ವೀಕೆಂಡ್​ನಲ್ಲಿ ಸುದೀಪ್ ಬರ್ತಾರಾ ಅಥವಾ ಇಲ್ಲವಾ? ಸೂಚನೆ ಕೊಟ್ಟ ಬಿಗ್ ಬಾಸ್

ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರ ನಿಧನದ ನಂತರ ಬಿಗ್ ಬಾಸ್ ಕನ್ನಡದಲ್ಲಿ ಅವರ ಭಾಗವಹಿಸುವಿಕೆ ಚರ್ಚೆಯ ವಿಷಯವಾಗಿದೆ. ತಾಯಿಯ ಅಗಲಿಕೆಯ ನೋವಿನ ನಂತರ ಅವರು ಈ ವಾರದ ಎಪಿಸೋಡ್‌ಗೆ ಹಾಜರಾಗುತ್ತಾರೆಯೇ ಎಂಬುದು ಅನಿಶ್ಚಿತವಾಗಿದೆ. ಆದರೆ, ದೀಪಾವಳಿ ಆಚರಣೆಯ ಹಿನ್ನೆಲೆಯಲ್ಲಿ ವಿಶೇಷ ಎಪಿಸೋಡ್‌ಗೆ ಸುದೀಪ್ ಅವರ ಆಗಮನದ ನಿರೀಕ್ಷೆ ಇದೆ.

ವೀಕೆಂಡ್​ನಲ್ಲಿ ಸುದೀಪ್ ಬರ್ತಾರಾ ಅಥವಾ ಇಲ್ಲವಾ? ಸೂಚನೆ ಕೊಟ್ಟ ಬಿಗ್ ಬಾಸ್
ಸುದೀಪ್

Updated on: Nov 01, 2024 | 7:35 AM

ಕಿಚ್ಚ ಸುದೀಪ್ ಅವರು ತಮ್ಮ ತಾಯಿಯನ್ನು ಇತ್ತೀಚೆಗೆ ಕಳೆದುಕೊಂಡರು. ಅವರ ತಾಯಿ ಸರೋಜಾ ಅವರು ನಿಧನ ಹೊಂದಿದರು. ಎರಡು ವಾರಗಳ ಹಿಂದೆ ಬಿಗ್ ಬಾಸ್ ನಡೆಸಿಕೊಡುವಾಗ ತಾಯಿ ಅನಾರೋಗ್ಯದ ಬಗ್ಗೆ ಅವರಿಗೆ ಮಾಹಿತಿ ಸಿಕ್ಕಿತ್ತು. ಶನಿವಾರದ ಎಪಿಸೋಡ್ ನಡೆಸಿಕೊಟ್ಟು ಆ ಬಳಿಕ ಅವರು ದೊಡ್ಮನೆಯಿಂದ ಹೊರ ಬಂದರು. ತಾಯಿ ಕಳೆದುಕೊಂಡ ನೋವಲ್ಲಿ ಕಳೆದ ವಾರ ಅವರು ಬಿಗ್ ಬಾಸ್ ನಡೆಸಿಕೊಟ್ಟಿರಲಿಲ್ಲ. ಈ ವಾರ ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡಲು ಬರುತ್ತಾರೋ ಅಥವಾ ಇಲ್ಲವೋ ಎನ್ನುವ ಪ್ರಶ್ನೆ ಬಂದಿತ್ತು. ಅದಕ್ಕೆ ಬಿಗ್ ಬಾಸ್ ಪರೋಕ್ಷವಾಗಿ ಉತ್ತರ ನೀಡಿದ್ದಾರೆ.

ಎಲ್ಲ ಕಡೆಗಳಲ್ಲಿ ದೀಪಾವಳಿ ಆಚರಣೆ ಜೋರಾಗಿದೆ. ಶನಿವಾರವೂ (ನವೆಂಬರ್ 2) ದೀಪಾವಳಿ ಹಬ್ಬ ಆಚರಣೆ ಇರುತ್ತದೆ. ಹೀಗಾಗಿ ಮನೆಯವರಿಗೆ ಗ್ರ್ಯಾಂಡ್ ಆಗಿ ರೆಡಿ ಆಗೋಕೆ ಅವಕಾಶ ಇರುತ್ತದೆ. ಇದಕ್ಕೆ ಸಂಬಂಧಿಸಿದಂತೆ ಚಟುವಟಿಕೆ ಒಂದನ್ನು ಬಿಗ್ ಬಾಸ್ ನೀಡಿದ್ದರು.

ಚಟುವಟಿಕೆ​ ಪ್ರಕಾರ ಖಾಸಗಿ ಬಟ್ಟೆ ಕಂಪನಿಯೊಂದರ ಕ್ಯಾಟ್​ಲಾಗ್​ನ ಕಳುಹಿಸಿಕೊಟ್ಟಿದ್ದರು ಬಿಗ್ ಬಾಸ್. ಅವರಿಷ್ಟದ ಬಟ್ಟೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ಇದನ್ನು ವಾರಾಂತ್ಯದ ಎಪಿಸೋಡ್​ಗೆ ಕಳುಹಿಸಿಕೊಡುವುದಾಗಿ ಸೂಚನೆ ಬಂದಿದೆ. ಇಷ್ಟು ಗ್ರ್ಯಾಂಡ್ ಆಗಿ ವೀಕೆಂಡ್ ಎಪಿಸೋಡ್ ನಡೆಯಲಿದೆ ಎಂದರೆ ಸುದೀಪ್ ಬಂದೇ ಬರುತ್ತಾರೆ ಅನ್ನೋದು ಮನೆಯ ಸದಸ್ಯರ ನಂಬಿಕೆ.

ಕಳೆದ ವೀಕೆಂಡ್​ನಲ್ಲಿ ಯೋಗರಾಜ್ ಭಟ್ ಹಾಗೂ ಸೃಜನ್ ಲೋಕೇಶ್ ಅವರು ದೊಡ್ಮನೆ ಒಳಗೆ ಬಂದಿದ್ದರು. ಈ ಸಂದರ್ಭದಲ್ಲಿ ಸಾಕಷ್ಟು ಫನ್ ಚಟುವಟಿಕೆಗಳು ನಡೆದಿದ್ದವು. ಈ ಬಾರಿ ಸುದೀಪ್ ಅವರೇ ಬರಲಿ ಎಂದು ವೀಕ್ಷಕರು ಹಾಗೂ ಮನೆಯ ಸದಸ್ಯರು ಬಯಸುತ್ತಿದ್ದಾರೆ.

ಇದನ್ನೂ ಓದಿ: ‘ಆ ಎಪಿಸೋಡ್ ನಡೆಸಿಕೊಡದಿದ್ದರೆ ಸುದೀಪ್ ಕೊನೆಯದಾಗಿ ತಾಯಿ ಜೊತೆ ಮಾತನಾಡುತ್ತಿದ್ದರು’; ಕಣ್ಣೀರಲ್ಲಿ ಮನೆ ಮಂದಿ

ಸುದೀಪ್ ಅವರ ತಾಯಿ ನಿಧನದ ವಿಚಾರ ಮನೆಯಲ್ಲಿ ಇರುವವರಿಗೆ ಗೊತ್ತಾಗಿದೆ. ಯೋಗರಾಜ್ ಭಟ್ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದು ಮನೆಯ ಸದಸ್ಯರಿಗೂ ದುಃಖ ತಂದಿದೆ. ಈ ವಾರ ಸುದೀಪ್ ತಾಯಿ ನೆನಪಲ್ಲಿ ಮೌನಚರಣೆ ನಡೆಸೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us