ನೀವು ಸಾಕಷ್ಟು ದೊಡ್ಡ ನಷ್ಟ ಅನುಭವಿಸುತ್ತಿರಿ’ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಸುದೀಪ್​ಗೆ ಅವಮಾನ ಆಗಿದೆ ಎಂದು ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಟ್ವೀಟ್ ಮಾಡಿದ್ದರು. ಇದು ಕೂಡ ಸಾಕಷ್ಟು ಶಾಕಿಂಗ್ ಎನಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು