ಬಿಗ್ ಬಾಸ್​ನಿಂದ ಬಂದ ನಾಲ್ಕು ದಿನಗಳ ಬಳಿಕ ಸಿಹಿ ಸುದ್ದಿ ಕೊಟ್ಟ ಕಾರ್ತಿಕ್ ಮಹೇಶ್

ಬಿಗ್ ಬಾಸ್ ಜನವರಿ 28ರಂದು ಕೊನೆ ಆಯಿತು. ಫಿನಾಲೆಯಲ್ಲಿ ಕಾರ್ತಿಕ್ ಗೆಲುವು ಕಂಡಿದ್ದಾರೆ. ಈಗ ಅವರು ಹೊಸ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಲೈವ್ ಬರೋ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವಿಚಾರ ಫ್ಯಾನ್ಸ್​ಗೆ ಖುಷಿ ನೀಡಿದೆ.

ಬಿಗ್ ಬಾಸ್​ನಿಂದ ಬಂದ ನಾಲ್ಕು ದಿನಗಳ ಬಳಿಕ ಸಿಹಿ ಸುದ್ದಿ ಕೊಟ್ಟ ಕಾರ್ತಿಕ್ ಮಹೇಶ್
ಕಾರ್ತಿಕ್
Follow us
|

Updated on: Feb 01, 2024 | 2:48 PM

ಕಾರ್ತಿಕ್ ಮಹೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ (BBK 10) ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆಗಿದ್ದ ಅವರು ಈಗ ‘ಬಿಗ್ ಬಾಸ್’ ವಿನ್ ಆಗಿ ಜನಪ್ರಿಯತೆ ಪಡೆದಿದ್ದಾರೆ. 50 ಲಕ್ಷ ರೂಪಾಯಿ ಜೊತೆ ಕಾರು ಹಾಗೂ ಬೈಕ್ ಅವರಿಗೆ ಗಿಫ್ಟ್ ಆಗಿ ಸಿಕ್ಕಿದೆ. ಬಿಗ್ ಬಾಸ್ ಮನೆಯಿಂದ ಹೊರ ಬಂದು ನಾಲ್ಕು ದಿನ ಕಳೆದಿದೆ. ಈ ಸಂದರ್ಭದಲ್ಲಿ ಅವರು ಫ್ಯಾನ್ಸ್​ಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್ ಖುಷಿಯಾಗಿದ್ದಾರೆ.

ಜನವರಿ 28ರಂದು ಬಿಗ್ ಬಾಸ್ ಕೊನೆ ಆಯಿತು. ಫಿನಾಲೆಯಲ್ಲಿ ಕಾರ್ತಿಕ್ ಗೆಲುವು ಕಂಡರು. ಈಗ ಅವರು ಹೊಸ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಲೈವ್ ಬರೋ ಬಗ್ಗೆ ಮಾಹಿತಿ ನೀಡಿದ್ದಾರೆ. karthi_mahesh ಇನ್​ಸ್ಟಾಗ್ರಾಮ್ ಖಾತೆ ಮೂಲಕ ಇಂದು (ಫೆಬ್ರವರಿ 1) ಸಂಜೆ ಆರು ಗಂಟೆಗೆ ಲೈವ್ ಬರೋದಾಗಿ ಅವರು ಮಾಹಿತಿ ನೀಡಿದ್ದಾರೆ. ಈ ವೇಳೆ ಅಭಿಮಾನಿಗಳು ತಮ್ಮ ಪ್ರಶ್ನೆಗಳನ್ನು ಅವರ ಮುಂದೆ ಇಡಬಹುದು. ಇದಕ್ಕೆ ಕಾರ್ತಿಕ್ ಉತ್ತರ ನೀಡುತ್ತಾರೆ.

ಕಾರ್ತಿಕ್ ಮಾಡಿರೋ ಪೋಸ್ಟ್..

ಬಿಗ್ ಬಾಸ್ ಪೂರ್ಣಗೊಂಡ ಬೆನ್ನಲ್ಲೇ ರೀಯೂನಿಯನ್ ಆಗಿತ್ತು. ಈ ವೇಳೆ ನಮ್ರತಾ ಗೌಡ, ವಿನಯ್ ಗೌಡ, ಕಾರ್ತಿಕ್ ಮಹೇಶ್ ಹಾಗೂ ಸಂಗೀತಾ ಶೃಂಗೇರಿ ಒಂದೆಡೆ ಸೇರಿದ್ದರು. ಆದರೆ, ಎಲ್ಲಿಯೂ ಕಾರ್ತಿಕ್ ಹಾಗೂ ಸಂಗೀತಾ ಒಟ್ಟಿಗೆ ಇರೋ ಫೋಟೋ ಶೇರ್ ಮಾಡಿಕೊಂಡಿಲ್ಲ. ಬಿಗ್ ಬಾಸ್ ಮನೆಯಲ್ಲಿ ಕಾರ್ತಿಕ್ ಹಾಗೂ ಸಂಗೀತಾ ಮಧ್ಯೆ ಕಿರಿಕ್ ಆಗಿತ್ತು. ಇದು ಹೊರ ಬಂದ ಬಳಿಕವೂ ಮುಂದುವರಿದಂತೆ ಕಾಣುತ್ತಿದೆ. ಈ ಕಾರಣದಿಂದಲೇ ಇಬ್ಬರೂ ಒಟ್ಟಿಗೆ ಪೋಸ್ ಕೊಟ್ಟಿಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ಲೈವ್​ನಲ್ಲಿ ಪ್ರಶ್ನೆ ಎದುರಾಗೋ ಸಾಧ್ಯತೆ ಇದೆ.

ಇದನ್ನೂ ಓದಿ: ‘ಬಿಗ್ ಬಾಸ್ ಮನೆ ಈಗಲೂ ನಮ್ಮನ್ನು ಕಾಡುತ್ತದೆ’; ಹೊರಗೆ ಬಂದು ಅನುಭವ ಹೇಳಿಕೊಂಡ ಸಂಗೀತಾ ಶೃಂಗೇರಿ

ಈ ಬಾರಿ ಬಿಗ್ ಬಾಸ್​ನಲ್ಲಿ ವಿನಯ್ ಗೌಡ, ಸಂಗೀತಾ ಶೃಂಗೇರಿ, ನಮ್ರತಾ ಗೌಡ ಅವರಂಥ ಘಟಾನುಘಟಿ ಸ್ಪರ್ಧಿಗಳು ಆಗಮಿಸಿದ್ದರು. ಅವರನ್ನು ಹಿಂದಿಕ್ಕಿ ಕಾರ್ತಿಕ್ ಗೆಲುವು ಕಂಡಿದ್ದಾರೆ. ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ