AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಿಂದ ಬಂದ ನಾಲ್ಕು ದಿನಗಳ ಬಳಿಕ ಸಿಹಿ ಸುದ್ದಿ ಕೊಟ್ಟ ಕಾರ್ತಿಕ್ ಮಹೇಶ್

ಬಿಗ್ ಬಾಸ್ ಜನವರಿ 28ರಂದು ಕೊನೆ ಆಯಿತು. ಫಿನಾಲೆಯಲ್ಲಿ ಕಾರ್ತಿಕ್ ಗೆಲುವು ಕಂಡಿದ್ದಾರೆ. ಈಗ ಅವರು ಹೊಸ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಲೈವ್ ಬರೋ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವಿಚಾರ ಫ್ಯಾನ್ಸ್​ಗೆ ಖುಷಿ ನೀಡಿದೆ.

ಬಿಗ್ ಬಾಸ್​ನಿಂದ ಬಂದ ನಾಲ್ಕು ದಿನಗಳ ಬಳಿಕ ಸಿಹಿ ಸುದ್ದಿ ಕೊಟ್ಟ ಕಾರ್ತಿಕ್ ಮಹೇಶ್
ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on: Feb 01, 2024 | 2:48 PM

Share

ಕಾರ್ತಿಕ್ ಮಹೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ (BBK 10) ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆಗಿದ್ದ ಅವರು ಈಗ ‘ಬಿಗ್ ಬಾಸ್’ ವಿನ್ ಆಗಿ ಜನಪ್ರಿಯತೆ ಪಡೆದಿದ್ದಾರೆ. 50 ಲಕ್ಷ ರೂಪಾಯಿ ಜೊತೆ ಕಾರು ಹಾಗೂ ಬೈಕ್ ಅವರಿಗೆ ಗಿಫ್ಟ್ ಆಗಿ ಸಿಕ್ಕಿದೆ. ಬಿಗ್ ಬಾಸ್ ಮನೆಯಿಂದ ಹೊರ ಬಂದು ನಾಲ್ಕು ದಿನ ಕಳೆದಿದೆ. ಈ ಸಂದರ್ಭದಲ್ಲಿ ಅವರು ಫ್ಯಾನ್ಸ್​ಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್ ಖುಷಿಯಾಗಿದ್ದಾರೆ.

ಜನವರಿ 28ರಂದು ಬಿಗ್ ಬಾಸ್ ಕೊನೆ ಆಯಿತು. ಫಿನಾಲೆಯಲ್ಲಿ ಕಾರ್ತಿಕ್ ಗೆಲುವು ಕಂಡರು. ಈಗ ಅವರು ಹೊಸ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಲೈವ್ ಬರೋ ಬಗ್ಗೆ ಮಾಹಿತಿ ನೀಡಿದ್ದಾರೆ. karthi_mahesh ಇನ್​ಸ್ಟಾಗ್ರಾಮ್ ಖಾತೆ ಮೂಲಕ ಇಂದು (ಫೆಬ್ರವರಿ 1) ಸಂಜೆ ಆರು ಗಂಟೆಗೆ ಲೈವ್ ಬರೋದಾಗಿ ಅವರು ಮಾಹಿತಿ ನೀಡಿದ್ದಾರೆ. ಈ ವೇಳೆ ಅಭಿಮಾನಿಗಳು ತಮ್ಮ ಪ್ರಶ್ನೆಗಳನ್ನು ಅವರ ಮುಂದೆ ಇಡಬಹುದು. ಇದಕ್ಕೆ ಕಾರ್ತಿಕ್ ಉತ್ತರ ನೀಡುತ್ತಾರೆ.

ಕಾರ್ತಿಕ್ ಮಾಡಿರೋ ಪೋಸ್ಟ್..

ಬಿಗ್ ಬಾಸ್ ಪೂರ್ಣಗೊಂಡ ಬೆನ್ನಲ್ಲೇ ರೀಯೂನಿಯನ್ ಆಗಿತ್ತು. ಈ ವೇಳೆ ನಮ್ರತಾ ಗೌಡ, ವಿನಯ್ ಗೌಡ, ಕಾರ್ತಿಕ್ ಮಹೇಶ್ ಹಾಗೂ ಸಂಗೀತಾ ಶೃಂಗೇರಿ ಒಂದೆಡೆ ಸೇರಿದ್ದರು. ಆದರೆ, ಎಲ್ಲಿಯೂ ಕಾರ್ತಿಕ್ ಹಾಗೂ ಸಂಗೀತಾ ಒಟ್ಟಿಗೆ ಇರೋ ಫೋಟೋ ಶೇರ್ ಮಾಡಿಕೊಂಡಿಲ್ಲ. ಬಿಗ್ ಬಾಸ್ ಮನೆಯಲ್ಲಿ ಕಾರ್ತಿಕ್ ಹಾಗೂ ಸಂಗೀತಾ ಮಧ್ಯೆ ಕಿರಿಕ್ ಆಗಿತ್ತು. ಇದು ಹೊರ ಬಂದ ಬಳಿಕವೂ ಮುಂದುವರಿದಂತೆ ಕಾಣುತ್ತಿದೆ. ಈ ಕಾರಣದಿಂದಲೇ ಇಬ್ಬರೂ ಒಟ್ಟಿಗೆ ಪೋಸ್ ಕೊಟ್ಟಿಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ಲೈವ್​ನಲ್ಲಿ ಪ್ರಶ್ನೆ ಎದುರಾಗೋ ಸಾಧ್ಯತೆ ಇದೆ.

ಇದನ್ನೂ ಓದಿ: ‘ಬಿಗ್ ಬಾಸ್ ಮನೆ ಈಗಲೂ ನಮ್ಮನ್ನು ಕಾಡುತ್ತದೆ’; ಹೊರಗೆ ಬಂದು ಅನುಭವ ಹೇಳಿಕೊಂಡ ಸಂಗೀತಾ ಶೃಂಗೇರಿ

ಈ ಬಾರಿ ಬಿಗ್ ಬಾಸ್​ನಲ್ಲಿ ವಿನಯ್ ಗೌಡ, ಸಂಗೀತಾ ಶೃಂಗೇರಿ, ನಮ್ರತಾ ಗೌಡ ಅವರಂಥ ಘಟಾನುಘಟಿ ಸ್ಪರ್ಧಿಗಳು ಆಗಮಿಸಿದ್ದರು. ಅವರನ್ನು ಹಿಂದಿಕ್ಕಿ ಕಾರ್ತಿಕ್ ಗೆಲುವು ಕಂಡಿದ್ದಾರೆ. ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ