AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂನ ಭೇಟಿ ಮಾಡಿದ ಕಾರ್ತಿಕ್ ಮಹೇಶ್; ‘ಒಳ್ಳೆಯದಾಗಲಿ’ ಎಂದು ಹಾರೈಸಿದ ಸಿದ್ದರಾಮಯ್ಯ

‘ಬಿಗ್ ಬಾಸ್​’ ಗೆದ್ದ ಬಳಿಕ ಕಾರ್ತಿಕ್ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಕಿರುತೆರೆ ಹಾಗೂ ಹಿರಿತೆರೆಯಲ್ಲಿ ನಟಿಸಿರುವ ಅವರು ‘ಬಿಗ್ ಬಾಸ್’ಗೆ ಆಗಮಿಸಿದರು. ಅಲ್ಲಿ ಟಾಸ್ಕ್ ಹಾಗೂ ಮನರಂಜನೆ ಮೂಲಕ ಎಲ್ಲರ ಗಮನ ಸೆಳೆದರು. ಅವರು ಕಪ್ ಗೆದ್ದಿದ್ದಾರೆ. ಈಗ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದಾರೆ.

ಸಿಎಂನ ಭೇಟಿ ಮಾಡಿದ ಕಾರ್ತಿಕ್ ಮಹೇಶ್; ‘ಒಳ್ಳೆಯದಾಗಲಿ’ ಎಂದು ಹಾರೈಸಿದ ಸಿದ್ದರಾಮಯ್ಯ
ಕಾರ್ತಿಕ್ ಮಹೇಶ್-ಸಿದ್ದರಾಮಯ್ಯ
Mangala RR
| Edited By: |

Updated on:Feb 14, 2024 | 12:17 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ವಿನ್ ಆಗುವ ಮೂಲಕ ಕಾರ್ತಿಕ್ ಮಹೇಶ್ ಖ್ಯಾತಿ ಹೆಚ್ಚಾಗಿದೆ. ಅವರು ನಾನಾ ಕಡೆಗಳಿಗೆ ತೆರಳಿ ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ. ಇಂದು (ಫೆಬ್ರವರಿ 14) ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಸಿಎಂ ನಿವಾಸದಲ್ಲಿ ಈ ಭೇಟಿ ನಡೆದಿದೆ. ಸಿದ್ದರಾಮಯ್ಯ ಅವರು ಕಾರ್ತಿಕ್ ಅವರಿಗೆ ಶುಭ ಹಾರೈಸಿದ್ದಾರೆ. ಇದರಿಂದ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ.

‘ಬಿಗ್ ಬಾಸ್​’ನಿಂದ ಕಾರ್ತಿಕ್ ಮಹೇಶ್​ಗೆ ಸಿಕ್ಕ ಜನಪ್ರಿಯತೆ ತುಂಬಾನೇ ದೊಡ್ಡದು. ಕಿರುತೆರೆ ಹಾಗೂ ಹಿರಿತೆರೆಯಲ್ಲಿ ನಟಿಸಿರುವ ಅವರು ‘ಬಿಗ್ ಬಾಸ್’ಗೆ ಬಂದರು. ಇಲ್ಲಿ ಆಟ ಹಾಗೂ ಮನರಂಜನೆ ಮೂಲಕ ಎಲ್ಲರ ಗಮನ ಸೆಳೆದರು. ಅವರು ಕಪ್ ಗೆದ್ದಿದ್ದಾರೆ. ಹೀಗಾಗಿ ಅವರು ನಾನಾ ಸೆಲೆಬ್ರಿಟಿಗಳನ್ನು ಹಾಗೂ ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ. ಈಗ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದೆ.

ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾರ್ತಿಕ್ ಆಶೀರ್ವಾದ ಪಡೆದಿದ್ದಾರೆ. ‘ಒಳ್ಳೆದಾಗಲಿ ಕಣಯ್ಯ. ಸಿನಿಮಾ ರಂಗದಲ್ಲಿ ಒಳ್ಳೆಯ ಹೆಸರು ಮಾಡು’ ಎಂದು ಹಾರೈಸಿದ್ದಾರೆ. ಈ ವೇಳೆ ಉಪ ಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾ.ಮ ಹರೀಶ್. ಮತ್ತು ಉಲ್ಲಾಸ್ ಗೌಡ ಉಪಸ್ಥಿತರಿದ್ದರು.

ಇದನ್ನೂ ಓದಿ: ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ ಕಾರ್ತಿಕ್ ಮಹೇಶ್

ಕಾರ್ತಿಕ್ ಮಹೇಶ್ ಅವರು ಈ ಮೊದಲು ‘ಡೊಳ್ಳು’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಸಿಕ್ಕಿದೆ. ಬಿಗ್ ಬಾಸ್ ಮನೆಯಲ್ಲಿ ಅವರು ತಮ್ಮ ಅಸಲಿ ಆಟ ತೋರಿಸಿದ್ದಾರೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ 4.6 ಲಕ್ಷ ಜನರು ಹಿಂಬಾಲಿಸುತ್ತಾರೆ. ಅವರಿಗೆ ಬಿಗ್ ಬಾಸ್ ಗೆದ್ದಿದ್ದಕ್ಕೆ 50 ಲಕ್ಷ ರೂಪಾಯಿ ಜೊತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್ ಹಾಗೂ ಕಾರು ಉಡುಗೊರೆಯಾಗಿ ಸಿಕ್ಕಿತ್ತು. ಇತ್ತೀಚೆಗೆ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:15 pm, Wed, 14 February 24

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ