AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು ಮೇಲೆ ಹಲ್ಲೆ ಮಾಡಿದ್ರಾ ಸೌಂದರ್ಯಾ? ಬಿಗ್ ಬಾಸ್ ಮಾಡಿದ ನಿರ್ಧಾರ ಏನು?

ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ವೇಳೆ ಮಂಜು ಹಾಗೂ ಸೌಂದರ್ಯಾ ನಡುವೆ ತೀವ್ರ ಕಿತ್ತಾಟ ನಡೆದು, ತಳ್ಳಾಟದ ಹಂತಕ್ಕೆ ತಲುಪಿದೆ. ಸೌಂದರ್ಯಾ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಮಂಜು ಆರೋಪಿಸಿದ್ದಾರೆ. ನಿಯಮ ಉಲ್ಲಂಘನೆಯಾಗಿದ್ದರೂ ಆಟದ ಭರದಲ್ಲಿ ನಡೆದಿದ್ದರಿಂದ ಸೌಂದರ್ಯಾಗೆ ವೀಕೆಂಡ್‌ನಲ್ಲಿ ಕಿಚ್ಚ ಸುದೀಪ್ ವಾರ್ನಿಂಗ್ ಕೊಡುವ ಸಾಧ್ಯತೆಯಿದೆ. ಬಿಗ್ ಬಾಸ್ ನಿರ್ಧಾರಕ್ಕೆ ವೀಕ್ಷಕರು ಕಾಯುತ್ತಿದ್ದಾರೆ.

ಮಂಜು ಮೇಲೆ ಹಲ್ಲೆ ಮಾಡಿದ್ರಾ ಸೌಂದರ್ಯಾ? ಬಿಗ್ ಬಾಸ್ ಮಾಡಿದ ನಿರ್ಧಾರ ಏನು?
ಸೌಂದರ್ಯಾ ಶೆಟ್ಟಿ- ಮಂಜು
ರಾಜೇಶ್ ದುಗ್ಗುಮನೆ
|

Updated on: Sep 15, 2026 | 6:34 AM

Share

ಮುಖ್ಯಾಂಶಗಳು

  • ಬಿಗ್ ಬಾಸ್ ಮನೆಯಲ್ಲಿ ನಿಯಮ ಉಲ್ಲಂಘನೆ
  • ಸೌಂದರ್ಯಾಗೆ ಎವಿಕ್ಷನ್ ಭೀತಿ?
  • ಆಟದ ಭರದಲ್ಲಿ ನಡೆದ ತಳ್ಳಾಟ

ಬಿಗ್ ಬಾಸ್ ಮನೆ ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ. ಬಿಗ್ ಬಾಸ್ ಕೊಟ್ಟ ಟಾಸ್ಕ್ ಒಂದರಲ್ಲಿ ಮಂಜು ಹಾಗೂ ಸೌಂದರ್ಯಾ ನಡುವೆ ಕಿತ್ತಾಟ ನಡೆದಿದೆ. ಇಬ್ಬರೂ ಕೈ ಕೈ ಮಿಲಾಯಿಸಿಕೊಳ್ಳುವ ಹಂತ ತಲುಪಿದ್ದಾರೆ. ಸೌಂದರ್ಯಾ ಅವರು ಕೋಪ ತಾಳಲಾರದೆ ಮಂಜುನ ತಳ್ಳಿದ್ದಾರೆ. ಇದರಿಂದ ಸಿಟ್ಟಾದ ಮಂಜು, ‘ಸೌಂದರ್ಯಾ ಅವರು ನನಗೆ ಹೊಡೆದಿದ್ದಾರೆ’ ಎಂಬ ಗಂಭೀರ ಆರೋಪವನ್ನು ಮಾಡಿದ್ದಾರೆ. ಬಿಗ್ ಬಾಸ್ ಈ ವಿಷಯದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದು ಇಂದು ತಿಳಿಯಲಿದೆ.

ಬಿಗ್ ಬಾಸ್​ನ ಮೂಲ ನಿಯಮ ಎಂದರೆ ಯಾರೊಬ್ಬರೂ ಯಾರ ಮೇಲೆಯೂ ಹಲ್ಲೆ ನಡೆಸುವಂತಿ್ಲ್ಲ. ಹಾಗೆ ಹೊಡೆದರೆ ಅವರನ್ನು ಮನೆಯಿಂದ ಹೊರಕ್ಕೆ ಕಳುಹಿಸಲಾಗುತ್ತದೆ. ಈ ರೀತಿ ಹೊಡೆದು ದೊಡ್ಮನೆಯಿಂದ ಹೊರ ಹೋದವರು ಅನೇಕರಿದ್ದಾರೆ. ಆದರೆ, ಸೌಂದರ್ಯಾ ವಿಷಯದಲ್ಲಿ ಆ ರೀತಿ ಮಾಡುವುದು ಅನುಮಾನ ಎನ್ನಲಾಗುತ್ತಿದೆ. ಅವರಿಗೆ ಸುದೀಪ್ ಅವರು ವೀಕೆಂಡ್​​ನಲ್ಲಿ ಒಂದು ವಾರ್ನಿಂಗ್ ಕೊಟ್ಟು ಬಿಡಬಹುದು ಎನ್ನಲಾಗುತ್ತಿದೆ.

ಸೌಂದರ್ಯಾ ಅವರನ್ನು ಹೊರಕ್ಕೆ ಕಳುಹಿಸದೇ ಇರಲು ಒಂದು ಕಾರಣವೂ ಇದೆ. ಇಲ್ಲಿ ಸೌಂದರ್ಯಾ ತಳ್ಳಿದ್ದು ಆಟದ ಭರದಲ್ಲಿ. ಹೀಗಾಗಿ, ಇದಕ್ಕೆ ಕ್ಷಮೆ ಇದ್ದೇ ಇದೆ. ಈ ಮೊದಲು ಬಿಗ್ ಬಾಸ್ ಮನೆಯಲ್ಲಿ ಭವ್ಯಾ ಗೌಡ ಕೂಡ ಇದೇ ರೀತಿಯ ತಪ್ಪನ್ನು ಮಾಡಿದ್ದರು. ಅವರಿಗೆ ವಾರ್ನಿಂಗ್ ಕೊಟ್ಟು ಬಿಡಲಾಗಿತ್ತು. ಈಗಲೂ ಸೌಂದರ್ಯಾಗೆ ಹಾಗೆಯೇ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಮತ್ತೆ ಬಿಗ್ ಬಾಸ್ ಮನೆಗೆ ಬರಲ್ಲ ಓಂ ಪ್ರಕಾಶ್ ರಾವ್; ಕಠಿಣ ನಿರ್ಧಾರ ಮಾಡಿದ ನಿರ್ದೇಶಕ

ನಿಜಕ್ಕೂ ಆಗಿದ್ದೇನು?

ಬಿಗ್ ಬಾಸ್ ಮನೆಯಲ್ಲಿ ಗೇಮ್ ಒಂದನ್ನು ನೀಡಲಾಗಿತ್ತು. ಕೆಂಪು ಬಣ್ಣದ ವಸ್ತುಗಳನ್ನು ಸೂಚಿಸಿದ ಸ್ಥಳದಿಂದ ತೆಗೆದುಕೊಂಡು ಬರಬೇಕು.ಆ ಬಳಿಕ ಅದನ್ನು ಕಾಯ್ದುಕೊಳ್ಳಬೇಕು. ಈ ರೀತಿ ಕಾಯ್ದುಕೊಳ್ಳುವಾಗ ಮಂಜು ಅವರು ಸೌಂದರ್ಯಾ ಅವರಿಂದ ವಸ್ತುಗಳನ್ನು ಕಸಿದುಕೊಳ್ಳುವ ಪ್ರಯತ್ನ ಮಾಡಿದರು. ಈ ವೇಳೆ ತಳ್ಳಾಟ ನಡೆದಿದೆ. ಆ ಬಳಿಕ ಮಂಜು ಅವರನ್ನು ಕನ್​ಫೆಷನ್​ ರೂಂಗೆ ಕರೆಸಿ ಸಮಾಧಾನ ಮಾಡುವ ಕೆಲಸ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ