AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಿಂದ ಬಂದ ನಾಲ್ಕು ದಿನಗಳ ಬಳಿಕ ಸಿಹಿ ಸುದ್ದಿ ಕೊಟ್ಟ ಕಾರ್ತಿಕ್ ಮಹೇಶ್

ಬಿಗ್ ಬಾಸ್ ಜನವರಿ 28ರಂದು ಕೊನೆ ಆಯಿತು. ಫಿನಾಲೆಯಲ್ಲಿ ಕಾರ್ತಿಕ್ ಗೆಲುವು ಕಂಡಿದ್ದಾರೆ. ಈಗ ಅವರು ಹೊಸ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಲೈವ್ ಬರೋ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವಿಚಾರ ಫ್ಯಾನ್ಸ್​ಗೆ ಖುಷಿ ನೀಡಿದೆ.

ಬಿಗ್ ಬಾಸ್​ನಿಂದ ಬಂದ ನಾಲ್ಕು ದಿನಗಳ ಬಳಿಕ ಸಿಹಿ ಸುದ್ದಿ ಕೊಟ್ಟ ಕಾರ್ತಿಕ್ ಮಹೇಶ್
ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on: Feb 01, 2024 | 2:48 PM

Share

ಕಾರ್ತಿಕ್ ಮಹೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ (BBK 10) ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆಗಿದ್ದ ಅವರು ಈಗ ‘ಬಿಗ್ ಬಾಸ್’ ವಿನ್ ಆಗಿ ಜನಪ್ರಿಯತೆ ಪಡೆದಿದ್ದಾರೆ. 50 ಲಕ್ಷ ರೂಪಾಯಿ ಜೊತೆ ಕಾರು ಹಾಗೂ ಬೈಕ್ ಅವರಿಗೆ ಗಿಫ್ಟ್ ಆಗಿ ಸಿಕ್ಕಿದೆ. ಬಿಗ್ ಬಾಸ್ ಮನೆಯಿಂದ ಹೊರ ಬಂದು ನಾಲ್ಕು ದಿನ ಕಳೆದಿದೆ. ಈ ಸಂದರ್ಭದಲ್ಲಿ ಅವರು ಫ್ಯಾನ್ಸ್​ಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್ ಖುಷಿಯಾಗಿದ್ದಾರೆ.

ಜನವರಿ 28ರಂದು ಬಿಗ್ ಬಾಸ್ ಕೊನೆ ಆಯಿತು. ಫಿನಾಲೆಯಲ್ಲಿ ಕಾರ್ತಿಕ್ ಗೆಲುವು ಕಂಡರು. ಈಗ ಅವರು ಹೊಸ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಲೈವ್ ಬರೋ ಬಗ್ಗೆ ಮಾಹಿತಿ ನೀಡಿದ್ದಾರೆ. karthi_mahesh ಇನ್​ಸ್ಟಾಗ್ರಾಮ್ ಖಾತೆ ಮೂಲಕ ಇಂದು (ಫೆಬ್ರವರಿ 1) ಸಂಜೆ ಆರು ಗಂಟೆಗೆ ಲೈವ್ ಬರೋದಾಗಿ ಅವರು ಮಾಹಿತಿ ನೀಡಿದ್ದಾರೆ. ಈ ವೇಳೆ ಅಭಿಮಾನಿಗಳು ತಮ್ಮ ಪ್ರಶ್ನೆಗಳನ್ನು ಅವರ ಮುಂದೆ ಇಡಬಹುದು. ಇದಕ್ಕೆ ಕಾರ್ತಿಕ್ ಉತ್ತರ ನೀಡುತ್ತಾರೆ.

ಕಾರ್ತಿಕ್ ಮಾಡಿರೋ ಪೋಸ್ಟ್..

ಬಿಗ್ ಬಾಸ್ ಪೂರ್ಣಗೊಂಡ ಬೆನ್ನಲ್ಲೇ ರೀಯೂನಿಯನ್ ಆಗಿತ್ತು. ಈ ವೇಳೆ ನಮ್ರತಾ ಗೌಡ, ವಿನಯ್ ಗೌಡ, ಕಾರ್ತಿಕ್ ಮಹೇಶ್ ಹಾಗೂ ಸಂಗೀತಾ ಶೃಂಗೇರಿ ಒಂದೆಡೆ ಸೇರಿದ್ದರು. ಆದರೆ, ಎಲ್ಲಿಯೂ ಕಾರ್ತಿಕ್ ಹಾಗೂ ಸಂಗೀತಾ ಒಟ್ಟಿಗೆ ಇರೋ ಫೋಟೋ ಶೇರ್ ಮಾಡಿಕೊಂಡಿಲ್ಲ. ಬಿಗ್ ಬಾಸ್ ಮನೆಯಲ್ಲಿ ಕಾರ್ತಿಕ್ ಹಾಗೂ ಸಂಗೀತಾ ಮಧ್ಯೆ ಕಿರಿಕ್ ಆಗಿತ್ತು. ಇದು ಹೊರ ಬಂದ ಬಳಿಕವೂ ಮುಂದುವರಿದಂತೆ ಕಾಣುತ್ತಿದೆ. ಈ ಕಾರಣದಿಂದಲೇ ಇಬ್ಬರೂ ಒಟ್ಟಿಗೆ ಪೋಸ್ ಕೊಟ್ಟಿಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ಲೈವ್​ನಲ್ಲಿ ಪ್ರಶ್ನೆ ಎದುರಾಗೋ ಸಾಧ್ಯತೆ ಇದೆ.

ಇದನ್ನೂ ಓದಿ: ‘ಬಿಗ್ ಬಾಸ್ ಮನೆ ಈಗಲೂ ನಮ್ಮನ್ನು ಕಾಡುತ್ತದೆ’; ಹೊರಗೆ ಬಂದು ಅನುಭವ ಹೇಳಿಕೊಂಡ ಸಂಗೀತಾ ಶೃಂಗೇರಿ

ಈ ಬಾರಿ ಬಿಗ್ ಬಾಸ್​ನಲ್ಲಿ ವಿನಯ್ ಗೌಡ, ಸಂಗೀತಾ ಶೃಂಗೇರಿ, ನಮ್ರತಾ ಗೌಡ ಅವರಂಥ ಘಟಾನುಘಟಿ ಸ್ಪರ್ಧಿಗಳು ಆಗಮಿಸಿದ್ದರು. ಅವರನ್ನು ಹಿಂದಿಕ್ಕಿ ಕಾರ್ತಿಕ್ ಗೆಲುವು ಕಂಡಿದ್ದಾರೆ. ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!